Thursday, August 13, 2026
Thursday, August 13, 2026

Karnataka Lokayukta ಗಾಡಿಕೊಪ್ಪ ವೃತ್ತ ಗ್ರಾಮಾಡಳಿತಾಧಿಕಾರಿ ಲೋಕಾಯುಕ್ತದಿಂದ”ರೆಡ್ ಹ್ಯಾಂಡ್” ಅರೆಸ್ಟ್

Date:

Karnataka Lokayukta ಮೇ 30ರಂದು ಶಿವಮೊಗ್ಗ ತಾಲೂಕು ಕಸಬಾ -1 ಹೋಬಳಿ, ಗಾಡಿಕೊಪ್ಪ ವೃತ್ತ, ಗ್ರಾಮ ಅಡಳಿತ ಅಧಿಕಾರಿ ಸುರೇಶ್ ಜಿ. ಬಿನ್ ನಾಗಪ್ಪಜಿ ಎಂಬುವವರು ಜಮೀನು ಖಾತೆ ಮಾಡಿಕೊಡಲು ಆರು ಸಾವಿರ ರೂ.ಗಳ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.
ಶಿವಮೊಗ್ಗ ನಗರದ ಕೃಷಿನಗರ ವಾಸಿ ಸಂಕೇತ್ ಎಂಬುವವರು ಖರೀದಿಸಿದ ಜಮೀನನ್ನು ತನ್ನ ತಾಯಿ ಶ್ರೀಮತಿ ವೀಣಾ ಬಿ.ಎಂ. ಎಂಬುವವರ ಹೆಸರಿಗೆ ನೋಂದಣಿ ಮಾಡಿಸಿಕೊಂಡಿರುತ್ತಾರೆ. ಶಿವಮೊಗ್ಗ ವಿನೋಬನಗರ ಪ್ರೀಡಂ ಪಾರ್ಕ್‍ನಲ್ಲಿರುವ ಗ್ರಾಮ ಆಡಳಿತ ಅಧಿಕಾರಿಗಳ ಕಚೇರಿ ಹೋಗಿ ವಿ ಎ ಆಗಿರುವ ಸುರೇಶ್ ಜಿ. ಬಳಿ ತಾವು ಖರೀದಿಸಿದ ಜಮೀನನ್ನು ಖಾತೆ ಮಾಡಿಕೊಡುವಂತೆ ಕೇಳಿಕೊಂಡಾಗ ಕೆಲಸ ಮಾಡಿಕೊಡಲು ರೂ. 6000/-ಗಳ ಲಂಚಕ್ಕೆ ಬೇಡಿಕೆ ಇಟ್ಟಿರುವ ವಿಚಾರವಾಗಿ ಇವರ ವಿರುದ್ಧ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿತ್ತು.
Karnataka Lokayukta ಅಪಾದಿತರನ್ನು ಬಂಧಿಸಿ ಮುಂದಿನ ತನಿಖೆಯನ್ನು ಪೊಲೀಸ್ ನಿರೀಕ್ಷಕರು ವೀರಬಸಪ್ಪ ಎಲ್ ಕುಸಲಾಪುರರವರು ಕೈಗೊಂಡಿರುತ್ತಾರೆ. ಕಾರ್ಯಾಚರಣೆಯಲ್ಲಿ ಕ.ಲೋ.ಪೋ. ಅಧೀಕ್ಷಕ ಮಂಜುನಾಥ್ ಚೌಧರಿ ಎಂ.ಹೆಚ್. ಮತ್ತು ಪೊಲೀಸ್ ಉಪಾಧೀಕ್ಷಕ ಉಮೇಶ ಈಶ್ವರ ನಾಯ್ಕ ಇವರುಗಳ ಮಾರ್ಗದರ್ಶನದಲ್ಲಿ ಲೋಕಾಯುಕ್ತ ಕಚೇರಿ ಸಿಬ್ಬಂದಿಗಳಾದ ವಿ.ಎ.ಮಹಂತೇಶ ಸಿ.ಹೆಚ್.ಸಿ., ಯೋಗೇಶ್ .ಸಿ.ಹೆಚ್.ಸಿ. ಸುರೇಂದ್ರ ಹೆಚ್.ಜಿ., ಸಿ.ಹೆಚ್.ಸಿ., ಬಿ.ಟಿ ಚನ್ನೇರ್ಶ. ಸಿ.ಪಿ.ಸಿ., ಪ್ರಶಾಂತ್‍ಕುಮಾಋ ಸಿ.ಪಿ.ಸಿ., ರಘುನಾಯ್ಕ ಸಿ.ಪಿ.ಸಿ., ದೇವರಾಜ್ ಸಿ.ಪಿ.ಸಿ., ಗಂಗಾಧರ ಎ.ಪಿ.ಸಿ., ಪ್ರದೀಪ್ ಎ.ಪಿ.ಸಿ., ಗೋಪಿ ವಿ.,ಎ.ಪಿ.ಸಿ., ಹಾಗು ಜಯಂತ್ ಎ.ಪಿ.ಸಿ. ಇವರುಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...