Monday, February 2, 2026
Monday, February 2, 2026

Dr. Kiran ಬೈಸಿಕಲ್ ನಲ್ಲಿ ಮನೆ ಭೇಟಿಗೆ ಬರುತ್ತಿದ್ದ ಜನಪ್ರಿಯ “ಕಿರಣ್ ಡಾಕ್ಟರ್” ಇನ್ನಿಲ್ಲ

Date:

Dr. Kiran ರಿಪ್ಪನ್ ಪೇಟೆ ಪಟ್ಟಣದಲ್ಲಿ ನಾಲ್ಕು ದಶಕಗಳ ಕಾಲ( ಕಿರಣ್ ಕ್ಲಿನಿಕ್ ) ಮೂಲಕ ವೈದ್ಯಕೀಯ ಸೇವೆ ಸಲ್ಲಿಸಿದ ಡಾಕ್ಟರ್ ಟಿ. ಆರ್. ಮಂಜುನಾಥ್ ರಾವ್ ಯಾನೆ
ಕಿರಣ್ ಡಾಕ್ಟರ್ (84) ಅವರು ಬುಧವಾರ ತೀರ್ಥಹಳ್ಳಿಯ ಪುತ್ರನ ಮನೆಯಲ್ಲಿ ಅಲ್ಪ ಕಾಲದ ಅನಾರೋಗ್ಯ
ದಿಂದ ನಿಧನರಾದರು.ಮೂಲತಃ ಚಿಕ್ಕ ಮಗಳೂರು ಜಿಲ್ಲೆ. ಬಾಳೆಹೊನ್ನೂರಿನವರಾದ ಇವರು ಮಿಲಿಟರಿಯಲ್ಲಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಪಡೆದು 1972 ರಲ್ಲಿ ರಿಪ್ಪನ್ ಪೇಟೆಯಲ್ಲಿ ಖಾಸಗಿ ಕ್ಲಿನಿಕ್ ತೆರೆದು ವೈದ್ಯಕೀಯ ವೃತ್ತಿ ಆರಂಭಿಸಿದರು. ಬೆಳ್ಳೂರು, ಮಸ್ಕಾನಿ, ಬಸವಾ ಪುರ, ಅರಸಾಳು, ಕಲ್ಲೂರು, ಜಂಬಳ್ಳಿ, ಜೇನಿ, ಹರತಾಳು ಸೇರಿದಂತೆ ಸುತ್ತ, ಮುತ್ತಲಿನ ಗ್ರಾಮೀಣ ಭಾಗದಲ್ಲಿನ ಜನರಿಗೆ ಬೈಸಿಕಲ್ ನಲ್ಲಿ ತೆರಳಿ ಕೇವಲ ಎರಡು ರೂ ನಲ್ಲಿ ಚುಚ್ಚು ಮದ್ದು ನೀಡುವ ಮೂಲಕ ಇವರು ಕಿರಣ್ ಡಾಕ್ಟರ್ ಎಂದು
ಪ್ರಖ್ಯಾತಿ ಹೊಂದಿದ್ದರು.
Dr. Kiran ನಂತರ ಇವರ ಮಗ ಗಣೇಶ್ ನಾಯಕ್ ರವರು ತೀರ್ಥಹಳ್ಳಿ ಯಲ್ಲಿ ಕಿರಣ್ ಹೆಲ್ತ್ ಕೇರ್ ಎಂಬ ನರ್ಸಿಂಗ್ ಹೋಂ ಪ್ರಾರಂಭ ಮಾಡಿದ ತರುವಾಯು, ಇವರ ವೈದ್ಯಕೀಯ ಸೇವೆ ಇಂದ ನಿವೃತ್ತಿ ಪಡೆದು ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರು ಇದ್ದು ವಿಶ್ರಾಂತಿ ಜೀವನ ನಡೆಸುತ್ತಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...