Monday, February 2, 2026
Monday, February 2, 2026

Kumsi Police ಕೃಷಿ ಹೊಂಡದಲ್ಲಿ ಬಿದ್ದವನೂ ಪ್ರಾಣಬಿಟ್ಟ.ಉಳಿಸಲು ಹೋದವನೂ ಜೀವತೆತ್ತ

Date:

Kumsi Police ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಚೆನ್ನಳ್ಳಿ ಗ್ರಾಮದಲ್ಲಿ ಇಬ್ಬರು ಕೃಷಿ ಹೊಂಡಕ್ಕೆ ಬಿದ್ದು ಸಾವು ಕಂಡಿರುವ ಘಟನೆ ನಡೆದಿದೆ.

ಚೆನ್ನಳ್ಳಿಯಲ್ಲಿ ಕಾಲು ತೊಳೆಯಲು ಹೋದ ಒಬ್ಬ ಬಾಲಕನನ್ನ ರಕ್ಷಿಸಲು ಹೋದ ಯುವನೋರ್ವನು ಕೃಷಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಮಾಲತೇಶ್(28) ಹಾಗೂ ಮಹೇಶ್ ಪುತ್ರ ಅಭಯ್ (16) ಸಾವಿಗೀಡಾದ ದುರ್ಧೈವಿಗಳಾಗಿದ್ದಾರೆ.

ಅಶೋಕ್ ಎಂಬುವರ ಜಮೀನಿನಲ್ಲಿದ್ದ 10 ಅಡಿ ಆಳದ ಕೃಷಿ ಹೊಂಡದಲ್ಲಿ ಕಾಲು ತೊಳೆಯಲು ಹೋದಾಗ ಘಟನೆ ಸಂಭವಿಸಿದೆ. ಮೃತ ಅಭಯ್ ಅವರ ಜಮೀನಿನಲ್ಲಿ ಟ್ರಾಕ್ಟರ್ ನಿಂದ ನೆಗಿಲು ಹೊಡೆಯಲು ಮಾಲ್ತೇಶ್ ಜೊತೆ ಹೋಗಿದ್ದನು.
ಮಾಲ್ತೇಶ್ ಟ್ರಾಕ್ಟರ್ ಮಾಲೀಕ ಮತ್ತು ಡ್ರೈವರ್ ಆಗಿದ್ದಾರೆ. ಜಮೀನು ಹೂಡುವ ಜಾಗ ತೋರಿಸಲು ಅಭಯ್ ಜೊತೆಗೆ ತೆರಳಿದ್ದನು. ಅಭಯ್ ಶಿವಮೊಗ್ಗದ ಗಿರಿದೀಪಂ ಶಾಲೆಯ 9 ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ.
ಕಾಲು ತೊಳೆಯಲು ಹೋದ ಅಭಯ್ ನ ಕಾಲು ಜಾರಿದೆ.

Kumsi Police ಟ್ರ್ಯಾಕ್ಟರ್ ಮೇಲಿದ್ದ ಮಾಲ್ತೇಶ್ ಅಭಯ್ ನನ್ನ ರಕ್ಷಣೆ ಮಾಡಲು ಮುಂದಾಗಿದ್ದಾನೆ. ಕೃಷಿ ಹೊಂಡದಿಂದ ಮೇಲೆ ಬರಲು ಆಗದೇ ಹೊಂಡದಲ್ಲೇ ಇಬ್ವರೂ ಕೊನೆ ಉಸಿರು ಎಳೆದಿದ್ದಾರೆ.

ಮಾಲತೇಶ್ ಗೆ ಮದುವೆ ಆಗಿ ಕೇವಲ ಎಂಟು ತಿಂಗಳುಗಳು ಕಳೆದಿತ್ತು.
ಸಾರ್ವಜನಿಕರ ಸಹಾಯದಿಂದ ಇಬ್ಬರ ಮೃತದೇಹವನ್ನ ಪೊಲೀಸರು ಹೊರತೆಗೆದಿದ್ದಾರೆ. ಮೃತದೇಹದ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ರಾವಾನಿಸಲಾಗಿದೆ. ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...