Thursday, September 17, 2026
Thursday, September 17, 2026

Hosahalli News ಹೊಸನಗರ ತಾಲ್ಲೂಕಿನ ವಡಾ ಹೊಸಹಳ್ಳಿಯಲ್ಲಿ ಕಿಡಿಗೇಡಿಗಳಿಂದ ತೆಂಗಿನ ಗಿಡ ನಾಶ

Date:

Hosahalli News ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ವಡಾಹೊಸಹಳ್ಳಿ ಗ್ರಾಮದ ಲಕ್ಷ್ಮಮ್ಮ ಎಂಬುವರ ತೋಟದಲ್ಲಿ 10ಕ್ಕೂ ಹೆಚ್ಚು ತೆಂಗಿನ ಗಿಡಗಳನ್ನು ಕಿಡಿಗೇಡಿಗಳು ಕಡಿದು ಹಾಕಿ ದುಷ್ಖೃತ್ಯ ಮೆರೆದಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ತೋಟದ ಮಾಲೀಕರು ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ
ವಡಾಹೊಸಹಳ್ಳಿ ಗ್ರಾಮದಲ್ಲಿರುವ ಲಕ್ಷ್ಮಮ್ಮ ಕೋಂ ಗೋಪಾಲ ರವರ ತೋಟದ ಮಧ್ಯ ಮತ್ತು ಅಂಚುಗಳಲ್ಲಿ ತೆಂಗಿನ ಮರಗಳನ್ನು ಕಡಿಯಲಾಗಿದೆ.

Hosahalli News ತೋಟದ ಅಂಚಿನಲ್ಲಿ ಮನೆ ಇದ್ದು ಬುಧವಾರ ತಡರಾತ್ರಿ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ.
ವಡಾಹೊಸಳ್ಳಿ ಗ್ರಾಮದ ಸ.ನಂ.28ರಲ್ಲಿ 1-20 ಎಕರೆ ಜಮೀನನ್ನು ಸುಮಾರು ವರ್ಷಗಳಿಂದ ಬಗಹುಕುಂ ಸಾಗುವಳಿ ಮಾಡುತ್ತಿರುವ ಲಕ್ಷ್ಮಮ್ಮ ಸದರಿ ಜಮೀನಿಗೆ ಸುತ್ತಲು ಕಲ್ಲು ಕಂಬದ ಬೇಲಿ ನಿರ್ಮಿಸಿದ್ದಾರೆ. ಸದರಿ ಜಮೀನಿನ ಮಂಜೂರಾತಿಗಾಗಿ ಈ ಹಿಂದೆಯೇ ಫಾರಂ 53ಯಡಿ ಅರ್ಜಿ ಸಲ್ಲಿಸಿದ್ದಾರೆ. ಕಿಡಿಗೇಡಿಗಳು ಮಾಲೀಕರು ಮಲಗಿರುವ ವೇಳೆಯಲ್ಲಿ ಹತ್ತು ತೆಂಗಿನ ಗಿಡಗಳನ್ನು ಕಿತ್ತು ಕಡಿದು ಹಾಕಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...