Friday, June 13, 2025
Friday, June 13, 2025

Hoarding mishap Mumbai ಬೃಹತ್ ಜಾಹಿರಾತು ಫಲಕ ಬಿದ್ದು 14 ಸಾವು.70ಕ್ಕೂ ಅಧಿಕ ಗಾಯಾಳುಗಳು

Date:

Hoarding mishap Mumbai ಸೋಮವಾರ ಸಂಜೆ ಮುಂಬೈಯಲ್ಲಿ ಬೀಸಿದ ಭಾರೀ ಗಾಳಿಗೆ ವಾಣಿಜ್ಯ ನಗರಿ ಮುಂಬೈನಲ್ಲಿ ಅವಘಡ ಸಂಭವಿಸಿದ್ದು, ಬೃಹತ್ ಜಾಹೀರಾತು ಫಲಕ ಕುಸಿದು 14 ಮಂದಿ ಸಾವನ್ನಪ್ಪಿದ್ದಾರೆ. 70ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಮುಂಬೈನ ಘಾಟ್‌ಕೋಪರ್ ಪ್ರದೇಶದ ಚೆಡ್ಡಾನಗರದಲ್ಲಿ 100 ಅಡಿಯ ಜಾಹೀರಾತು ಫಲಕ ಭಾರೀ ಗಾಳಿಗೆ ಪಕ್ಕದ ಪೆಟ್ರೋಲ್ ಬಂಕ್ ಮೇಲೆ ಬಿದ್ದಿದೆ. ಇದರಿಂದ ನೂರಾರು ಮಂದಿ ಅವಶೇಷಗಳಡಿ ಸಿಲುಕಿದ್ದು, ವಾಹನಗಳು ಜಖಂಗೊಂಡಿವೆ.

ಎರಡು ಎನ್‌ಡಿಆರ್‌ಎಫ್ ತಂಡಗಳು, ಮುಂಬೈ ಅಗ್ನಿಶಾಮಕದಳ ಮತ್ತು ಇತರ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಇದುವರೆಗೆ 14 ಮಂದಿ ಮೃತಪಟ್ಟಿರುವುದಾಗಿ ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಅಧಿಕಾರಿಗಳು ಖಚಿತಪಡಿಸಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಆಸ್ಪತ್ರೆಗೆ ದಾಖಲಾಗಿದ್ದ ಗಾಯಗಳುಗಳ ಪೈಕಿ ಇದುವರೆಗೆ 35 ಮಂದಿ ಬಿಡುಗಡೆಗೊಂಡಿದ್ದಾರೆ ಎಂದು ತಿಳಿದು ಬಂದಿದೆ..

Hoarding mishap Mumbai ಮಹಾರಾಷ್ಟ್ರ ಸರ್ಕಾರದ ಪೊಲೀಸ್ ವಸತಿ ವಿಭಾಗವು ಪೊಲೀಸ್ ಕಲ್ಯಾಣ ನಿಗಮಕ್ಕೆ ಗುತ್ತಿಗೆ ಪಡೆದಿರುವ ಪ್ಲಾಟ್‌ನಲ್ಲಿ ‘ಈಗೋ ಮೀಡಿಯಾ’ ಎಂಬ ಸಂಸ್ಥೆ ಬೃಹತ್ ಜಾಹೀರಾತು ಫಲಕ ನಿರ್ಮಿಸಿತ್ತು. ಕಟ್ಟಡದ ಆವರಣದಲ್ಲಿ ಈಗೋ ಮೀಡಿಯಾದ ನಾಲ್ಕು ಜಾಹೀರಾತು ಫಲಕಗಳಿತ್ತು. ಈ ಪೈಕಿ ಸೋಮವಾರ ಸಂಜೆ ಒಂದು ಫಲಕ ಕುಸಿದಿದೆ.

ಘಟನೆ ಸಂಬಂಧ ಈಗೋ ಮೀಡಿಯಾದ ಮಾಲೀಕರು ಮತ್ತು ಇತರರ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಎಲ್ಲಾ ನಾಲ್ಕು ಜಾಹೀರಾತು ಫಲಕಗಳನ್ನು ಸ್ಥಾಪಿಸಲು ಈಗೋ ಮೀಡಿಯಾ ಸಹಾಯಕ ಪೊಲೀಸ್ ಆಯುಕ್ತರ (ರೈಲ್ವೆ) ಅನುಮತಿ ಪಡೆದಿತ್ತು.

ಆದರೆ, ಫಲಕ ಸ್ಥಾಪಿಸುವ ಮುನ್ನ ಬಿಎಂಸಿಯಿಂದ ಯಾವುದೇ ನಿರಾಕ್ಷೇಪಣಾ ಪ್ರಮಾಣ ಪತ್ರ (ಎನ್‌ಒಸಿ) ಪಡೆದಿರಲಿಲ್ಲ ಎಂದು ತಿಳಿದು ಬಂದಿದೆ. ಈ ಹಿನ್ನೆಲೆ ರೈಲ್ವೆ ಪೊಲೀಸ್‌ನ ಎಸಿಪಿ ಮತ್ತು ರೈಲ್ವೆ ಕಮಿಷನರ್‌ಗೆ ಬಿಎಂಸಿ ನೋಟಿಸ್ ಜಾರಿ ಮಾಡಿದ್ದು, ರೈಲ್ವೇ ನೀಡಿರುವ ಎಲ್ಲಾ ಅನುಮತಿಗಳನ್ನು ರದ್ದುಗೊಳಿಸುವಂತೆ ಮತ್ತು ಜಾಹೀರಾತು ಫಲಕಗಳನ್ನು ತೆಗೆದು ಹಾಕುವಂತೆ ಸೂಚಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಅಪರಿಚಿತ ವ್ಯಕ್ತಿ ಸಾವು

Shivamogga Police ಶಿವಮೊಗ್ಗ ಬಿ.ಹೆಚ್ ರಸ್ತೆಯಲ್ಲಿರುವ ಮಿನಾಕ್ಷಿ ಭವನದ ಬಳಿ ಅಸ್ವಸ್ಥರಾಗಿ...

Shimoga-Bhadravati Urban Development Authority ಸುಂದರ ನಗರ ನಿರ್ಮಾಣಕ್ಕೆ ನಾಗರೀಕರು ಕೈ ಜೋಡಿಸಲು ಮನವಿ : ಹೆಚ್ ಎಸ್ ಸುಂದರೇಶ್

Shimoga-Bhadravati Urban Development Authority ಮಲೆನಾಡು ಭಾಗದಲ್ಲಿ ಹಸಿರು ಉಳಿಸಲು ಮತ್ತು...

CM Siddharamaih ಸಿಎಂ ಸಿದ್ಧರಾಮಯ್ಯ ಅವರಿಂದ ಕುಸುಮ್ ಸೌರೀಕರಣ ಯೋಜನೆಗೆ ಚಾಲನೆ

CM Siddharamaih ನಮ್ಮ ಸರ್ಕಾರ ಪ್ರತೀ ವರ್ಷ ₹19,000 ಕೋಟಿ...

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಭೆ

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಆರೋಗ್ಯ ಸಚಿವರು...