Wednesday, April 23, 2025
Wednesday, April 23, 2025

Ravindra Kala Kshetra Bangalore ಚಿ.ಗೌರಿ ಮನೋಹರಿ ಭರತನಾಟ್ಯ ರಂಗಪ್ರವೇಶ

Date:

Ravindra Kala Kshetra Bangalore ಭದ್ರಾವತಿ ನಗರದ ಹೊಸಮನೆ ಮುಖ್ಯ ರಸ್ತೆಯ ಶ್ರೀ ಮುರುಳೀಧರ ಸಂಗೀತ ವಿದ್ಯಾಲಯ ಮತ್ತು ಬೆಂಗಳೂರಿನ ಉಲ್ಲಾಳ ಉಪ ನಗರದ ಮುರುಳೀಧರ ಸಂಗೀತ ನೃತ್ಯ ಮಹಾವಿದ್ಯಾಲಯದ ಸಂಗೀತ ವಿದ್ವಾಂಸರ ಕುಟುಂಬದ ಕುಡಿ ೬ ನೇ ತರಗತಿಯ ೧೧ ವರ್ಷದ ಬಾಲಕಿ ಗೌರಿ ಮನೋಹರಿ ಭರತ ನಾಟ್ಯ ರಂಗ ಪ್ರವೇಶ ಮಾಡಲಿದ್ದಾರೆ.
ಕಾರ್ಯಕ್ರಮವು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರ ಮುಂಭಾಗದ ಜೆ.ಸಿ ರಸ್ತೆಯ ಎಡಿಎ ರಂಗ ಮಂದಿರದಲ್ಲಿ ಮೇ: ೩೦ ರಂದು ಗುರುವಾರ ಸಂಜೆ ೬ ಗಂಟೆಗೆ ನಡೆಯಲಿದೆ. ಈ ಬಾಲಕಿಯು ಬೆಂಗಳೂರಿನ ಪ್ರಸಿದ್ದ ಸಂಗೀತ ವಿದ್ವಾನ್ ಗುರು ಪ್ರವೀಣ್‌ಕುಮಾರ್ ಅವರ ಶಿಷ್ಯೆಯಾಗಿದ್ದಾರೆ. ಬಾಲಕಿಯ ತಂದೆ ಇಂಜಿನಿಯರ್ ಹೆಚ್.ಎಸ್.ಕಿರಣ್ ಮತ್ತು ತಾಯಿ ಸಂಗೀತ ಕಲಾವಿದೆ ಡಾ: ವಿದ್ಯಾಲಕ್ಷ್ಮಿ ಅವರ ಪುತ್ರಿಯಾಗಿದ್ದಾಳೆ.
Ravindra Kala Kshetra Bangalore ವಿಶೇಷವೆಂದರೆ ಬಾಲಕಿಯ ಇಡೀ ಕುಟುಂಬದಲ್ಲಿ ಸುಮಾರು ೨೦ ಕ್ಕೂ ಹೆಚ್ಚು ಮಂದಿ ಸಂಗೀತ ವಿದ್ವಾಂಸರಾಗಿದ್ದಾರೆ. ಬಾಲಕಿಯ ತಾಯಿ ಡಾ: ವಿದ್ಯಾಲಕ್ಷ್ಮಿ ಅವರ ತಂದೆ (ಬಾಲಕಿಯ ಅಜ್ಜ) ಮುರುಳೀಧರ ಸಂಗೀತ ವಿದ್ಯಾಲಯದ ವಿದ್ವಾನ್ ಕೆ.ಎಸ್.ಮೋಹನ್ ಕುಮಾರ್ ಕರ್ನಾಟಕ ಕಲಾಶ್ರೀ ಪ್ರಶಸ್ತಿ ಪುರಸ್ಕೃತರು. ಅವರ ತಂದೆ (ಬಾಲಕಿಯ ಮುತ್ತಜ್ಜ) ದಿವಂಗತ ಕೆ.ಮಂಜಪ್ಪ ಕರ್ನಾಟಕ ಕಲಾಶ್ರೀ ಪ್ರಶಸ್ತಿ ಮತ್ತು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಎಲ್ಲಾ ತಾಲ್ಲೂಕುಗಳಲ್ಲಿ ಜನಸ್ಪಂದನ ಕಾರ್ಯಕ್ರಮ- ಮಧು ಬಂಗಾರಪ್ಪ

Madhu Bangarappa ಜನರ ಸಮಸ್ಯೆಗಳನ್ನು ಆಲಿಸಿ, ಶೀಘ್ರ ಪರಿಹಾರ ದೊರಕಿಸಲು...

Fisheries project 2024-25ನೇ ಸಾಲಿನ ಮತ್ಸ್ಯಸಂಪದ ಯೋಜನೆಗೆ ಅರ್ಹರಿಂದ ಅರ್ಜಿ ಆಹ್ವಾನ

Fisheries project 2024-25 ನೇ ಸಾಲಿನ ಪ್ರಧಾನ ಮಂತ್ರಿ ಮತ್ಯ್ಸ ಸಂಪದ...

Ravi Telex ಪತ್ರಕರ್ತ‌ “ಟೆಲೆಕ್ಸ್ ರವಿ ” ಗೆ ಅಬ್ದುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿ

Ravi Telex ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದ...

Inner Wheel East Shimoga ಆಶ್ರಮವಾಸಿಗಳ ಸೇವೆ ,ದೇವರ ಸೇವೆಗೆ ಸಮ- ವಾಗ್ದೇವಿ ಬಸವರಾಜ್

Inner Wheel East Shimoga ಆಶ್ರಮವಾಸಿಗಳ ಸೇವೆ ದೇವರ ಸೇವೆಗೆ ಸಮಾನ....