Sunday, August 2, 2026
Sunday, August 2, 2026

S.N. Channabasappa ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಶಾಸಕ ಚನ್ನಬಸಪ್ಪ

Date:

S.N. Channabasappa ಶಿವಮೊಗ್ಗ ಜಿಲ್ಲೆಯಲ್ಲಿ ಈ ಬಾರಿ ಮಳೆಗಾಲಕ್ಕೆ ಭರ್ಜರಿ ಆರಂಭ ಸಿಕ್ಕಿದೆ. ಕಳೆದ ಎರಡು ವಾರದಿಂದ ನಗರದಲ್ಲಿ ಬಿಡದೆ ಸತತವಾಗಿ ಮಳೆ ಧೋ ಎಂದು ಸುರಿದು ಬಿಸಿಲಿನ ಝಳಕ್ಕೆ ಬೆಂದ ಜನರಿಗೆ ಕೂಲ್ ವಾತವರಣವನ್ನು ನೀಡಿದೆ. ಬೇಸಿಗೆಯಲ್ಲಿ 40 ಡಿಗ್ರಿ ಉಷ್ಣಾಂಶ ತಲುಪಿದ್ದ ಶಿವಮೊಗ್ಗ ಸತತ ಮಳೆ ಕಾರಣದಿಂದ 27ಡಿಗ್ರಿಗೆ ಬಂದಿಳಿದಿದೆ.
ಮಳೆರಾಯನ ಎಫೆಕ್ಟ್ ನಿಂದ ಹಾನಿ ಅಷ್ಟಾಗಿ ಕಂಡು ಬರದೆ ಇದ್ದರೂ ನಿನ್ನೆ ಬಂದ ಮಳೆಗೆ ನಗರದಲ್ಲಿ ಒಂದಷ್ಟು ವಸತಿ ಪ್ರಮುಖ ಪ್ರದೇಶದ ಜನ ಪರಿತಪಿಸುವಂತಾಗಿದೆ.
ಸೋಮವಾರ ಬಂದ ಮಳೆಗೆ ಆರ.ಎಮ್.ಎಲ್ ನಗರದ ಜನ ಹೈರಾಣಾಗಿದ್ದಾರೆ.
ಬಿಡದಂತೆ ಬಿರುಸಾಗಿ ಬಂದ ಮಳೆಯ ಕಾರಣ ಡ್ರೈನೇಜ್ ತುಂಬಿ ಕಲುಷಿತ ನೀರು ಮನೆಗಳಿಗೆ ನುಗ್ಗಿದೆ ಪ್ರತಿ ಮಳೆಗಾಲದಲ್ಲಿ ಎದುರಾಗುವ ಮಳೆರಾಯನ ಕಾಟದಿಂದ ಪಾರು ಮಾಡಲು ಆಗದ ಪಾಲಿಕೆ ಆಡಳಿತ ಹಾಗು ಜನಪ್ರತಿನಿಧಿಗಳಿಗೆ ಸಾರ್ವಜನಿಕರು ಹಿಡಿ ಶಾಪ ಹಾಕುತ್ತಿದ್ದಾರೆ.

S.N. Channabasappa ಮಳೆ ಹಾನಿ ಪ್ರದೇಶಕ್ಕೆ ಶಾಸಕ ಎಸ್.ಎನ್ ಚನ್ನಬಸಪ್ಪ ಭೇಟಿ;

ಶಿವಮೊಗ್ಗ ನಗರ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಆರ್.ಎಮ್.ಎಲ್ ನಗರದಲ್ಲಿ ನೀರು ನುಗ್ಗಿದ ಪ್ರದೇಶಕ್ಕೆ ಮಳೆ ಹಾನಿ ಸ್ಥಳ ಹಾಗು ಮನೆಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ, ಇದರ ಕುರಿತು ಶೀಘ್ರ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟಂತ ಅಧಿಕಾರಿಗಳೊಂದಿಗೆ ಸೂಚನೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...