Wednesday, January 21, 2026
Wednesday, January 21, 2026

Chikamagalur News ಬುದ್ಧಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ

Date:

Chikamagalur News ಬಾಳೆಹೊನ್ನೂರಿನಲ್ಲಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಗ್ಗೆ ವರದಿಯಾಗಿದೆ. ಮನೆಯವರು ಮೊಬೈಲ್‌ ನಲ್ಲಿ ಮುಳುಗಬೇಡ ಎಂದು ಬುದ್ದಿ ಹೇಳಿದ್ದಕ್ಕೆ ಯುವತಿ ಹೀಗೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. 

ಮೊಬೈಲ್‌ ಫೋನ್‌ನಲ್ಲಿ ಸದಾ ಮಾತನಾಡುತ್ತಿರುವುದಕ್ಕೆ ತಾಯಿಯೊಬ್ಬರು ತಮ್ಮ ಮಗಳಿಗೆ ಬೈದು ಬುದ್ದಿವಾದ ಹೇಳಿದ್ದರು. ಸಹಜವಾಗಿ ತಾಯಿಂದಿರು ಹೀಗೆ ಮಕ್ಕಳಿಗೆ ಹೇಳುವುದು ನಿಗಾ ಇಡುವುದು ಸಾಮಾನ್ಯ. ಇದೇ ವಿಚಾರಕ್ಕೆ ಬಂಡಿಹೊಳೆ ಗ್ರಾಮದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 

Chikamagalur News ಈಕೆ ಕೆಲ ದಿನಗಳಿಂದ ಯಾರೋ ಯುವಕನೊಂದಿಗೆ ಫೋನಿನಲ್ಲಿ ಮಾತನಾಡುತಿದ್ದರ ಬಗ್ಗೆ ತಾಯಿಗೆ ವಿಚಾರ ಗೊತ್ತಾಗಿ ಗದರಿಸಿ ಬುದ್ದಿ ಹೇಳಿದ್ದರಂತೆ. ಇದರಿಂದ ಯುವತಿ ಬೇಸರಗೊಂಡಿದ್ದಾಳೆ. ಅಲ್ಲದೆ ತಾಯಿ ಕೆಲಸಕ್ಕೆ ಹೋಗಿದ್ದಾಗ, ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೂಲಿ ಕೆಲಸದಿಂದ ವಾಪಸ್‌ ಬಂದ ವೇಳೆ ತಾಯಿಗೆ ವಿಷಯ ಗೊತ್ತಾಗಿದೆ. ಈ ಸಂಬಂಧ ಬಾಳೆ ಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಶಿವಮೊಗ್ಗ :ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ -3 ಕಛೇರಿಯಲ್ಲಿ...

S.N.Chennabasappa ವ್ಯಕ್ತಿತ್ವ ರೂಪಿಸಿಕೊಳ್ಳಲು ನಿಜಶರಣರ ವಚನ ಅಳವಡಿಸಿಕೊಳ್ಳಬೇಕು –ಎಸ್.ಎನ್. ಚನ್ನಬಸಪ್ಪ

S.N.Chennabasappa ಪ್ರತಿಯೊಬ್ಬ ವ್ಯಕ್ತಿ ತನ್ನ ಜೀವನದಲ್ಲಿ ಒಳ್ಳೆಯ ವ್ಯಕ್ತಿತ್ವ ರೂಪಿಸಿಕೊಳ್ಳಲು ನಿಜಶರಣರ...

Klive Special Article ದಾಖಲೆ ನಿರ್ಮಿಸಿದ ವೀಣೆಯ ಝೇಂಕಾರ

Klive Special Article ಶಿವಮೊಗ್ಗ ನಿಜವಾಗಿಯೂ ಸಾಂಸ್ಕೃತಿಕವಾಗಿ ಶ್ರೀಮಂತವಾದ ಊರು....

ಜ.24 ರಿಂದ ಮಲೆನಾಡು ಕರಕುಶಲ ಉತ್ಸವ – ಸಿರಿಧಾನ್ಯ ಮೇಳ-ಫಲ ಪುಷ್ಪ ಪ್ರದರ್ಶನ : ಹೇಮಂತ್ ಎನ್.

ಈ ಬಾರಿ ಹಲವಾರು ವಿಶೇಷತೆಗಳೊಂದಿಗೆ ಮಲೆನಾಡು ಕರಕುಶಲ ಉತ್ಸವ ಸಿರಿಧಾನ್ಯ...