Monday, February 2, 2026
Monday, February 2, 2026

Rain in Shivamogga ಗುಡುಗು ಸಿಡಿಲ ಆರ್ಭಟದೊಂದಿಗೆ ಶಿವಮೊಗ್ಗಕ್ಕೆ ತಂಪೆರೆದ ಮಳೆರಾಯ

Date:

Rain in Shivamogga ಮಲೆನಾಡಿನಲ್ಲಿ ಕಳೆದ ಕೆಲ ದಿನಗಳಿಂದ ಚುರುಕುಗೊಂಡಿರುವ ಮುಂಗಾರು ಪೂರ್ವ ಮಳೆ ಮತ್ತಷ್ಟು ಬಿರುಸುಗೊಂಡಿದೆ. ಹಲವೆಡೆ ಮಳೆಯ ಅಬ್ಬರ ಜೋರಾಗಿದೆ.
ಈ ನಡುವೆ ಶಿವಮೊಗ್ಗ ನಗರದಲ್ಲಿಯೂ ವರ್ಷಧಾರೆ ಮುಂದುವರಿದಿದೆ. ಭಾನುವಾರ ಮಧ್ಯಾಹ್ನ ನಗರ ವ್ಯಾಪ್ತಿ ಸೇರಿದಂತೆ ಹೊರವಲಯದ ಪ್ರದೇಶಗಳಲ್ಲಿ ಗುಡುಗು, ಮಿಂಚು ಸಹಿತ ಸರಿಸುಮಾರು 1 ಗಂಟೆಗೂ ಅಧಿಕ ಕಾಲ ಧಾರಾಕಾರ ಮಳೆಯಾಯಿತು.
ಎಡೆಬಿಡದೆ ಸುರಿದ ಮಳೆಯಿಂದ ಹಲವೆಡೆ ರಸ್ತೆಗಳು ಕೆರೆಯಂತಾಗಿ ಪರಿವರ್ತಿತವಾಗಿದ್ದವು. ಹಲವೆಡೆ ಚರಂಡಿಗಳಲ್ಲಿ ಸರಾಗವಾಗಿ ಮಳೆ ನೀರು ಹರಿದು ಹೋಗಲು ಸಾಧ್ಯವಾಗದೆ ರಸ್ತೆಯ ಮೇಲೆಯೇ ಹರಿದು ಹೋಗುತ್ತಿದ್ದ ದೃಶ್ಯ ಕಂಡುಬಂದಿತು.
ಜೈಲ್ ರಸ್ತೆಯ ಮೇಲೆಯೇ ಭಾರೀ ಪ್ರಮಾಣದ ಮಳೆ ನೀರು ಹರಿಯಿತು. ಇದರಿಂದ ತಗ್ಗು ಪ್ರದೇಶಗಳಲ್ಲಿನ ಕಟ್ಟಡಗಳಿಗೆ ನೀರು ನುಗ್ಗಿದ ಮಾಹಿತಿಗಳು ಬಂದಿವೆ.

ಕೆರೆಗಳಿಗೆ ನೀರು :

Rain in Shivamogga ತೀವ್ರ ಸ್ವರೂಪದ ಬಿಸಿಲು ಹಾಗೂ ಮುಂಗಾರು ಮಳೆ ಕೊರತೆಯಿಂದ ಜಿಲ್ಲೆಯ ಹಲವೆಡೆ ಕೆರೆಕಟ್ಟೆಗಳು ನೀರಿಲ್ಲದೆ ಬರಿದಾಗಿದ್ದವು. ಆದರೆ ಪ್ರಸ್ತುತ ಬೀಳುತ್ತಿರುವ ಭಾರೀ ಮಳೆಯಿಂದ ಕೆರೆಕಟ್ಟೆಗಳಲ್ಲಿ ನೀರಿನ ಸಂಗ್ರಹ ಕಂಡುಬರಲಾರಂಭಿಸಿದೆ.

ಮುನ್ಸೂಚನೆ :

ಮುಂದಿನ ಕೆಲ ದಿನಗಳವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆಯಲ್ಲಿ ತಿಳಿಸಲಾಗಿದೆ.
ಒಟ್ಟಾರೆ ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಹಲವು ತಿಂಗಳುಗಳಿಂದ ವರ್ಷಧಾರೆ ಕಣ್ಮರೆಯಾಗಿತ್ತು. ಆದರೆ ಕಳೆದ ಕೆಲ ದಿನಗಳಿಂದ ಬೀಳುತ್ತಿರುವ ಮುಂಗಾರು ಪೂರ್ವ ಮಳೆಯು ನಾಗರೀಕರಲ್ಲಿ ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...