Tuesday, October 1, 2024
Tuesday, October 1, 2024

Vijay Technocrats ತಂತ್ರಜ್ಞಾನ ಮುಂದುವರೆದಂತೆ ಸಂಸ್ಕೃತಿ ಆಸಕ್ತಿ ಕಡಿಮೆಯಾಗುತ್ತಿದೆ- ಹೆಚ್.ಕೆ.ಲೋಕೇಶ್

Date:

Vijay Technocrats ದೇಶದ ಆರ್ಥಿಕತೆಗೆ ಫೌಂಡ್ರಿ ಉದ್ಯಮದ ಕೊಡುಗೆ ಅಪಾರ ಎಂದು ಎಯುಎಂಎ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಬೆಂಗಳೂರಿನ ಸಪ್ಲೆ ಚೈನ್ ಮ್ಯಾನೇಜ್‌ಮೆಂಟ್ ಮುಖ್ಯಸ್ಥ ಸೌರೆನ್ ಪಾಲ್ ಹೇಳಿದರು.
ಮಲ್ನಾಡ್ ಶೈರ್ ಇಕೋ ರೆಸಾರ್ಟ್ ನಲ್ಲಿ ಆಯೋಜಿಸಿದ್ದ 63ನೇ ಐಐಎಫ್ ದಕ್ಷಿಣ ವಲಯದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮಾತನಾಡಿ, ಭಾರತ ಸರ್ಕಾರದ ಮುಂದಿನ ಅಭಿವೃದ್ಧಿ ಯೋಜನೆಗಳಿಂದ ಕೈಗಾರಿಕಾ ಉತ್ಪಾದನಾ ವಲಯಕ್ಕೆ ಉತ್ತಮ ಬೇಡಿಕೆ ಸೃಷ್ಟಿಯಾಗಲಿ ಎಂದು ತಿಳಿಸಿದರು.
ಕೈಗಾರಿಕಾ ಕ್ಷೇತ್ರದ ತಯಾರಿಕಾ ವಲಯದ ಸ್ಪರ್ಧಾತ್ಮಕತೆ, ಪರಿಣಾಮಕಾರಿ ವೆಚ್ಚದಲ್ಲಿ ಉತ್ಪಾದನೆ, ಉತ್ತಮ ಗುಣಮಟ್ಟದ ಕ್ಯಾಸ್ಟಿಂಗ್ ತಯಾರಿಕೆ ಹಾಗೂ ಸಮಯಕ್ಕೆ ಸರಿಯಾಗಿ ಸರಬರಾಜು ಮಾಡುವ ಬದ್ಧತೆ ಬಗ್ಗೆ ಉದ್ಯಮಿಗಳು ಗಮನ ವಹಿಸಬೇಕು ಎಂದರು.
ಐಐಎಫ್ ರಾಷ್ಟ್ರೀಯ ಅಧ್ಯಕ್ಷ ಡಿ.ಎಸ್.ಚಂದ್ರಶೇಖರ್ ಮಾತನಾಡಿ, ದೇಶದ ಕೈಗಾರಿಕಾ ವಲಯದ ಬೆಳವಣಿಗೆಯಲ್ಲಿ ಐಐಎಫ್ ಮಹತ್ತರ ಪಾತ್ರ ವಹಿಸಿದ್ದು, ಐಐಎಫ್ ದಕ್ಷಿಣ ವಲಯದ ಹೊಸ ತಂಡ ದೇಶದ ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚಿನ ಕೊಡುಗೆ ನೀಡಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಐಐಎಫ್ ದಕ್ಷಿಣ ವಲಯದ 2024-25ನೇ ಸಾಲಿನ ಅಧ್ಯಕ್ಷರಾಗಿ ಶಿವಮೊಗ್ಗದ ವಿಜಯ್ ಟೆಕ್ನೋಕ್ರಾಟ್ಸ್ ಪ್ರೈವೇಟ್ ಲಿಮಿಟೆಡ್ ಕಾರ್ಯನಿರ್ವಾಹಕ ನಿರ್ದೇಶಕ ಡಿ.ಜಿ.ಬೆನಕಪ್ಪ ಅಧಿಕಾರ ಸ್ವೀಕರಿಸಿದರು.
ಐಐಎಫ್ ದಕ್ಷಿಣ ವಲಯ ನೂತನ ಅಧ್ಯಕ್ಷ ಡಿ.ಜಿ.ಬೆನಕಪ್ಪ ಮಾತನಾಡಿ, ಸೇವೆ ಹಾಗೂ ಭವಿಷ್ಯದ ತಂತ್ರಜ್ಞಾನ, ಉತ್ಪಾದನೆಯಲ್ಲಿ ಹೊಸ ಪರಿಕಲ್ಪನೆ, ಫೌಂಡ್ರಿ ಉದ್ಯಮದ ಸದಸ್ಯರಿಗೆ ಸಹಕಾರಿಯಾಗುವ ತಾಂತ್ರಿಕ ಕಾರ್ಯಕ್ರಮಗಳು, ಹಸರೀಕರಣ, ಕಾರ್ಯಪದ್ಧತಿಯ ಸುಧಾರಣೆ, ರಫ್ತು ತರಬೇತಿ, ಯುವ ಉದ್ಯಮಿಗಳು/ವಿದ್ಯಾರ್ಥಿಗಳಿಗೆ ತಯಾರಿಕಾ ವಲಯಕ್ಕೆ ಆಕರ್ಷಿಸಲು ಪ್ರೇರಣೆ ನೀಡುವುದು, ಉದ್ಯೋಗಿಗಳಿಗೆ ಪ್ರತಿಭೆ, ಕಾರ್ಯತತ್ಪರತೆ ಹಾಗೂ ಸೃಜನಶೀಲತೆ ಹೆಚ್ಚಿಸಲು ಶಿಕ್ಷಣ ಮತ್ತು ತರಬೇತಿ, ಪ್ರಮಾಣಪತ್ರ ನೀಡುವುದು ಹಾಗೂ ಇನ್ನಿತರೆ ಉಪಯೋಗಿ ಕಾರ್ಯಕ್ರಮಗಳ ಮುಖಾಂತರ ಸದಸ್ಯರ ಸೇವೆಗೆ ಹಾಗೂ ಐಐಎಫ್ ಬೆಳವಣಿಗೆಗೆ ಪ್ರಯತ್ನ ಮಾಡಲು ಬದ್ಧ ಎಂದು ತಿಳಿಸಿದರು.
Vijay Technocrats ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಹೈದ್ರಾಬಾದ್ ಹಾಗೂ ಕೇರಳದ ರಾಜ್ಯಗಳಿಂದ 250ಕ್ಕೂ ಹೆಚ್ಚು ಕೈಗಾರಿಕಾ ಪ್ರತಿನಿಧಿಗಳು, ದಕ್ಷಿಣ ವಲಯದ ಹಾಗೂ ಶಾಖೆಗಳ ಮಾಜಿ ಅಧ್ಯಕ್ಷರು, ಶಿವಮೊಗ್ಗದ ಮಾಚೇನಹಳ್ಳಿ, ಸಾಗರ ರಸ್ತೆ ಮತ್ತು ಕಲ್ಲೂರು ಮಂಡ್ಲಿ ಕೈಗಾರಿಕಾ ವಸಹಾತುವಿನ ಅಧ್ಯಕ್ಷರು, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಹಾಗೂ ಕೈಗಾರಿಕಾ ಸಂಘದ ಅಧ್ಯಕ್ಷಎನ್‌.ಗೋಪಿನಾಥ್‌, ವಸಂತ ಹೋಬಳಿದಾರ್‌, ಜಿ.ವಿಜಯಕುಮಾರ್‌, ಬಿ.ಗೋಪಿನಾಥ್‌, ರಮೇಶ್‌ ಹೆಗಡೆ, ಎಂ.ರಾಜು, ಡಿ.ಎಂ.ಶಂಕರಪ್ಪ, ಕೈಗಾರಿಕೋದ್ಯಮಿ ಎಸ್.ರುದ್ರೇಗೌಡ, ದಾಮೋದರ ಬಾಳಿಗ, ಎಂ.ರಾಜು, ಎಂ.ಹಾಲಪ್ಪ, ಡಿ.ಬಿ.ಅಶೋಕ್, ಡಿ.ಜಿ.ಬೆನಕಪ್ಪ, ಡಿ.ಜಿ.ಶಾಂತನಗೌಡ, ಮಹಾವೀರ ಜೈನ್, ರೋಟರಿ ಶಿವಮೊಗ್ಗ ಸದ್ಯಸರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...