Thursday, June 18, 2026
Thursday, June 18, 2026

Bhadravati Police ಮುದ್ದಿನ ಅಜ್ಜಿಯನ್ನ ಹಣದಾಸೆಗೆ ಮೊಮ್ಮಗನೇ ಕೊಂದ ಘಟನೆ

Date:

Bhadravati Police ಹಣಕ್ಕಾಗಿ ಅಜ್ಜಿಯನ್ನೇ ಕೊಲೆ ಮಾಡಿರುವ ಘಟನೆ ಭದ್ರಾವತಿಯ ಅಂತರಗಂಗೆಯಲ್ಲಿ ನಡೆದಿದೆ.
ಅಂತರಗಂಗೆಯ ಭೋವಿಕೇರಿಯಲ್ಲಿ ರಾಮಕ್ಕ (72 ) ನನ್ನು ಮೊಮ್ಮಗನೇ ಹೊಂಚು ಹಾಕಿ ಕೊಲೆ ಮಾಡಿದ್ದಾನೆ. ಕೊಲೆ ಮಾಡಿ ಅಜ್ಜಿಯ ಸೊಂಟದಲ್ಲಿದ್ದ 20 ಸಾವಿರ ರೂ ಮತ್ತು ಕಿವಿ ಓಲೆ ಕಿತ್ತುಕೊಂಡು ಹೋಗಿದ್ದಾನೆ.

ಈ ಸಂಬಂಧ ಮೊಮ್ಮಗ ಚೇತನ್, ಭರತ್, ರೋಹಿತ್, ಆದರ್ಶ ವಿರುದ್ಧ ದೂರು ದಾಖಲಾಗಿದೆ.‌
ರಾಮಕ್ಕನವರ ಮಗ ಗೋವಿಂದ ಜೆಸಿಬಿ ಖರೀದಿಸಿದ್ದು, ಅದರ ಸಾಲದ ಕಂತು ಕಟ್ಟಲು ಅಮ್ಮನ ಬಳಿ 20 ಸಾವಿರ ಕಂತು ಹಣ ನೀಡಿ ಗೋವಿಂದ ದಾವಣಗೆರೆಗೆ ಹೋದಾಗ ಈ ಕೊಲೆ ಸಂಭವಿಸಿದೆ.

ಈ ಕೊಲೆಗೆ ಚೇತನ್, ಭರತ್, ರೋಹಿತ್, ಆದರ್ಶ ಕಾರಣವೆಂದು ಗೋವಿಂದ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಚೇತನ್ ರಾಮಕ್ಕನವರ ಮಗ ಹನುಮಂತಪ್ಪನ ಮಗ ಆಗಿದ್ದಾನೆ. ಮೈತುಂಬ ಸಾಲ ಮಾಡಿಕೊಂಡಿದ್ದ ಚೇತನ್ ಅಜ್ಜಿಯ ಬಳಿ ಹಣವಿರುವುದನ್ನು ಗಮನಿಸಿದ್ದನು.

Bhadravati Police ತಂದೆ ಹನುಮಂತಪ್ಪನವರನ್ನು ಸ್ನೇಹಿತರೊಂದಿಗೆ ಪಾರ್ಟಿಗೆ ಕಳುಹಿಸಿ ಅಜ್ಜಿ ಮಲಗಿದ್ದಾಗ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿರುವುದಾಗಿ ದೂರಿನಿಂದ ತಿಳಿದು ಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...