Monday, February 2, 2026
Monday, February 2, 2026

BSNL ನೆಟ್ ವರ್ಕ್ ಸಮಸ್ಯೆ: ಹೊಸನಗರ ತಾಲ್ಲೂಕು ಮತ್ತಿಮನೆಯಲ್ಲಿ ಟವರ್ ಏರಿ ಗ್ರಾಮಸ್ಥರ ಪ್ರತಿಭಟನೆ

Date:

BSNL ಮೊಬೈಲ್ ನೆಟ್‌ವರ್ಕ್ ಸಮಸ್ಯೆಗೆ ಆಕ್ರೋಶಗೊಂಡ ಗ್ರಾಮಸ್ಥರು ಟವರ್ ಏರಿ ಪ್ರತಿಭಟನೆ ನಡೆಸಿದ ಘಟನೆ ಹೊಸನಗರ ತಾಲೂಕಿನ ಮತ್ತಿಮನೆಯಲ್ಲಿ ನಡೆದಿದೆ.

ಹೊಸನಗರ ತಾಲೂಕಿನ ಮತ್ತಿಮನೆ ಗ್ರಾಪಂ ಹಿಂಭಾಗದ ಬಿಎಸ್‌ಎನ್‌ಎಲ್ ಟವರ್ ಸಮೀಪದಲ್ಲಿ ಜಮಾಯಿಸಿದ ಗ್ರಾಮಸ್ಥರು ಸಮಸ್ಯೆ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರ ಹೋಬಳಿ ಕಾಂಗ್ರೆಸ್ ಅಧ್ಯಕ್ಷ, ಬ್ಲಾಕ್ ಕಾರ್ಯದರ್ಶಿ ಕುಮಾರ್ ಹಿಲ್ಕುಂಜಿ, ಅಡಗೋಡಿ ಸ್ವಾಮಿ, ತರುವೆ ಕೃಷ್ಣ ಮತ್ತು ಇತರರು ಟವರ್ ಏರಿ ಅಲ್ಲೇ ಕುಳಿತು ಪ್ರತಿಭಟಿಸಿದರು. ಸಮಸ್ಯೆ ಬಗೆಹರಿಯುವ ತನಕ ಕೆಳಗೆ ಇಳಿಯುವುದಿಲ್ಲ ಎಂದು ಪಟ್ಟುಹಿಡಿದ ಘಟನೆ ನಡೆದಿದೆ.

ಸಾಕಷ್ಟು ವರ್ಷಗಳಿಂದ ಮೊಬೈಲ್ ಟವರ್ ಇದ್ದರೂ ನೆಟ್‌ವರ್ಕ್ ಸಮಸ್ಯೆ ಬಾಧಿಸುತ್ತಿದೆ. ವಿದ್ಯುತ್ ಹೋಗುತ್ತಿದ್ದಂತೆ ನೆಟ್‌ವರ್ಕ್ ಸಮಸ್ಯೆ ಎದುರಾಗುತ್ತಿದೆ. ಜನರೇಟರ್ ಕೆಟ್ಟು ಹೋಗಿದ್ದರು ದುರಸ್ತಿ ಇಲ್ಲ ಅಧಿಕಾರಿಗಳಿಗೆ ಮನವಿ ಮಾಡಿದರೆ ಯಾವುದೇ ಉಪಯೋಗವಿಲ್ಲ. ನಿರ್ವಹಣೆಯನ್ನು ಖಾಸಗಿ ಕಂಪನಿಗೆ ನೀಡಲಾಗಿದೆ. ಆದರೆ ಅವರು ಟವರ್ ಹತ್ತಿರ ಬರೋದೇ ಇಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ವಿಷಯ ತಿಳಿದ ಬಿಎಸ್‌ಎನ್‌ಎಲ್ ಜೆಟಿಒ ಹರೀಶ್, ಸಂತೋಷ್, ಶರತ್, ನಗರ ಠಾಣೆ ಪಿಎಸ್‌ಐ ರಮೇಶ್ ಪ್ರತಿಭಟನಾ ಸ್ಥಳಕ್ಕೆ ದೌಡಾಯಿಸಿದರು. ಈ ವೇಳೆ ಅಧಿಕಾರಿಗಳು ಮತ್ತು ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದು ಗ್ರಾಮಸ್ಥರು ಆರೋಪಗಳ ಸುರಿಮಳೆಗೈದರು. ನಗರ ಠಾಣೆ ಪಿಎಸ್‌ಐ ರಮೇಶ್ ಗ್ರಾಮಸ್ಥರು ಮತ್ತು ಅಧಿಕಾರಿಗಳಿಂದ ಮಾಹಿತಿ ಪಡೆದರು.

BSNL ಮೊಬೈಲ್ ನೆಟ್‌ವರ್ಕ್ 24 ಗಂಟೆಯೂ ಸಿಗಬೇಕು. ವಿದ್ಯುತ್ ಇಲ್ಲದಿದ್ದರೂ ಜನರೇಟರ್ ಮೂಲಕ ನೆಟ್‌ವರ್ಕ್ ಇರುವಂತೆ ಕ್ರಮ ಕೈಗೊಳ್ಳಲು ಪಟ್ಟುಹಿಡಿದರು. ಇದಕ್ಕೆ ಅಧಿಕಾರಿಗಳು ೬ ದಿನದ ಕಾಲಾವಕಾಶ ಕೋರಿದರು. ಇದಕ್ಕೆ ಸಮ್ಮತಿಸಿದ ಗ್ರಾಮಸ್ಥರು ಟವರ್‌ನಿಂದ ಕೆಳಗಿಳಿದು, ಒಂದು ವೇಳೆ ಮಾತು ತಪ್ಪಿದರೆ ಮತ್ತೆ ಪ್ರತಿಭಟನಾ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಅರಮನೆಕೊಪ್ಪ ಗೋಪಾಲ್, ಕೊಡಸೆ ಚಂದ್ರಪ್ಪ, ಅಪ್ಪುಭಟ್, ಹಿಲ್ಕುಂಜಿ ಕುಮಾರ್, ಕಿಶೋರ್, ಸುಕೇಶ್ ಮತ್ತಿಕೈ, ಟಿ.ಡಿ ಗಣಪತಿ, ತರುವೆ ಕೃಷ್ಣ, ಸ್ವಾಮಿ ಅಡಗೋಡಿ, ರವೀಂದ್ರ ಮತ್ತಿಮನೆ, ಪ್ರಶಾಂತ ಸಂಪೇಕಟ್ಟೆ, ವೆಂಕಟರಮಣ ಭಟ್, ಶ್ರೀನಿವಾಸ ಎಸ್, ಆಧಿತ್ಯ, ಇತರರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...