Monday, February 2, 2026
Monday, February 2, 2026

Akshay Co-Operative Society ಬಂಗಾರ ಅಡಮಾನ ಸಾಲ ಯೋಜನೆ ಉದ್ಘಾಟನೆ

Date:

Akshay Co-Operative Society ಅಕ್ಷಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಜಿಲ್ಲಾ ಸಂಘ ವತಿಯಿಂದ ಇಲ್ಲಿನ ಸಂಘದ ಕಚೇರಿಯಲ್ಲಿ ಬಂಗಾರದ ಅಡಮಾನ ಸಾಲದ ಯೋಜನೆಗೆ ಚಾಲನೆ ನೀಡಲಾಯಿತು.

ಸಹಕಾರಿ ಸಂಘ ಸ್ಥಾಪನೆಗೊಂಡು 12 ವರ್ಷ ಪೂರ್ಣಗೊಂಡಿದೆ. ಸಂಸ್ಥೆಯು ಲಾಭದಾಯಕವಾಗಿ ಸಾಗುತ್ತಿದ್ದು, ಷೇರುದಾರರಿಗೆ ಹಾಗೂ ಜನಸಾಮಾನ್ಯರಿಗೆ ಅನುಕೂಲಕರವಾಗಿ ಬಂಗಾರ ಅಡಮಾನ ಸಾಲದ ಯೋಜನೆಯನ್ನು ಜಾರಿಗೆ ತಂದಿದೆ. ಸಹಕಾರಿ ಸಂಘ ಅಧ್ಯಕ್ಷ ಡಾ. ಸುರೇಶ್ ಕೆ.ಬಾಳೆಗುಂಡಿ ಅವರು ಕಾರ್ಯಕ್ರಮ ಉದ್ಘಾಟಿಸಿದರು.

ಸಂಘದ ಉಪಧ್ಯಕ್ಷ ಜಿ.ಎಚ್.ಮಂಜುನಾಥ್, ಮಾಜಿ ಅಧ್ಯಕ್ಷ ಎಚ್.ಎನ್.ಮಹೇಂದ್ರ, ಮಾಜಿ ಉಪಾಧ್ಯಕ್ಷ ಡಿ.ಕಿಶೋರ್ ಕುಮಾರ್, ಸಂಘದ ನಿರ್ದೇಶಕರಾದ ಎಚ್‌ಕೆ..ಪುರುಶೋತ್ತಮ,ಎಚ್.ರಾಮಲಿಂಗಪ್ಪ, ಎಂ.ಶ್ರೀದೇವಿ, ಜಾನಕಿ ದೇವರಾಜ, ಮುಖ್ಯ ಕಾರ್ಯನಿರ್ವಹಣ ಅಧಿಕಾರಿ ಎಂ.ಆನಂದ್ ಸೇರಿ ಸಿಬ್ಬಂದಿ ವರ್ಗ ಇದ್ದರು.

Akshay Co-Operative Society ಬಂಗಾರದ ಅಡಮಾನ ಸಾಲದ ಯೋಜನೆಯನ್ನು ಷೇರುದಾರರು ಹಾಗೂ ಸದಸ್ಯರು ಹೆಚ್ಚಿನ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಮಾಹಿತಿಗೆ ದೂರವಾಣಿ ಸಂಖ್ಯೆ: ೦೮೧೮೨-೩೫೫೫೬೮ ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...