Sunday, May 3, 2026
Sunday, May 3, 2026

Hosahalli News ಹೊಸನಗರ ತಾಲ್ಲೂಕಿನ ವಡಾ ಹೊಸಹಳ್ಳಿಯಲ್ಲಿ ಕಿಡಿಗೇಡಿಗಳಿಂದ ತೆಂಗಿನ ಗಿಡ ನಾಶ

Date:

Hosahalli News ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ವಡಾಹೊಸಹಳ್ಳಿ ಗ್ರಾಮದ ಲಕ್ಷ್ಮಮ್ಮ ಎಂಬುವರ ತೋಟದಲ್ಲಿ 10ಕ್ಕೂ ಹೆಚ್ಚು ತೆಂಗಿನ ಗಿಡಗಳನ್ನು ಕಿಡಿಗೇಡಿಗಳು ಕಡಿದು ಹಾಕಿ ದುಷ್ಖೃತ್ಯ ಮೆರೆದಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ತೋಟದ ಮಾಲೀಕರು ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ
ವಡಾಹೊಸಹಳ್ಳಿ ಗ್ರಾಮದಲ್ಲಿರುವ ಲಕ್ಷ್ಮಮ್ಮ ಕೋಂ ಗೋಪಾಲ ರವರ ತೋಟದ ಮಧ್ಯ ಮತ್ತು ಅಂಚುಗಳಲ್ಲಿ ತೆಂಗಿನ ಮರಗಳನ್ನು ಕಡಿಯಲಾಗಿದೆ.

Hosahalli News ತೋಟದ ಅಂಚಿನಲ್ಲಿ ಮನೆ ಇದ್ದು ಬುಧವಾರ ತಡರಾತ್ರಿ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ.
ವಡಾಹೊಸಳ್ಳಿ ಗ್ರಾಮದ ಸ.ನಂ.28ರಲ್ಲಿ 1-20 ಎಕರೆ ಜಮೀನನ್ನು ಸುಮಾರು ವರ್ಷಗಳಿಂದ ಬಗಹುಕುಂ ಸಾಗುವಳಿ ಮಾಡುತ್ತಿರುವ ಲಕ್ಷ್ಮಮ್ಮ ಸದರಿ ಜಮೀನಿಗೆ ಸುತ್ತಲು ಕಲ್ಲು ಕಂಬದ ಬೇಲಿ ನಿರ್ಮಿಸಿದ್ದಾರೆ. ಸದರಿ ಜಮೀನಿನ ಮಂಜೂರಾತಿಗಾಗಿ ಈ ಹಿಂದೆಯೇ ಫಾರಂ 53ಯಡಿ ಅರ್ಜಿ ಸಲ್ಲಿಸಿದ್ದಾರೆ. ಕಿಡಿಗೇಡಿಗಳು ಮಾಲೀಕರು ಮಲಗಿರುವ ವೇಳೆಯಲ್ಲಿ ಹತ್ತು ತೆಂಗಿನ ಗಿಡಗಳನ್ನು ಕಿತ್ತು ಕಡಿದು ಹಾಕಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...