Tuesday, October 1, 2024
Tuesday, October 1, 2024

HD Kumaraswamy ಕಾಂಗ್ರೆಸ್ ಸರ್ಕಾರಕ್ಕೆ ಸತ್ಯಾಂಶ ಬೇಕಿಲ್ಲ. ಜೆಡಿಎಸ್& ದೇವೇಗೌಡರ ಕುಟುಂಬದ ವರ್ಚಸ್ಸು ಹಾಳು ಮಾಡಬೇಕಿತ್ತು-‌ಕುಮಾರಸ್ವಾಮಿ

Date:

HD Kumaraswamy ಪ್ರಜ್ವಲ್ ರೇವಣ್ಣ ಅವರು ಸಂಸದರಾಗಿದ್ದಾಗಲೇ ನಮ್ಮ ಸಂಪರ್ಕದಲ್ಲಿ ಇರಲಿಲ್ಲ. ಹಾಗಾಗಿರುವಾಗ ವಿದೇಶದಲ್ಲಿರುವ ಅವರು ನಮ್ಮ ಸಂಪರ್ಕಕ್ಕೆ ಸಿಗುವರೇ? ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು.

ಮೈಸೂರು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಸತ್ಯಾಂಶ ಬೇಕಾಗಿಲ್ಲ, ಜೆಡಿಎಸ್ ಹಾಗೂ ದೇವೇಗೌಡರ ಕುಟುಂಬದ ವರ್ಚಸ್ಸು ಹಾಳು ಮಾಡಬೇಕಾಗಿತ್ತು.

ಹಾಗಾಗಿ ಎಸ್.ಐ.ಟಿ.ಮೂಲಕ ಅನಾವಶ್ಯಕವಾಗಿ ಕೆಲವರನ್ನು ತನಿಖೆ ಮಾಡಿ ಹಿಂಸೆ ನೀಡುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ʼಎಸ್.ಐ.ಟಿ. ತನಿಖೆ ಪ್ರಾಮಾಣಿಕವಾಗಿ ತನಿಖೆ ನಡೆಸುತ್ತಿಲ್ಲ. ವಕೀಲ ದೇವೇರಾಜೇಗೌಡರನ್ನು ಬಂಧಿಸಿ, ಅವರಿಂದ ಪ್ರಕರಣ ದ ಬಗ್ಗೆ ಮಾಹಿತಿ ಪಡೆಯುವ ಬದಲು ಆಡಿಯೋ ಕ್ಲಿಪಿಂಗ್ ಪಡೆಯುವ ಪ್ರಯತ್ನ ಮಾಡುತ್ತಿದ್ದಾರೆ.

ಪ್ರಕರಣದಲ್ಲಿ ರಾಜ್ಯ ಸರ್ಕಾರ ಬಿದ್ದು ಹೋಗುವ ಭಯ ಕಾಂಗ್ರೆಸ್‌ ನಾಯಕರಿಗೆ ಕಾಡುತ್ತಿದೆ. ಹಾಗಾಗಿ ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಎಸ್.ಐ.ಟಿ.ಯಿಂದ ತನಿಖೆ ನಡೆಸುತ್ತಿದ್ದಾರೆʼ ಎಂದು ಹೇಳಿದರು.

HD Kumaraswamy “ತನಿಖೆಯ ಇಂಚಿಚೂ ವರದಿ ಗೃಹ ಸಚಿವರಿಗೆ ಹೋಗುತ್ತಿಲ್ಲ. ಬದಲಾಗಿ ಮಂಡ್ಯದ ಶಾಸಕರಿಗೆ ಹೋಗುತ್ತಿದೆ. ಹಾಗಾಗಿ ಆ ಶಾಸಕರು ವಾರದೊಳಗೆ ದೊಡ್ಡ ತಿಮಿಂಗಿಲ ಬಯಲಿಗೆ ಬರುತ್ತದೆ. ಅವರನ್ನು ಬಂಧಿಸಲಾಗುತ್ತದೆ ಎಂದು ಹೇಳಿದ್ದಾರೆ. ಗೃಹ ಸಚಿವರು ತಮ್ಮ ಪಕ್ಕದಲ್ಲೇ ದೊಡ್ಡ ತಿಮಿಂಗಿಲವನ್ನು ಕೂರಿಸಿಕೊಂಡಿದ್ದಾರೆ. ಅವರನ್ನು ಹಿಡಿದು ತನಿಖೆ ಮಾಡಿದರೆ ಸತ್ಯ ಹೊರಬರಲಿದೆ” ಎಂದು ನುಡಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...