Monday, February 2, 2026
Monday, February 2, 2026

Forest Department ಶೆಟ್ಟಿ ಕೊಪ್ಪದ ಮನೆಯೊಂದರಲ್ಲಿ ನುಗ್ಗಿದ ಕಾಳಿಂಗ ಸರ್ಪ

Date:

Forest Department ಎನ್ ಆರ್ ಪುರ ತಾಲ್ಲೂಕಿನ ಶೆಟ್ಟಿಕೊಪ್ಪದ ಮನೆಯೊಂದರ ಅಡುಗೆ ಕೋಣೆಗೆ ಕಾಳಿಂಗ ಸರ್ಪವೊಂದು ನುಗ್ಗಿ ಆತಂಕ ಸೃಷ್ಟಿಸಿತ್ತು. ನಂತರ ಅದನ್ನು ರಕ್ಷಣೆ ಮಾಡಿ, ಮನೆಯವರ ಭಯ ನಿವಾರಣೆ ಮಾಡಲಾಗಿದೆ.
ನರಸಿಂಹರಾಜಪುರ ತಾಲೂಕಿನ ಶೆಟ್ಟಿಕೊಪ್ಪದಲ್ಲಿ 12ಅಡಿ ಉದ್ದದ ಕಾಳಿಂಗ ಸರ್ಪ ಡಿ. ಮಂಜುನಾಥ ಗೌಡ ಅವರ ಮನೆಯ ಅಡುಗೆ ಮನೆ ಸೇರಿಕೊಂಡಿತ್ತು.

ಹಾಗಾಗಿ ಕೆಲಕಾಲ ಆತಂಕ ಉಂಟಾಗಿತ್ತು,
ಮಂಜುನಾಥ ಗೌಡ ಅವರು ಸಂಜೆ ಮನೆಯಲ್ಲಿ ಸ್ನಾನ ಮಾಡಿ ಬಟ್ಟೆ ಹರಡಲು ಹಿಂಬದಿ ಬಾಗಿಲು ತೆಗೆಯುತ್ತಿದ್ದಂತೆ ದಿಢೀರನೇ ಮನೆ ಒಳಗೇ ನುಗ್ಗಿದ ಕಾಳಿಂಗಸರ್ಪ ಅಡುಗೆ ಮನೆ ಸೇರಿಕೊಂಡು ಅಲ್ಲೆ ಮಲಗಿಬಿಟ್ಟಿದೆ.
ಆನಂತರ ಮನೆಯವರು ಕುದುರೆ ಗುಂಡಿಯ ಉರಗ ಸಂರಕ್ಷಕ ಪಿ.ಜಿ.ಹರೀಂದ್ರ ಅವರಿಗೆ ಕರೆ ಮಾಡಿದ್ದಾರೆ. ಅವರು ಸ್ಥಳಕ್ಕೆ ಆ ಕಾಳಿಂಗ ಸರ್ಪವನ್ನು ಜಾಗರುಕವಾಗಿ ಹಿಡಿದ್ದಿದ್ದಾರೆ.

Forest Department ವಿಶೇಷ ಅಂದರೆ ಮನೆ ತನ್ನದೆಂಬಂತೆ ಒಳಗೆ ಬಂದಿದ್ದ ಕಾಳಿಂಗ ಯಾರಿಗೂ ಅಪಾಯವುಂಟು ಮಾಡಲಿಲ್ಲ. ಮೇಲಾಗಿ ತನ್ನ ಹಿಡಿಯುವಾಗಲು ಅದು ವಿರೋಧ ತೋರಲಿಲ್ಲ. ಸುರಕ್ಷಿತವಾಗಿ ಸೆರೆಯಾದ ಅದನ್ನು ಅರಣ್ಯ ಇಲಾಖೆ ಸಲಹೆಯಂತೆ ಅಭಯಾರಣ್ಯಕ್ಕೆ ಬಿಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...