Tuesday, February 3, 2026
Tuesday, February 3, 2026

Rotary Shivamogga ಜಾದೂ ಕಲೆ ಅಳಿವಿನಂಚಿನಲ್ಲಿದೆ – ಜಾದೂಗಾರ್ ಪ್ರಶಾಂತ್ ಹೆಗಡೆ

Date:

Rotary Shivamogga ಪುರಾತನ ಕಲೆಗಳಲ್ಲಿ ಒಂದಾದ ಜಾದು ಕಲೆಯು ಅಳಿವಿನಂಚಿನಲ್ಲಿದ್ದು, ಜಾದು ಕಲೆಯನ್ನು ಉಳಿಸಿ ಬೆಳೆಸಬೇಕಿದೆ ಎಂದು ಜಾದುಗಾರ್ ಪ್ರಶಾಂತ್ ಎಸ್.ಹೆಗಡೆ ಹೇಳಿದರು.

ರಾಜೇಂದ್ರ ನಗರದ ರೋಟರಿ ಸಭಾಂಗಣದಲ್ಲಿ ಕುಟುಂಬ ಸಮ್ಮಿಲನ ಕಾರ್ಯಕ್ರಮದಲ್ಲಿ ಮಾತನಾಡಿ, ಕಲಾವಿದರಿಗೆ ಹಾಗೂ ವಿಶೇಷವಾಗಿ ಜಾದು ಕಲೆಗೆ ಸರ್ಕಾರ, ಸಂಘ ಸಂಸ್ಥೆಗಳು ಪ್ರೋತ್ಸಾಹಿಸಿ ಬೆಳೆಸಬೇಕು ಎಂದು ತಿಳಿಸಿದರು.

ಮೊಬೈಲ್ ಹಾವಳಿಯಿಂದ ಎಲ್ಲ ಕಲೆಗಳಿಗೂ ಕಂಟಕ ಎದುರಾಗಿದ್ದು, ಎಲ್ಲರಲ್ಲೂ ಆಸಕ್ತಿ ಕಡಿಮೆಯಾಗಿದೆ. ಕಲಿಯುವ ಆಸಕ್ತಿಯು ಇಲ್ಲ. ಆದರೆ ನಾನು ಜಾದು ಕಲೆಯನ್ನು ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರ ಮಟ್ಟದಲ್ಲಿ ಪ್ರದರ್ಶನ ನೀಡಿದ್ದೇನೆ ಎಂದರು.

ಬಾಲ್ಯದಿಂದಲೇ ಜಾದು ಕಲೆಯನ್ನು ಅಭ್ಯಾಸ ಮಾಡುತ್ತ ವೃತ್ತಿ ಜೀವನವನ್ನು ಮುಡುಪಾಗಿಟ್ಟು ಇಂದಿಗೂ ಸಹ ಮಾಯಾಲೋಕದಲ್ಲಿ ಸೇವೆಯನ್ನು ಅನೇಕ ಜನರು ಸಲ್ಲಿಸುತ್ತಿದ್ದಾರೆ ಎಂದು ಹೇಳಿದರು. ಇದೇ ವೇಳೆ ಜಾದುಗಾರ್ ಪ್ರಶಾಂತ್ ಎಸ್.ಹೆಗಡೆ ಅದ್ಭುತ ಜಾದು ಪ್ರದರ್ಶನ ನೀಡಿ ಎಲ್ಲರ ಮೆಚ್ಚುಗೆ ಗಳಿಸಿದರು.

ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಸತೀಶ್ ಚಂದ್ರ ಮಾತನಾಡಿ, ನಮ್ಮ ರೋಟರಿ ಸಂಸ್ಥೆ ಸಾಧಕರನ್ನು ಕಲಾವಿದರನ್ನು ಗೌರವಿಸಿ ಪ್ರೋತ್ಸಾಹ ನೀಡುತ್ತ ಬಂದಿದ್ದೇವೆ. ಕಲಾವಿದರು ಹಾಗೂ ಪ್ರತಿಭಾವಂತರನ್ನು ಗುರುತಿಸಿ ಗೌರವಿಸಬೇಕು. ಜಾದುಗಾರ್ ಪ್ರಶಾಂತ್ ಹೆಗಡೆ ಅವರ ಕಲಾಸೇವೆ ಅವೀರಸ್ಮರಣೀಯ ಎಂದು ಹೇಳಿದರು.

Rotary Shivamogga ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ಡಾ ಗುಡದಪ್ಪ ಕಸಬಿ, ಮಾಜಿ ಅಧ್ಯಕ್ಷ ಕೆ.ಜಿ.ರಾಮಚಂದ್ರರಾವ್, ವಸಂತ ಹೋಬಳಿದಾರ್, ಅರುಣ್ ದೀಕ್ಷಿತ್, ಡಾ. ಧನಂಜಯ, ಕಾರ್ಯದರ್ಶಿ ಕಿಶೋರ್, ಶಶಿಕಾಂತ್ ನಾಡಿಗ್, ಮಂಜುನಾಥ್, ಸಂತೋಷ್, ಶಂಕರ ಸರ್ಜಿ, ಶೇಷಗಿರಿ, ಇನ್ನರ್‌ವ್ಹೀಲ್ ಮಾಜಿ ಅಧ್ಯಕ್ಷೆ ಬಿಂದು ವಿಜಯಕುಮಾರ್ ಹಾಗೂ ರೋಟರಿ ಸದಸ್ಯರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...