Saturday, December 6, 2025
Saturday, December 6, 2025

Ranganatha Swami ಭದ್ರಾವತಿ ಬಾಬಳ್ಳಿಯಲ್ಲಿ ಗಂಗಾಪೂಜೆಗೆ ತೆರಳಿದ್ದವರ ಮೇಲೆ ಹೆಜ್ಜೇನು ದಾಳಿ

Date:

Ranganatha Swami ಭದ್ರಾವತಿ ತಾಲೂಕಿನ ಬಾಬಳ್ಳಿಯಲ್ಲಿ ಗಂಗಾ ಪೂಜೆ ಮಾಡಲು ಹೋಗಿದ್ದವರ ಮೇಲೆ ಹೆಜ್ಜೇನು ದಾಳಿ ನಡೆಸಿದ ಘಟನೆ ಬುಧವಾರ ನಡೆದಿದೆ. ಘಟನೆಯಲ್ಲಿ ೫೦ಕ್ಕೂ ಹೆಚ್ಚು ಜನರ ಮೇಲೆ ಹೆಜ್ಜೇನು ದಾಳಿ ನಡೆಸಿದ್ದು, ಹಲವರನ್ನ ಶಿವಮೊಗ್ಗ ಹಾಗೂ ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಭದ್ರಾವತಿಯಲ್ಲಿ ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವ ನಡೆಯುತ್ತಿದೆ. ಇದಕ್ಕಾಗಿ ಸಿದ್ದತೆ ಮಾಡಿಕೊಳ್ಳಲಾಗುತ್ತಿತ್ತಷ್ಟೆ ಅಲ್ಲದೆ, ಪೂರ್ವ ವಿಧಿವಿಧಾನಗಳನ್ನು ನಡೆಸಲಾಗುತ್ತಿತ್ತು.
Ranganatha Swami ಅದರಂತೆ ಬಾಬಳ್ಳಿಯ ನಿವಾಸಿಗಳು ಗಂಗೆ ಪೂಜೆ ಮಾಡಲು ಹೊರಟಿದ್ದರು. ಈ ವೇಳೆ ಅಲ್ಲಿಯೇ ಪೊದೆಯೊಂದರಲ್ಲಿ ಕಟ್ಟಿದ್ದ ಹೆಜ್ಜೇನುಗಳು ಮೇಲಕ್ಕೆದ್ದು ಗಂಗೆಪೂಜೆಯಲ್ಲಿದ್ದವರ ಮೇಲೆ ದಾಳಿ ಮಾಡಿವೆ.
ವಿಶೇಷ ಅಂದರೆ, ಹೆಜ್ಜೇನುಗಳ ದಾಳಿಯಲ್ಲಿ ಎರಡು ವರ್ಷದ ಮಗು ಸಹ ಸಿಲುಕಬೇಕಿತ್ತು. ಅದೃಷ್ಟಕ್ಕೆ ಬಾಲಕನೊಬ್ಬ ಮಗುವನ್ನು ಎತ್ತಿಕೊಂಡು ರಕ್ಷಣೆ ಮಾಡಿದ್ದಾನೆ. ಆತನ ಮೇಲೆ ಹೆಜ್ಜೇನು ಬಿಗಿಯಾಗಿ ದಾಳಿ ನಡೆಸಿ ಕಚ್ಚಿದರೂ ಮಗುವನ್ನು ಬಿಡದೆ ರಕ್ಷಣೆ ಮಾಡಿದ್ದಾನೆ. ಬಾಲಕನನ್ನು ಸ್ಥಳೀಯರು ಶ್ಲಾಘಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...