Saturday, December 6, 2025
Saturday, December 6, 2025

Karnataka Lokayukta ಗಾಡಿಕೊಪ್ಪ ವೃತ್ತ ಗ್ರಾಮಾಡಳಿತಾಧಿಕಾರಿ ಲೋಕಾಯುಕ್ತದಿಂದ”ರೆಡ್ ಹ್ಯಾಂಡ್” ಅರೆಸ್ಟ್

Date:

Karnataka Lokayukta ಮೇ 30ರಂದು ಶಿವಮೊಗ್ಗ ತಾಲೂಕು ಕಸಬಾ -1 ಹೋಬಳಿ, ಗಾಡಿಕೊಪ್ಪ ವೃತ್ತ, ಗ್ರಾಮ ಅಡಳಿತ ಅಧಿಕಾರಿ ಸುರೇಶ್ ಜಿ. ಬಿನ್ ನಾಗಪ್ಪಜಿ ಎಂಬುವವರು ಜಮೀನು ಖಾತೆ ಮಾಡಿಕೊಡಲು ಆರು ಸಾವಿರ ರೂ.ಗಳ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.
ಶಿವಮೊಗ್ಗ ನಗರದ ಕೃಷಿನಗರ ವಾಸಿ ಸಂಕೇತ್ ಎಂಬುವವರು ಖರೀದಿಸಿದ ಜಮೀನನ್ನು ತನ್ನ ತಾಯಿ ಶ್ರೀಮತಿ ವೀಣಾ ಬಿ.ಎಂ. ಎಂಬುವವರ ಹೆಸರಿಗೆ ನೋಂದಣಿ ಮಾಡಿಸಿಕೊಂಡಿರುತ್ತಾರೆ. ಶಿವಮೊಗ್ಗ ವಿನೋಬನಗರ ಪ್ರೀಡಂ ಪಾರ್ಕ್‍ನಲ್ಲಿರುವ ಗ್ರಾಮ ಆಡಳಿತ ಅಧಿಕಾರಿಗಳ ಕಚೇರಿ ಹೋಗಿ ವಿ ಎ ಆಗಿರುವ ಸುರೇಶ್ ಜಿ. ಬಳಿ ತಾವು ಖರೀದಿಸಿದ ಜಮೀನನ್ನು ಖಾತೆ ಮಾಡಿಕೊಡುವಂತೆ ಕೇಳಿಕೊಂಡಾಗ ಕೆಲಸ ಮಾಡಿಕೊಡಲು ರೂ. 6000/-ಗಳ ಲಂಚಕ್ಕೆ ಬೇಡಿಕೆ ಇಟ್ಟಿರುವ ವಿಚಾರವಾಗಿ ಇವರ ವಿರುದ್ಧ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿತ್ತು.
Karnataka Lokayukta ಅಪಾದಿತರನ್ನು ಬಂಧಿಸಿ ಮುಂದಿನ ತನಿಖೆಯನ್ನು ಪೊಲೀಸ್ ನಿರೀಕ್ಷಕರು ವೀರಬಸಪ್ಪ ಎಲ್ ಕುಸಲಾಪುರರವರು ಕೈಗೊಂಡಿರುತ್ತಾರೆ. ಕಾರ್ಯಾಚರಣೆಯಲ್ಲಿ ಕ.ಲೋ.ಪೋ. ಅಧೀಕ್ಷಕ ಮಂಜುನಾಥ್ ಚೌಧರಿ ಎಂ.ಹೆಚ್. ಮತ್ತು ಪೊಲೀಸ್ ಉಪಾಧೀಕ್ಷಕ ಉಮೇಶ ಈಶ್ವರ ನಾಯ್ಕ ಇವರುಗಳ ಮಾರ್ಗದರ್ಶನದಲ್ಲಿ ಲೋಕಾಯುಕ್ತ ಕಚೇರಿ ಸಿಬ್ಬಂದಿಗಳಾದ ವಿ.ಎ.ಮಹಂತೇಶ ಸಿ.ಹೆಚ್.ಸಿ., ಯೋಗೇಶ್ .ಸಿ.ಹೆಚ್.ಸಿ. ಸುರೇಂದ್ರ ಹೆಚ್.ಜಿ., ಸಿ.ಹೆಚ್.ಸಿ., ಬಿ.ಟಿ ಚನ್ನೇರ್ಶ. ಸಿ.ಪಿ.ಸಿ., ಪ್ರಶಾಂತ್‍ಕುಮಾಋ ಸಿ.ಪಿ.ಸಿ., ರಘುನಾಯ್ಕ ಸಿ.ಪಿ.ಸಿ., ದೇವರಾಜ್ ಸಿ.ಪಿ.ಸಿ., ಗಂಗಾಧರ ಎ.ಪಿ.ಸಿ., ಪ್ರದೀಪ್ ಎ.ಪಿ.ಸಿ., ಗೋಪಿ ವಿ.,ಎ.ಪಿ.ಸಿ., ಹಾಗು ಜಯಂತ್ ಎ.ಪಿ.ಸಿ. ಇವರುಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...