Thursday, June 18, 2026
Thursday, June 18, 2026

Hosahalli News ಹೊಸನಗರ ತಾಲ್ಲೂಕಿನ ವಡಾ ಹೊಸಹಳ್ಳಿಯಲ್ಲಿ ಕಿಡಿಗೇಡಿಗಳಿಂದ ತೆಂಗಿನ ಗಿಡ ನಾಶ

Date:

Hosahalli News ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ವಡಾಹೊಸಹಳ್ಳಿ ಗ್ರಾಮದ ಲಕ್ಷ್ಮಮ್ಮ ಎಂಬುವರ ತೋಟದಲ್ಲಿ 10ಕ್ಕೂ ಹೆಚ್ಚು ತೆಂಗಿನ ಗಿಡಗಳನ್ನು ಕಿಡಿಗೇಡಿಗಳು ಕಡಿದು ಹಾಕಿ ದುಷ್ಖೃತ್ಯ ಮೆರೆದಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ತೋಟದ ಮಾಲೀಕರು ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ
ವಡಾಹೊಸಹಳ್ಳಿ ಗ್ರಾಮದಲ್ಲಿರುವ ಲಕ್ಷ್ಮಮ್ಮ ಕೋಂ ಗೋಪಾಲ ರವರ ತೋಟದ ಮಧ್ಯ ಮತ್ತು ಅಂಚುಗಳಲ್ಲಿ ತೆಂಗಿನ ಮರಗಳನ್ನು ಕಡಿಯಲಾಗಿದೆ.

Hosahalli News ತೋಟದ ಅಂಚಿನಲ್ಲಿ ಮನೆ ಇದ್ದು ಬುಧವಾರ ತಡರಾತ್ರಿ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ.
ವಡಾಹೊಸಳ್ಳಿ ಗ್ರಾಮದ ಸ.ನಂ.28ರಲ್ಲಿ 1-20 ಎಕರೆ ಜಮೀನನ್ನು ಸುಮಾರು ವರ್ಷಗಳಿಂದ ಬಗಹುಕುಂ ಸಾಗುವಳಿ ಮಾಡುತ್ತಿರುವ ಲಕ್ಷ್ಮಮ್ಮ ಸದರಿ ಜಮೀನಿಗೆ ಸುತ್ತಲು ಕಲ್ಲು ಕಂಬದ ಬೇಲಿ ನಿರ್ಮಿಸಿದ್ದಾರೆ. ಸದರಿ ಜಮೀನಿನ ಮಂಜೂರಾತಿಗಾಗಿ ಈ ಹಿಂದೆಯೇ ಫಾರಂ 53ಯಡಿ ಅರ್ಜಿ ಸಲ್ಲಿಸಿದ್ದಾರೆ. ಕಿಡಿಗೇಡಿಗಳು ಮಾಲೀಕರು ಮಲಗಿರುವ ವೇಳೆಯಲ್ಲಿ ಹತ್ತು ತೆಂಗಿನ ಗಿಡಗಳನ್ನು ಕಿತ್ತು ಕಡಿದು ಹಾಕಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...