Thursday, March 19, 2026
Thursday, March 19, 2026

Dr. H.B.Manjunath ಚಂಚಲತೆಯಿಂದ ಸತ್ಯ ಗ್ರಾಹ್ಯತೆ ಅಸಾಧ್ಯ. ಸತ್ಯವಿಲ್ಲದೇ ಪರಮಾತ್ಮನನ್ನು ಅರ್ಥೈಸಲು ಸಾಧ್ಯವಿಲ್ಲ- ಡಾ.ಎಚ್.ಬಿ.ಮಂಜುನಾಥ್

Date:

Dr. H.B.Manjunath ಚಂಚಲ ಮನಸ್ಸು ಸತ್ಯವನ್ನು ಗ್ರಹಿಸಲು ಸಾಧ್ಯವಿಲ್ಲ, ಸತ್ಯವನ್ನು ಗ್ರಹಿಸದೇ ಪರಮಾತ್ಮವನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಿಲ್ಲ, ಚಿತ್ತದ ಏಕಾಗ್ರತೆಯೇ ಇದಕ್ಕೆ ಪರಿಹಾರ ಎಂದು ಹಿರಿಯ ಪತ್ರಕರ್ತ ಡಾ. ಎಚ್ ಬಿ ಮಂಜುನಾಥ ಹೇಳಿದರು.

ಅವರು ಸಾಲಿಗ್ರಾಮ ಕೂಟ ಮಹಾ ಜಗತ್ತಿನ ದಾವಣಗೆರೆ ಅಂಗ ಸಂಸ್ಥೆ ವತಿಯಿಂದ ನಗರದ ಶ್ರೀ ಕೃಷ್ಣ ಕಲಾಮಂದಿರದಲ್ಲಿ ಏರ್ಪಾಡಾಗಿದ್ದ ಶ್ರೀ ನರಸಿಂಹ ಜಯಂತಿ ಕಾರ್ಯಕ್ರಮದ ಆಧ್ಯಾತ್ಮಿಕ ಉಪನ್ಯಾಸ ನೀಡುತ್ತಾ ಶಾಸ್ತ್ರಾಧ್ಯಯನ ವಾಗಲಿ, ಭಕ್ತಿ ಸಮರ್ಪಣೆಯೇ ಆಗಲಿ, ಭಗವದ್ ಸಾಕ್ಷಾತ್ಕಾರಕ್ಕಾಗಲಿ, ಸತ್ಯಾನ್ವೇಷಣೆಗಾಗಲಿ ಚಿತ್ತ ಏಕಾಗ್ರತೆ ಅವಶ್ಯ, ಇದು ಉಂಟಾದಾಗ ಯಾವುದೂ ನಮಗೆ ಕಷ್ಟ ಮತ್ತು ದುಸ್ತರ ಎನಿಸುವುದಿಲ್ಲ, ಅಧ್ಯಯನವೇ ಆಗಲಿ, ಧ್ಯಾನವೇ ಆಗಲಿ, ಆರಾಧನೆಯೇ ಆಗಲಿ, ಭಜನೆ, ಶ್ರವಣವೇ ಆಗಲಿ ಏಕಾಗ್ರತೆಯಿಂದ ಮಾತ್ರ ಮನನ ಸಾಧ್ಯ ಎಂಬುದನ್ನು ಸ್ವಾರಸ್ಯಕರ ಉದಾಹರಣೆಗಳ ಸಹಿತ ವಿವರಿಸಿದರು.

Dr. H.B.Manjunath ಕೂಟ ಮಹಾ ಜಗತ್ತು ದಾವಣಗೆರೆ ಅಂಗಸಂಸ್ಥೆಯ ನೂತನ ಅಧ್ಯಕ್ಷರಾದ ಮೋತಿ ಎನ್ ರಾಘವೇಂದ್ರ,ಪದಾಧಿಕಾರಿಗಳಾದ ಕೆ ಶಿವರಾಮ ಕಾರಂತ, ಬಾಲಕೃಷ್ಣ ವೈದ್ಯ, ಸುಬ್ರಹ್ಮಣ್ಯ ಹೊಳ್ಳ, ಶ್ರೀನಿವಾಸ ಕಾರಂತ, ಮೋತಿ ಪಿ ಪರಮೇಶ್ವರ್ ರಾವ್, ಕೇಶವಮೂರ್ತಿ ಕಾರಂತ, ಮೋತಿ ಆರ್ ಸುಬ್ರಮಣ್ಯ ಗುರು ಪ್ರಸಾದ್ ಮುಂತಾದವರು ಭಾಗವಹಿಸಿದ್ದು ರೋಹಿಣಿ ಹೊಳ್ಳ ಮತ್ತು ಸಂಗಡಿಗರು ಭಜನೆ ನೆರವೇರಿಸಿದರೆ ಹರೀಶ್ ಹೊಳ್ಳ ಮುಂತಾದವರು ಪೂಜೆಯನ್ನೂ, ಹರೀಶ್ ಐತಾಳ್ ತಂಡದವರು ಚೆಂಡೆ ಸೇವೆಯನ್ನೂ ನೆರವೇರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...