Saturday, December 6, 2025
Saturday, December 6, 2025

D.K. Shivakumar ಕರ್ನಾಟಕ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ವಿಶೇಷ ಮಾಹಿತಿ

Date:

D.K. Shivakumar ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರನ್ನು ಕೆಪಿಸಿಸಿ ಕಚೇರಿಯಲ್ಲಿ ಭೇಟಿಮಾಡಿ ಅವರ ಸಮಸ್ಯೆಗಳಿಗೆ ಸ್ಪಂದಿಸಲು ನಾನು, ಮುಖ್ಯಮಂತ್ರಿಗಳು ಹಾಗೂ ಸಂಪುಟದ ಸಚಿವರು ತಿಂಗಳಲ್ಲಿ ಅರ್ಧ ದಿನವನ್ನು ಸಂಪೂರ್ಣವಾಗಿ ಮೀಸಲಿಡುತ್ತಿದ್ದೇವೆ. ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಈ ನಿರ್ಧಾರಕ್ಕೆ ಬಂದಿದ್ದೇವೆ. ಪಕ್ಷದ ಇಬ್ಬರು ಅಥವಾ ಮೂವರು ಪದಾಧಿಕಾರಿಗಳಿಗೆ ಈ ಜವಾಬ್ದಾರಿವಹಿಸಲಾಗುವುದು. ಪಕ್ಷದ ಕಾರ್ಯಕರ್ತರು ಒಂದು ವಾರ ಮುಂಚಿತವಾಗಿ ತಮ್ಮ ಸದಸ್ಯತ್ವ ಪ್ರಮಾಣಪತ್ರವನ್ನು ನೀಡಿ D.K. Shivakumar ಯಾವ ಸಚಿವರನ್ನು ಭೇಟಿಯಾಗಬೇಕೆಂದು ಲಿಖಿತ, SMS ಅಥವಾ ಇಮೇಲ್‌ ಮೂಲಕ ನೋಂದಣಿ ಮಾಡಿಕೊಳ್ಳಬೇಕು. ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು. ಇದು ರಾಜ್ಯಮಟ್ಟದಿಂದ ಬ್ಲಾಕ್‌ಮಟ್ಟದವರೆಗಿನ ಕಾರ್ಯಕರ್ತರಿಗೆ ಮಾತ್ರ ನೀಡಿರುವ ಅವಕಾಶವಾಗಿದೆ. ಮಾಜಿ ಸಚಿವರಿಗೆ, ಶಾಸಕರಿಗೆ ಈ ಭೇಟಿಯ ಅವಕಾಶ ಇರುವುದಿಲ್ಲ. ಕಾರ್ಯಕರ್ತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕಾಗಿ ವಿನಂತಿಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಮ್ಮ X ಖಾತೆ ಸಂದೇಶದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...