Monday, December 15, 2025
Monday, December 15, 2025

National Students’ Union of India ಎನ್ ಎಸ್ ಯು ಐ ರಾಷ್ಟ್ರೀಯ ಕಾರ್ಯದರ್ಶೀ ಸತ್ಯಸಾಯಿ ಶವವಾಗಿ ಪತ್ತೆ!

Date:

National Students’ Union of India ಎನ್‌ಎಸ್‌ಯುಐ ರಾಷ್ಟ್ರೀಯ ಕಾರ್ಯದರ್ಶಿ ರಾಜ್ ಸಂಪತ್ ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ಧರ್ಮಾವರಂ ಹೊರವಲಯದ ನೀರಾವರಿ ಟ್ಯಾಂಕ್ ಬಳಿ ನಿಗೂಢವಾಗಿ ಶವವಾಗಿ ಪತ್ತೆಯಾಗಿದ್ದಾರೆ.

ವೃತ್ತಿಯಲ್ಲಿ ವಕೀಲರಾಗಿದ್ದ ಸಂಪತ್(36) ಲೋಕಸಭೆ ಚುನಾವಣೆಗೆ ಕೇರಳದಲ್ಲಿ ಎನ್‌ಎಸ್‌ಯುಐ ಉಸ್ತುವಾರಿಯನ್ನು ವಹಿಸಿದ್ದರು ಮತ್ತು ರಾಹುಲ್ ಗಾಂಧಿಯವರ ಐದು ತಿಂಗಳ ಭಾರತ್ ಜೋಡೋ ಯಾತ್ರೆಯಲ್ಲಿ ಸಕ್ರಿಯ ಪಾತ್ರ ವಹಿಸಿದ್ದರು.

ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ರಾಜ್ ಸಂಪತ್‌ಗೆ ಅವರ ಸ್ನೇಹಿತರು ಕೊನೆಯ ಬಾರಿ ನೋಡಿದ್ದರು. ಆ ಬಳಿಕ ಅವರು ನಾಪತ್ತೆಯಾಗಿದ್ದರು. ಸ್ಥಳೀಯರು ಮೃತದೇಹವೊಂದು ಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದಾಗ ಪ್ರಕರಣ ಬಯಲಾಗಿದೆ.

National Students’ Union of India ಪ್ರಾಥಮಿಕ ತನಿಖೆಯಿಂದ ಸಂಪತ್‌ನನ್ನು ಬೇರೆಡೆ ಕೊಲೆ ಮಾಡಿ ಶವವನ್ನು ಪಟ್ಟಣದ ಹೊರವಲಯದ ತೊಟ್ಟಿಯ ಬಳಿ ಎಸೆದು ಹೋಗಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ.

ಪ್ರಕರಣದ ತನಿಖೆಯ ನೇತೃತ್ವ ವಹಿಸಿರುವ ಡಿಎಸ್ಪಿ ಶ್ರೀನಿವಾಸ ರಾವ್, ವಿಧಿವಿಜ್ಞಾನ ತಂಡದೊಂದಿಗೆ ಶವ ಪತ್ತೆಯಾದ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ.

ಸಂಪತ್‌ಗೆ ಸಹ ವಕೀಲರೊಬ್ಬರ ಜತೆ ಜಮೀನು ವಿವಾದವಿದ್ದು, ಈ ಕುರಿತು ಇತ್ತೀಚೆಗೆ ಹಿರಿಯ ಪೊಲೀಸ್‌ ಅಧಿಕಾರಿಗೆ ವಾಟ್ಸಾಪ್‌ ಸಂದೇಶ ಕಳುಹಿಸಿ ಜೀವಕ್ಕೆ ಅಪಾಯವಿದೆ ಎಂದು ಹೇಳಿದ್ದರು ಎಂದು ಸಂಪತ್‌ ಅವರ ಆಪ್ತ ಮೂಲಗಳು ತಿಳಿಸಿವೆ. ಈ ಕುರಿತು ಎಲ್ಲಾ ಕೋನಗಳಲ್ಲೂ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...