Sunday, December 14, 2025
Sunday, December 14, 2025

Airavat Bus Fire Accident ಬೆಂಗಳೂರಿಗೆ ಸಾಗುತ್ತಿದ್ದ ಐರಾವತ ಬಸ್ ನಲ್ಲಿ ಬೆಂಕಿ ಆಕಸ್ಮಿಕ.ಪ್ರಯಾಣಿಕರೆಲ್ಲರೂ ಪಾರು

Date:

Airavat Bus Fire Accident ಶಿವಮೊಗ್ಗ ನಗರದಿಂದ ಮೈಸೂರಿಗೆ ತೆರಳುತ್ತಿದ್ದ ರಾಜ್ಯ ಸಾರಿಗೆ ಸಂಸ್ಥೆಯ ಐರಾವತ ಬಸ್‌ವೊಂದರಲ್ಲಿ ನಿನ್ನೆ ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಬಸ್
ಬಹುತೇಕ ಸುಟ್ಟು ಹೋದ ಘಟನೆ ಸಂಭವಿಸಿದೆ.

ಅದೃಷ್ಟವಶಾತ್‌ ಪ್ರಯಾಣಿಕರೆಲ್ಲರೂ ಪಾರಾಗಿದ್ದಾರೆ.
ನಿನ್ನೆ ತರಿಕೆರೆಯ ಅಜ್ಜಂಪುರ ಕ್ರಾಸ್‌ ಬಳಿ ತಡರಾತ್ರಿ 1.30 ರ ಸಮಯಕ್ಕೆ ಈ ಘಟನೆ ಸಂಭವಿಸಿದೆ. KA 01 f 9077 ಐರಾವತ ಬಸ್‌ ಶಿವಮೊಗ್ಗದಿಂದ ಪ್ರಯಾಣಿಕರನ್ನು ಕರೆದುಕೊಂಡು ಮೈಸೂರಿಗೆ ತೆರಳುತ್ತಿತ್ತು.

Airavat Bus Fire Accident ಬಸ್‌ನಲ್ಲಿ ಡ್ರೈವರ್‌, ಕಂಡಕ್ಟರ್‌ ಸೇರಿದಂತೆ ನಲವತ್ತು ಮಂದಿ ಪ್ರಯಾಣಿಸುತ್ತಿದ್ದರು.
ಅಜ್ಜಂಪುರ ಕ್ರಾಸ್‌ ಬಳಿಯಲ್ಲಿ ಬಸ್‌ನಲ್ಲಿ ಹೊಗೆ ಬರುತ್ತಿರುವುದನ್ನು ಗಮನಿಸಿದ ಡ್ರೈವರ್‌ ತಕ್ಷಣವೇ ವಾಹನವನ್ನು ಬದಿಗೆ ಹಾಕಿ ಪ್ರಯಾಣಿಕರಿಗೆ ಇಳಿಯುವಂತೆ ಸೂಚಿಸಿದ್ದಾರೆ. ಪ್ರಯಾಣಿಕರು ಸಹ ತಮ್ಮ ತಮ್ಮ ಲಗೇಜ್‌ನೊಂದಿಗೆ ಬಸ್‌ನಿಂದ ಇಳಿದಿದ್ದಾರೆ.

ಇದರ ನಡುವೆ ಡ್ರೈವರ್‌ ಬೆಂಕಿ ನಂದಿಸುವ ಪ್ರಯತ್ನ ಮಾಡಿದ್ದರಾದರೂ ಬಸ್‌ ಹಿಂಬದಿಯ ಇಂಜಿನ್‌ಗೆ ಬೆಂಕಿ ತಗುಲುತ್ತಿದ್ದರಿಂದ ಅದರ ತೀವ್ರತೆ ಹೆಚ್ಚಿತ್ತು. ಹೀಗಾಗಿ ಅಗ್ನಿಶಾಮಕ ಸಿಬ್ಬಂದಿಗೆ ಫೋನ್‌ ಮಾಡಿದ್ದಾರೆ.

ತಕ್ಷಣವೇ ಸ್ಥಳಕ್ಕೆ ಬಂದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಇನ್ನೂ ಘಟನೆಗೆ ಶಾರ್ಟ್‌ ಸರ್ಕಿಟ್‌ ಕಾರಣ ಎಂದು ಹೇಳಲಾಗಿದ್ದು, ಈ ಸಂಬಂಧ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Visvesvaraya Technological University ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗೆ ವಿಶೇಷ ಕಾರ್ಯಾಗಾರ

Visvesvaraya Technological University ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ "ಜ್ಞಾನ...

B.Y. Raghavendra ಶಿವಮೊಗ್ಗದಲ್ಲಿ ESIC ಉಪ-ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಬಿ.ವೈ.ರಾಘವೇಂದ್ರ ಮನವಿ

B.Y. Raghavendra ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಸಚಿವರಾದ ಸನ್ಮಾನ್ಯ ಡಾ....

CM Siddharamaih ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಸಭೆ

CM Siddharamaih ಸುವರ್ಣ ವಿಧಾನಸೌಧದಲ್ಲಿ ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ...