Tuesday, April 22, 2025
Tuesday, April 22, 2025

Kumsi Police ಕೃಷಿ ಹೊಂಡದಲ್ಲಿ ಬಿದ್ದವನೂ ಪ್ರಾಣಬಿಟ್ಟ.ಉಳಿಸಲು ಹೋದವನೂ ಜೀವತೆತ್ತ

Date:

Kumsi Police ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಚೆನ್ನಳ್ಳಿ ಗ್ರಾಮದಲ್ಲಿ ಇಬ್ಬರು ಕೃಷಿ ಹೊಂಡಕ್ಕೆ ಬಿದ್ದು ಸಾವು ಕಂಡಿರುವ ಘಟನೆ ನಡೆದಿದೆ.

ಚೆನ್ನಳ್ಳಿಯಲ್ಲಿ ಕಾಲು ತೊಳೆಯಲು ಹೋದ ಒಬ್ಬ ಬಾಲಕನನ್ನ ರಕ್ಷಿಸಲು ಹೋದ ಯುವನೋರ್ವನು ಕೃಷಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಮಾಲತೇಶ್(28) ಹಾಗೂ ಮಹೇಶ್ ಪುತ್ರ ಅಭಯ್ (16) ಸಾವಿಗೀಡಾದ ದುರ್ಧೈವಿಗಳಾಗಿದ್ದಾರೆ.

ಅಶೋಕ್ ಎಂಬುವರ ಜಮೀನಿನಲ್ಲಿದ್ದ 10 ಅಡಿ ಆಳದ ಕೃಷಿ ಹೊಂಡದಲ್ಲಿ ಕಾಲು ತೊಳೆಯಲು ಹೋದಾಗ ಘಟನೆ ಸಂಭವಿಸಿದೆ. ಮೃತ ಅಭಯ್ ಅವರ ಜಮೀನಿನಲ್ಲಿ ಟ್ರಾಕ್ಟರ್ ನಿಂದ ನೆಗಿಲು ಹೊಡೆಯಲು ಮಾಲ್ತೇಶ್ ಜೊತೆ ಹೋಗಿದ್ದನು.
ಮಾಲ್ತೇಶ್ ಟ್ರಾಕ್ಟರ್ ಮಾಲೀಕ ಮತ್ತು ಡ್ರೈವರ್ ಆಗಿದ್ದಾರೆ. ಜಮೀನು ಹೂಡುವ ಜಾಗ ತೋರಿಸಲು ಅಭಯ್ ಜೊತೆಗೆ ತೆರಳಿದ್ದನು. ಅಭಯ್ ಶಿವಮೊಗ್ಗದ ಗಿರಿದೀಪಂ ಶಾಲೆಯ 9 ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ.
ಕಾಲು ತೊಳೆಯಲು ಹೋದ ಅಭಯ್ ನ ಕಾಲು ಜಾರಿದೆ.

Kumsi Police ಟ್ರ್ಯಾಕ್ಟರ್ ಮೇಲಿದ್ದ ಮಾಲ್ತೇಶ್ ಅಭಯ್ ನನ್ನ ರಕ್ಷಣೆ ಮಾಡಲು ಮುಂದಾಗಿದ್ದಾನೆ. ಕೃಷಿ ಹೊಂಡದಿಂದ ಮೇಲೆ ಬರಲು ಆಗದೇ ಹೊಂಡದಲ್ಲೇ ಇಬ್ವರೂ ಕೊನೆ ಉಸಿರು ಎಳೆದಿದ್ದಾರೆ.

ಮಾಲತೇಶ್ ಗೆ ಮದುವೆ ಆಗಿ ಕೇವಲ ಎಂಟು ತಿಂಗಳುಗಳು ಕಳೆದಿತ್ತು.
ಸಾರ್ವಜನಿಕರ ಸಹಾಯದಿಂದ ಇಬ್ಬರ ಮೃತದೇಹವನ್ನ ಪೊಲೀಸರು ಹೊರತೆಗೆದಿದ್ದಾರೆ. ಮೃತದೇಹದ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ರಾವಾನಿಸಲಾಗಿದೆ. ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Dr. Raj Kumar ಡಾ.ರಾಜ್ ಅಭಿನಯದ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ

Dr. Raj Kumar ವರನಟ ಡಾ ರಾಜ್ ಕುಮಾರ್ ರವರ ಜನ್ಮದಿನಾಚರಣೆ...

S.N.Chennabasappa ಜನಿವಾರ ತೆಗೆಸಿದ ಪ್ರಕರಣ, ಘಟನೆ‌ಮುಂದೆ ತಪ್ಪಿಸಲು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ವಿಪ್ರ ಸಂಘಟನೆಯ ಮನವಿ

S.N.Chennabasappa ಶಿವಮೊಗ್ಗದ ದುರ್ಗಿಗುಡಿಯ ಶ್ರೀ ರಾಘವೇಂದ್ರ ಸ್ವಾಮಿ ಮಠದಿಂದ ಜಿಲ್ಲಾಧಿಕಾರಿ...

Mathura Paradise ಏಪ್ರಿಲ್ 22, ಶಿವಮೊಗ್ಗದಲ್ಲಿ “ಹೋಟೆಲ್ ಉದ್ಯಮದಲ್ಲಿ ಹೊಸ ಪ್ರವೃತ್ತಿಗಳು” ಸಂವಾದ ಕಾರ್ಯಕ್ರಮ

Mathura Paradise ಶಿವಮೊಗ್ಗ ನಗರದ ಮಥುರಾ ಪ್ಯಾರಾಡೈಸ್ ಸಭಾಂಗಣದಲ್ಲಿ ಶಿವಮೊಗ್ಗ ಹೋಟೆಲ್...

Department of Animal Husbandry and Veterinary Services ಏಪ್ರಿಲ್ 21 ರಿಂದ ಜೂನ್ 4 ವರೆಗೆ ಜಾನುವಾರು ಲಸಿಕೆ ಅಭಿಯಾನ

Department of Animal Husbandry and Veterinary Services ಶಿವಮೊಗ್ಗ ಜಿಲ್ಲೆಯಲ್ಲಿ...