Friday, April 18, 2025
Friday, April 18, 2025

Hosahalli News ಹೊಸನಗರ ತಾಲ್ಲೂಕಿನ ವಡಾ ಹೊಸಹಳ್ಳಿಯಲ್ಲಿ ಕಿಡಿಗೇಡಿಗಳಿಂದ ತೆಂಗಿನ ಗಿಡ ನಾಶ

Date:

Hosahalli News ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ವಡಾಹೊಸಹಳ್ಳಿ ಗ್ರಾಮದ ಲಕ್ಷ್ಮಮ್ಮ ಎಂಬುವರ ತೋಟದಲ್ಲಿ 10ಕ್ಕೂ ಹೆಚ್ಚು ತೆಂಗಿನ ಗಿಡಗಳನ್ನು ಕಿಡಿಗೇಡಿಗಳು ಕಡಿದು ಹಾಕಿ ದುಷ್ಖೃತ್ಯ ಮೆರೆದಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ತೋಟದ ಮಾಲೀಕರು ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ
ವಡಾಹೊಸಹಳ್ಳಿ ಗ್ರಾಮದಲ್ಲಿರುವ ಲಕ್ಷ್ಮಮ್ಮ ಕೋಂ ಗೋಪಾಲ ರವರ ತೋಟದ ಮಧ್ಯ ಮತ್ತು ಅಂಚುಗಳಲ್ಲಿ ತೆಂಗಿನ ಮರಗಳನ್ನು ಕಡಿಯಲಾಗಿದೆ.

Hosahalli News ತೋಟದ ಅಂಚಿನಲ್ಲಿ ಮನೆ ಇದ್ದು ಬುಧವಾರ ತಡರಾತ್ರಿ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ.
ವಡಾಹೊಸಳ್ಳಿ ಗ್ರಾಮದ ಸ.ನಂ.28ರಲ್ಲಿ 1-20 ಎಕರೆ ಜಮೀನನ್ನು ಸುಮಾರು ವರ್ಷಗಳಿಂದ ಬಗಹುಕುಂ ಸಾಗುವಳಿ ಮಾಡುತ್ತಿರುವ ಲಕ್ಷ್ಮಮ್ಮ ಸದರಿ ಜಮೀನಿಗೆ ಸುತ್ತಲು ಕಲ್ಲು ಕಂಬದ ಬೇಲಿ ನಿರ್ಮಿಸಿದ್ದಾರೆ. ಸದರಿ ಜಮೀನಿನ ಮಂಜೂರಾತಿಗಾಗಿ ಈ ಹಿಂದೆಯೇ ಫಾರಂ 53ಯಡಿ ಅರ್ಜಿ ಸಲ್ಲಿಸಿದ್ದಾರೆ. ಕಿಡಿಗೇಡಿಗಳು ಮಾಲೀಕರು ಮಲಗಿರುವ ವೇಳೆಯಲ್ಲಿ ಹತ್ತು ತೆಂಗಿನ ಗಿಡಗಳನ್ನು ಕಿತ್ತು ಕಡಿದು ಹಾಕಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sonia Gandhi ಸೋನಿಯಾ & ರಾಹುಲ್ ಮೇಲೆ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ- ಶಿವಮೊಗ್ಗ ಎನ್ಎಸ್ ಯು ಐ ಆರೋಪ- ಪ್ರತಿಭಟನೆ

ಕೇಂದ್ರ ಬಿ ಜೆ ಪಿ ಸರ್ಕಾರ ಜಾರಿ ನಿರ್ದೇಶನಾಲಯದ ಮೂಲಕ ನ್ಯಾಷನಲ್...

MESCOM ಏಪ್ರಿಲ್ 18 ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ...

ದತ್ತಿ ನಿಧಿ ಕಾರ್ಯಕ್ರಮಗಳು ಸಮಾಜಮುಖಿಯಾಗಿರಲಿ-ಮಾನಸ ಶಿವರಾಮಕೃಷ್ಣ

ವಮೊಗ್ಗ ಜಿಲ್ಲಾ ಲೇಖಕಿಯರ ಮತ್ತು ವಾಚಕಿಯರ ಸಂಘದಿಂದ ದತ್ತಿ ಕಾರ್ಯಕ್ರಮ ಆಯೋಜಿಸಲಾಗಿತ್ತು....