Monday, December 15, 2025
Monday, December 15, 2025

Soraba Police ಅಡಿಕೆ ಕದ್ದು ಪರಾರಿಯಾಗುತ್ತಿದ್ದ ಕಳ್ಳನ ಬಂಧನ

Date:

Soraba Police ಮೂಡುಗೋಡುನಲ್ಲಿ ಅಡಿಕೆ ಕದ್ದು ಪರಾರಿಯಾಗಿದ್ದವನನ್ನು ಸೊರಬ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 4.70ಲಕ್ಷ ರೂ. ನಗದು, ಕಳ್ಳತನಕ್ಕೆ ಉಪಯೋಗಿಸಿದ್ದ 8ಲಕ್ಷ ರೂ. ಮೌಲ್ಯದ ವಾಹನವನ್ನು ವಶಕ್ಕೆ ಪಡೆದಿದ್ದಾರೆ.

ಮೂಡುಗೋಡುವಿನ ಜಯಕುಮಾರ್ ತಮ್ಮ ಗೋದಾಮಿನಲ್ಲಿ ಸಂಗ್ರಹಿಸಿಟ್ಟಿದ್ದ ಅಡಿಕೆ, ಗೇರುಬೀಜ ಕಳ್ಳತನವಾಗಿರುವ ಕುರಿತು ಮೇ 10ರಂದು ದೂರು ದಾಖಲಿಸಿದ್ದರು.

Soraba Police ಪ್ರಕರಣದ ಬೆನ್ನತ್ತಿದ್ದ ಪೊಲೀಸರು ಖಚಿತ ಮಾಹಿತಿ ಮೇರೆಗೆ ಮಾವಲಿ ಗ್ರಾಮಸಮೀಪ ಶಿಕಾರಿಪುರದ ಜಕ್ಕನಹಳ್ಳಿ ನಿವಾಸಿ ನಂದೀಶ್ ಎಂಬಾತನನ್ನು ಬಂಧಿಸಿದ್ದಾರೆ.ಪ್ರಕರಣದಲ್ಲಿ ಭಾಗಿಯಾದ ಉಳಿದ ನಾಲ್ವರು ತಲೆಮರೆಸಿಕೊಂಡಿದ್ದಾರೆ.
ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ಎಎಸ್ಪಿ ಅನಿಕುಮಾರ್ ಭೂಮರೆಡ್ಡಿ, ಎಎಸ್ಪಿ ಎ.ಜಿ.ಕಾರಿಯಪ್ಪ, ಡಿವೈಎಸ್ಪಿ ಕೆ.ಇ.ಕೇಶವ ಮಾರ್ಗದರ್ಶನಲ್ಲಿ ಸೊರಬ ಸಿಪಿಐ ರಮೇಶ್ ರಾವ್, ಪಿಎಸ್ಐ ಎಚ್.ಎನ್.ನಾಗರಾಜ್, ಎಎಸ್ಐಗಳಾದ ಲಿಂಗರಾಜ, ಪ್ರಭಾಕರ, ಹೆಚ್ಪಿಸಿಗಳಾದ ರಾಜುನಾಯ್ಕ್, ನಾಗರಾಜ, ಅಶೋಕ, ನಾಗೇಶ್, ಕಾನ್ಸ್ಟೇಬಲ್ಗಳಾದ ಕೆ.ಎನ್.ಲೋಕೇಶ್, ರಾಘವೇಂದ್ರ, ವಿನಯ, ಮಲ್ಲೇಶ್, ವಿಶ್ವನಾಥ, ಶಶೀಧರ, ಉಮೇಶ ಪರಸಪ್ಪ, ಸುನೀಲ್, ಸಂದೀಪ್, ಲೋಕೇಶ್, ಆನವಟ್ಟಿ ಠಾಣೆಯ ಆರ್.ಸಿ. ಮಂಜುನಾಥ, ಶಿವಮೊಗ್ಗ ಸಿಡಿಆರ್ ಸೆಲ್ನ ವಿಜಯಕುಮಾರ್, ಇಂದ್ರೇಶ್ ತಂಡ ಪ್ರಕರಣವನ್ನು ಭೇದಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...