Sunday, August 2, 2026
Sunday, August 2, 2026

HD Kumaraswamy ಕಾಂಗ್ರೆಸ್ ಸರ್ಕಾರಕ್ಕೆ ಸತ್ಯಾಂಶ ಬೇಕಿಲ್ಲ. ಜೆಡಿಎಸ್& ದೇವೇಗೌಡರ ಕುಟುಂಬದ ವರ್ಚಸ್ಸು ಹಾಳು ಮಾಡಬೇಕಿತ್ತು-‌ಕುಮಾರಸ್ವಾಮಿ

Date:

HD Kumaraswamy ಪ್ರಜ್ವಲ್ ರೇವಣ್ಣ ಅವರು ಸಂಸದರಾಗಿದ್ದಾಗಲೇ ನಮ್ಮ ಸಂಪರ್ಕದಲ್ಲಿ ಇರಲಿಲ್ಲ. ಹಾಗಾಗಿರುವಾಗ ವಿದೇಶದಲ್ಲಿರುವ ಅವರು ನಮ್ಮ ಸಂಪರ್ಕಕ್ಕೆ ಸಿಗುವರೇ? ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು.

ಮೈಸೂರು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಸತ್ಯಾಂಶ ಬೇಕಾಗಿಲ್ಲ, ಜೆಡಿಎಸ್ ಹಾಗೂ ದೇವೇಗೌಡರ ಕುಟುಂಬದ ವರ್ಚಸ್ಸು ಹಾಳು ಮಾಡಬೇಕಾಗಿತ್ತು.

ಹಾಗಾಗಿ ಎಸ್.ಐ.ಟಿ.ಮೂಲಕ ಅನಾವಶ್ಯಕವಾಗಿ ಕೆಲವರನ್ನು ತನಿಖೆ ಮಾಡಿ ಹಿಂಸೆ ನೀಡುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ʼಎಸ್.ಐ.ಟಿ. ತನಿಖೆ ಪ್ರಾಮಾಣಿಕವಾಗಿ ತನಿಖೆ ನಡೆಸುತ್ತಿಲ್ಲ. ವಕೀಲ ದೇವೇರಾಜೇಗೌಡರನ್ನು ಬಂಧಿಸಿ, ಅವರಿಂದ ಪ್ರಕರಣ ದ ಬಗ್ಗೆ ಮಾಹಿತಿ ಪಡೆಯುವ ಬದಲು ಆಡಿಯೋ ಕ್ಲಿಪಿಂಗ್ ಪಡೆಯುವ ಪ್ರಯತ್ನ ಮಾಡುತ್ತಿದ್ದಾರೆ.

ಪ್ರಕರಣದಲ್ಲಿ ರಾಜ್ಯ ಸರ್ಕಾರ ಬಿದ್ದು ಹೋಗುವ ಭಯ ಕಾಂಗ್ರೆಸ್‌ ನಾಯಕರಿಗೆ ಕಾಡುತ್ತಿದೆ. ಹಾಗಾಗಿ ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಎಸ್.ಐ.ಟಿ.ಯಿಂದ ತನಿಖೆ ನಡೆಸುತ್ತಿದ್ದಾರೆʼ ಎಂದು ಹೇಳಿದರು.

HD Kumaraswamy “ತನಿಖೆಯ ಇಂಚಿಚೂ ವರದಿ ಗೃಹ ಸಚಿವರಿಗೆ ಹೋಗುತ್ತಿಲ್ಲ. ಬದಲಾಗಿ ಮಂಡ್ಯದ ಶಾಸಕರಿಗೆ ಹೋಗುತ್ತಿದೆ. ಹಾಗಾಗಿ ಆ ಶಾಸಕರು ವಾರದೊಳಗೆ ದೊಡ್ಡ ತಿಮಿಂಗಿಲ ಬಯಲಿಗೆ ಬರುತ್ತದೆ. ಅವರನ್ನು ಬಂಧಿಸಲಾಗುತ್ತದೆ ಎಂದು ಹೇಳಿದ್ದಾರೆ. ಗೃಹ ಸಚಿವರು ತಮ್ಮ ಪಕ್ಕದಲ್ಲೇ ದೊಡ್ಡ ತಿಮಿಂಗಿಲವನ್ನು ಕೂರಿಸಿಕೊಂಡಿದ್ದಾರೆ. ಅವರನ್ನು ಹಿಡಿದು ತನಿಖೆ ಮಾಡಿದರೆ ಸತ್ಯ ಹೊರಬರಲಿದೆ” ಎಂದು ನುಡಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...