Tuesday, October 1, 2024
Tuesday, October 1, 2024

Basava Jayanthi ಬಸವಣ್ಣ,ನಮ್ಮ ನಡುವೆ ಇದ್ದ ಅನೇಕ ಸಾಂಸ್ಕೃತಿಕ ನಾಯಕರ ಆಶಯ ಅವೈದಿಕತೆಯ ದರ್ಶನ- ಎಚ್.ಟಿ.ಕೃಷ್ಣಮೂರ್ತಿ

Date:

Basava Jayanthi ಪ್ರತಿಯೊಂದು ಕ್ಷೇತ್ರಗಳಲ್ಲಿ ಹೊಂದುತ್ತಿರುವ ಈ ಹೊತ್ತಿನಲ್ಲಿ ಮಾನವೀಯತೆಯ ಪ್ರಗತಿಯು ಆಗಬೇಕಿದ್ದು, ಅಂತಹ ಪ್ರಗತಿಗೆ ಬಸವಣ್ಣನವರ ವಚನಗಳು ಪ್ರೇರಣೆ ನೀಡಲಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಿ.ಮಂಜುನಾಥ ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಶುಕ್ರವಾರ ಸಂಜೆ ಕಸಾಪ ಕಛೇರಿಯ ಆವರಣದಲ್ಲಿ ಬಸವೇಶ್ವರ ಜಯಂತಿ ಪ್ರಯುಕ್ತ ಬಸವಣ್ಣನವರ ಶ್ರಮ ಸಂಸ್ಕೃತಿ ಸಮ ಸಮಾಜ ಚಿಂತನೆ ಗೋಷ್ಟಿ ಉದ್ಘಾಟಿಸಿ ಮಾತನಾಡಿದರು.

ಸಮಸಮಾಜ ನಿರ್ಮಾಣ ಕಾರ್ಯದಲ್ಲಿ ಬಸವಣ್ಣನವರು ವಚನಗಳ ಮೂಲಕ ಪ್ರತಿಪಾದಿಸಿದ್ದರು. ಅದರೇ ಇವನಾರವ ಎನ್ನುವಾಗ ಇವ ನಮ್ಮವ ಎಂದು ಎಲ್ಲರನ್ನು ಸಮಾನವಾಗಿ ಕಾಣುವ ಕನಿಷ್ಟ ಸೌಜನ್ಯತೆಯನ್ನು ಕಳೆದುಕೊಳ್ಳುವ ಸಂದರ್ಭದಲ್ಲಿ ನಾವಿದ್ದೇವೆ. ಮಾನವೀಯತೆಯ ಪ್ರಗತಿಗಾಗಿ ಬಸವಣ್ಣನವರ ವಚನಗಳ ಸಾಲುಗಳ ಆಶಯಗಳನ್ನು ನಿಜವಾಗಿ ಅರ್ಥೈಸಿಕೊಳ್ಳುವ ಅವಶ್ಯಕತೆಯಿದೆ ಎಂದು ಹೇಳಿದರು.

Basava Jayanthi ಸಾಹಿತಿ ಹೆಚ್.ಟಿ.ಕೃಷ್ಣಮೂರ್ತಿ ಮಾತನಾಡಿ, ಇಂದು ಎಲ್ಲರ ಬಾಯಲ್ಲಿ ಬಸವಣ್ಣನವರ ವಚನಗಳ ಸಾಲು ಪ್ರತಿಧ್ವನಿಸುತ್ತದೆ. ಅದರೆ ಎಷ್ಟರ ಮಟ್ಟಿಗೆ ನಮ್ಮ ಬದುಕಿನಲ್ಲಿ ಆ ಸಾಲುಗಳು ಅನುಷ್ಟಾನಗೊಂಡಿದೆ ಎಂಬುದು ಚರ್ಚಿತ ವಿಚಾರ.

ಸಾಂಸ್ಕೃತಿಕ ನಾಯಕರಾದ ಬಸವಣ್ಣನವರು ಕೆಲವು ಮಾನ್ಯಗಳಿಗೆ ಮಾತ್ರ ಸೀಮಿತವಾಗಿದೆ. ನಮ್ಮ ನಡುವೆ ಇದ್ದ ಅನೇಕ ಸಾಂಸ್ಕೃತಿಕ ನಾಯಕರ ಆಶಯ ಅವೈದಿಕತೆಯ ದರ್ಶನ. ನಿರಂತರ ಹೋರಾಟದ ನಂತರವು ತುಳಿಯುವ ತುಳಿಸಿಕೊಳ್ಳುವ ಪದ್ದತಿಗಳು ಇಂದಿಗೂ ಉಸಿರಾಡುತ್ತಿವೆ. ಮನುಷ್ಯ ಚೈತನ್ಯವನ್ನು ಕುಗ್ಗಿಸುವಲ್ಲಿ ಜಾತಿ ವ್ಯವಸ್ಥೆ ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಇಂದಿಗೂ ಸಮಸಮಾಜದ ಅನಿವಾರ್ಯತೆಗಳನ್ನು ಮಾಡುವ ಅವಶ್ಯಕತೆಗಳು ಮೂಡುತ್ತಿರುವುದು ವಿಷಾದನೀಯ.

ನಿವೃತ್ತ ನೌಕರರ ಸಂಘದ ಅಧ್ಯಕ್ಷರಾದ ಡಿ.ಎಂ.ಚಂದ್ರಶೇಖರ ಅಧ್ಯಕ್ಷತೆ ವಹಿಸಿದ್ದರು. ಕಸಾಪ ಕಾರ್ಯದರ್ಶಿಗಳಾದ ಡಿ.ಗಣೇಶ್, ಎಂ.ಎಂ.ಸ್ವಾಮಿ, ತಾಲ್ಲೂಕು ಕಸಾಪ ಕಾರ್ಯದರ್ಶಿ ಕೆ.ಎಸ್.ಅನುರಾಧ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಪದಾಧಿಕಾರಿಗಳಾದ ಬಿ.ಟಿ.ಅಂಬಿಕಾ ಹಾಗೂ ನಳಿನಾಕ್ಷಿ ಬಸವಣ್ಣನವರ ವಚನಗಳನ್ನು ಹಾಡಿದರು. ಉಪನ್ಯಾಸಕಿ ಸುಜಾತ ನಿರೂಪಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...