Monday, December 15, 2025
Monday, December 15, 2025

Kumsi Police ಕೃಷಿ ಹೊಂಡದಲ್ಲಿ ಬಿದ್ದವನೂ ಪ್ರಾಣಬಿಟ್ಟ.ಉಳಿಸಲು ಹೋದವನೂ ಜೀವತೆತ್ತ

Date:

Kumsi Police ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಚೆನ್ನಳ್ಳಿ ಗ್ರಾಮದಲ್ಲಿ ಇಬ್ಬರು ಕೃಷಿ ಹೊಂಡಕ್ಕೆ ಬಿದ್ದು ಸಾವು ಕಂಡಿರುವ ಘಟನೆ ನಡೆದಿದೆ.

ಚೆನ್ನಳ್ಳಿಯಲ್ಲಿ ಕಾಲು ತೊಳೆಯಲು ಹೋದ ಒಬ್ಬ ಬಾಲಕನನ್ನ ರಕ್ಷಿಸಲು ಹೋದ ಯುವನೋರ್ವನು ಕೃಷಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಮಾಲತೇಶ್(28) ಹಾಗೂ ಮಹೇಶ್ ಪುತ್ರ ಅಭಯ್ (16) ಸಾವಿಗೀಡಾದ ದುರ್ಧೈವಿಗಳಾಗಿದ್ದಾರೆ.

ಅಶೋಕ್ ಎಂಬುವರ ಜಮೀನಿನಲ್ಲಿದ್ದ 10 ಅಡಿ ಆಳದ ಕೃಷಿ ಹೊಂಡದಲ್ಲಿ ಕಾಲು ತೊಳೆಯಲು ಹೋದಾಗ ಘಟನೆ ಸಂಭವಿಸಿದೆ. ಮೃತ ಅಭಯ್ ಅವರ ಜಮೀನಿನಲ್ಲಿ ಟ್ರಾಕ್ಟರ್ ನಿಂದ ನೆಗಿಲು ಹೊಡೆಯಲು ಮಾಲ್ತೇಶ್ ಜೊತೆ ಹೋಗಿದ್ದನು.
ಮಾಲ್ತೇಶ್ ಟ್ರಾಕ್ಟರ್ ಮಾಲೀಕ ಮತ್ತು ಡ್ರೈವರ್ ಆಗಿದ್ದಾರೆ. ಜಮೀನು ಹೂಡುವ ಜಾಗ ತೋರಿಸಲು ಅಭಯ್ ಜೊತೆಗೆ ತೆರಳಿದ್ದನು. ಅಭಯ್ ಶಿವಮೊಗ್ಗದ ಗಿರಿದೀಪಂ ಶಾಲೆಯ 9 ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ.
ಕಾಲು ತೊಳೆಯಲು ಹೋದ ಅಭಯ್ ನ ಕಾಲು ಜಾರಿದೆ.

Kumsi Police ಟ್ರ್ಯಾಕ್ಟರ್ ಮೇಲಿದ್ದ ಮಾಲ್ತೇಶ್ ಅಭಯ್ ನನ್ನ ರಕ್ಷಣೆ ಮಾಡಲು ಮುಂದಾಗಿದ್ದಾನೆ. ಕೃಷಿ ಹೊಂಡದಿಂದ ಮೇಲೆ ಬರಲು ಆಗದೇ ಹೊಂಡದಲ್ಲೇ ಇಬ್ವರೂ ಕೊನೆ ಉಸಿರು ಎಳೆದಿದ್ದಾರೆ.

ಮಾಲತೇಶ್ ಗೆ ಮದುವೆ ಆಗಿ ಕೇವಲ ಎಂಟು ತಿಂಗಳುಗಳು ಕಳೆದಿತ್ತು.
ಸಾರ್ವಜನಿಕರ ಸಹಾಯದಿಂದ ಇಬ್ಬರ ಮೃತದೇಹವನ್ನ ಪೊಲೀಸರು ಹೊರತೆಗೆದಿದ್ದಾರೆ. ಮೃತದೇಹದ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ರಾವಾನಿಸಲಾಗಿದೆ. ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...