Sunday, December 14, 2025
Sunday, December 14, 2025

K. S. Eshwarappa ನೀತಿ ಸಂಹಿತೆ ಉಲ್ಲಂಘನೆ ಬಗ್ಗೆ ಈಶ್ವರಪ್ಪ ನೀಡಿದ ದೂರು ಆಧರಿಸಿ ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲು

Date:

K. S. Eshwarappa ಮಾಜಿ ಡಿಸಿಎಂ ಈಶ್ವರಪ್ಪ ಮೇ 7 ರಂದು ನೀಡಿದ್ದ ದೂರನ್ನು ಪೊಲೀಸ್ ಇಲಾಖೆ ಎಫ್ಐಆರ್ ದಾಖಲಿಸಿದೆ. ಲೋಕಸಭಾ ಚುನಾವಣೆಯ ಮತದಾನದ ದಿನದಂದು ಬೆಳಿಗ್ಗೆನೆ ಬಿಜೆಪಿ ಅಭ್ಯರ್ಥಿ ರಾಘವೇಂದ್ರರ ಪರ ಈಶ್ವರಪ್ಪನವರು ಮತಯಾಚಿಸಿದ ವಿಡಿಯೋವೊಂದು ವೈರಲ್ ಆಗಿತ್ತು.
ವಿಡಿಯೋ ವೈರಲ್ ಆದ ಬೆನ್ನಲ್ಲೇ, ಈಶ್ವರಪ್ಪನವರು ಕೆಂಡಮಂಡಲರಾಗಿದ್ದರು,‌ ಇಂತಹ ವಿಡಿಯೋವನ್ನು ರಾಘವೇಂದ್ರರಿಂದಲೇ ನಡೆದಿದ್ದು ಎಂದು ಆರೋಪಿಸಿದ್ದರು. ಇದು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಯಾಗಿದೆ. ಈ ಉಲ್ಲಂಘನೆಯ ಬೆನ್ನಲ್ಲೇ ಅಂದು ಮಧ್ಯಾಹ್ನವೇ ಈಶ್ವರಪ್ಪನವರು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರು.
ಅಂದು ಸಂಜೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಜಿ.ಕೆ.ಅವರನ್ನು ಭೇಟಿಯಾಗಿ ದೂರು ದಾಖಲಿಸಿದ್ದರು‌. ರಾಘವೇಂದ್ರ ಪರ ಮತಯಾಚಿಸಿದ ವಿಡಿಯೋವನ್ನು ಹರಿಬಿಟ್ಟವರ ಮೂಲ ಪರಿಶೀಲಿಸಿ ತಪ್ಪಿತಸ್ಥರಿಗೆ ಕಾನೂನು ಕ್ರಮ ಜರುಗಿಸುವಂತೆ ಮನವಿ ಮತ್ತು ವಿಡಿಯೋ, ಪೆನ್ ಡ್ರೈವ್ ಮೂಲಕ ದಾಖಲೆ ನೀಡಿದ್ದರು.
K. S. Eshwarappa ಈ ವಿಡಿಯೋ ವೈರಲ್ ಕುರಿತು ಈಶ್ವರಪ್ಪನವರು ಒಂದು ವಾರದ ಒಳಗೆ ಕ್ರಮ ಜರುಗಿಸಬೇಕು. ಅದರಲ್ಲೂ ಸಂಸದ ರಾಘವೇಂದ್ರರ ವಿರುದ್ಧವೇ ಕ್ರಮ ಜರುಗಿಸಬೇಕು ಎಂದು ಸುದ್ದಿಗೋಷ್ಠಿ ಮೂಲಕ ಆಗ್ರಹಿಸಿದ್ದರು‌. ಇದೇ ವೇಳೆ ಈಶ್ವರಪ್ಪನವರು ರಾಘವೇಂದ್ರ ವಿರುದ್ಧ ಎಫ್ಐಆರ್ ದಾಖಲಿಸಬೇಕೆಂದು ಆಗ್ರಹಿಸಿದ್ದರು.
ಆದರೆ ರಾಘವೇಂದ್ರರ ವಿರುದ್ಧ ಎಫ್ಐಆರ್ ದಾಖಲಾಗಿಲ್ಲ . ಬದಲಿಗೆ ಅಪರಿಚಿತ ವಿರುದ್ಧ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...