Monday, August 3, 2026
Monday, August 3, 2026

National Students’ Union of India ಎನ್ ಎಸ್ ಯು ಐ ರಾಷ್ಟ್ರೀಯ ಕಾರ್ಯದರ್ಶೀ ಸತ್ಯಸಾಯಿ ಶವವಾಗಿ ಪತ್ತೆ!

Date:

National Students’ Union of India ಎನ್‌ಎಸ್‌ಯುಐ ರಾಷ್ಟ್ರೀಯ ಕಾರ್ಯದರ್ಶಿ ರಾಜ್ ಸಂಪತ್ ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ಧರ್ಮಾವರಂ ಹೊರವಲಯದ ನೀರಾವರಿ ಟ್ಯಾಂಕ್ ಬಳಿ ನಿಗೂಢವಾಗಿ ಶವವಾಗಿ ಪತ್ತೆಯಾಗಿದ್ದಾರೆ.

ವೃತ್ತಿಯಲ್ಲಿ ವಕೀಲರಾಗಿದ್ದ ಸಂಪತ್(36) ಲೋಕಸಭೆ ಚುನಾವಣೆಗೆ ಕೇರಳದಲ್ಲಿ ಎನ್‌ಎಸ್‌ಯುಐ ಉಸ್ತುವಾರಿಯನ್ನು ವಹಿಸಿದ್ದರು ಮತ್ತು ರಾಹುಲ್ ಗಾಂಧಿಯವರ ಐದು ತಿಂಗಳ ಭಾರತ್ ಜೋಡೋ ಯಾತ್ರೆಯಲ್ಲಿ ಸಕ್ರಿಯ ಪಾತ್ರ ವಹಿಸಿದ್ದರು.

ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ರಾಜ್ ಸಂಪತ್‌ಗೆ ಅವರ ಸ್ನೇಹಿತರು ಕೊನೆಯ ಬಾರಿ ನೋಡಿದ್ದರು. ಆ ಬಳಿಕ ಅವರು ನಾಪತ್ತೆಯಾಗಿದ್ದರು. ಸ್ಥಳೀಯರು ಮೃತದೇಹವೊಂದು ಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದಾಗ ಪ್ರಕರಣ ಬಯಲಾಗಿದೆ.

National Students’ Union of India ಪ್ರಾಥಮಿಕ ತನಿಖೆಯಿಂದ ಸಂಪತ್‌ನನ್ನು ಬೇರೆಡೆ ಕೊಲೆ ಮಾಡಿ ಶವವನ್ನು ಪಟ್ಟಣದ ಹೊರವಲಯದ ತೊಟ್ಟಿಯ ಬಳಿ ಎಸೆದು ಹೋಗಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ.

ಪ್ರಕರಣದ ತನಿಖೆಯ ನೇತೃತ್ವ ವಹಿಸಿರುವ ಡಿಎಸ್ಪಿ ಶ್ರೀನಿವಾಸ ರಾವ್, ವಿಧಿವಿಜ್ಞಾನ ತಂಡದೊಂದಿಗೆ ಶವ ಪತ್ತೆಯಾದ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ.

ಸಂಪತ್‌ಗೆ ಸಹ ವಕೀಲರೊಬ್ಬರ ಜತೆ ಜಮೀನು ವಿವಾದವಿದ್ದು, ಈ ಕುರಿತು ಇತ್ತೀಚೆಗೆ ಹಿರಿಯ ಪೊಲೀಸ್‌ ಅಧಿಕಾರಿಗೆ ವಾಟ್ಸಾಪ್‌ ಸಂದೇಶ ಕಳುಹಿಸಿ ಜೀವಕ್ಕೆ ಅಪಾಯವಿದೆ ಎಂದು ಹೇಳಿದ್ದರು ಎಂದು ಸಂಪತ್‌ ಅವರ ಆಪ್ತ ಮೂಲಗಳು ತಿಳಿಸಿವೆ. ಈ ಕುರಿತು ಎಲ್ಲಾ ಕೋನಗಳಲ್ಲೂ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...