Thursday, June 18, 2026
Thursday, June 18, 2026

K. S. Eshwarappa ನೀತಿ ಸಂಹಿತೆ ಉಲ್ಲಂಘನೆ ಬಗ್ಗೆ ಈಶ್ವರಪ್ಪ ನೀಡಿದ ದೂರು ಆಧರಿಸಿ ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲು

Date:

K. S. Eshwarappa ಮಾಜಿ ಡಿಸಿಎಂ ಈಶ್ವರಪ್ಪ ಮೇ 7 ರಂದು ನೀಡಿದ್ದ ದೂರನ್ನು ಪೊಲೀಸ್ ಇಲಾಖೆ ಎಫ್ಐಆರ್ ದಾಖಲಿಸಿದೆ. ಲೋಕಸಭಾ ಚುನಾವಣೆಯ ಮತದಾನದ ದಿನದಂದು ಬೆಳಿಗ್ಗೆನೆ ಬಿಜೆಪಿ ಅಭ್ಯರ್ಥಿ ರಾಘವೇಂದ್ರರ ಪರ ಈಶ್ವರಪ್ಪನವರು ಮತಯಾಚಿಸಿದ ವಿಡಿಯೋವೊಂದು ವೈರಲ್ ಆಗಿತ್ತು.
ವಿಡಿಯೋ ವೈರಲ್ ಆದ ಬೆನ್ನಲ್ಲೇ, ಈಶ್ವರಪ್ಪನವರು ಕೆಂಡಮಂಡಲರಾಗಿದ್ದರು,‌ ಇಂತಹ ವಿಡಿಯೋವನ್ನು ರಾಘವೇಂದ್ರರಿಂದಲೇ ನಡೆದಿದ್ದು ಎಂದು ಆರೋಪಿಸಿದ್ದರು. ಇದು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಯಾಗಿದೆ. ಈ ಉಲ್ಲಂಘನೆಯ ಬೆನ್ನಲ್ಲೇ ಅಂದು ಮಧ್ಯಾಹ್ನವೇ ಈಶ್ವರಪ್ಪನವರು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರು.
ಅಂದು ಸಂಜೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಜಿ.ಕೆ.ಅವರನ್ನು ಭೇಟಿಯಾಗಿ ದೂರು ದಾಖಲಿಸಿದ್ದರು‌. ರಾಘವೇಂದ್ರ ಪರ ಮತಯಾಚಿಸಿದ ವಿಡಿಯೋವನ್ನು ಹರಿಬಿಟ್ಟವರ ಮೂಲ ಪರಿಶೀಲಿಸಿ ತಪ್ಪಿತಸ್ಥರಿಗೆ ಕಾನೂನು ಕ್ರಮ ಜರುಗಿಸುವಂತೆ ಮನವಿ ಮತ್ತು ವಿಡಿಯೋ, ಪೆನ್ ಡ್ರೈವ್ ಮೂಲಕ ದಾಖಲೆ ನೀಡಿದ್ದರು.
K. S. Eshwarappa ಈ ವಿಡಿಯೋ ವೈರಲ್ ಕುರಿತು ಈಶ್ವರಪ್ಪನವರು ಒಂದು ವಾರದ ಒಳಗೆ ಕ್ರಮ ಜರುಗಿಸಬೇಕು. ಅದರಲ್ಲೂ ಸಂಸದ ರಾಘವೇಂದ್ರರ ವಿರುದ್ಧವೇ ಕ್ರಮ ಜರುಗಿಸಬೇಕು ಎಂದು ಸುದ್ದಿಗೋಷ್ಠಿ ಮೂಲಕ ಆಗ್ರಹಿಸಿದ್ದರು‌. ಇದೇ ವೇಳೆ ಈಶ್ವರಪ್ಪನವರು ರಾಘವೇಂದ್ರ ವಿರುದ್ಧ ಎಫ್ಐಆರ್ ದಾಖಲಿಸಬೇಕೆಂದು ಆಗ್ರಹಿಸಿದ್ದರು.
ಆದರೆ ರಾಘವೇಂದ್ರರ ವಿರುದ್ಧ ಎಫ್ಐಆರ್ ದಾಖಲಾಗಿಲ್ಲ . ಬದಲಿಗೆ ಅಪರಿಚಿತ ವಿರುದ್ಧ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...