Monday, April 13, 2026
Monday, April 13, 2026

Assembly Constituency ಜಯಲಕ್ಷ್ಮೀ ಒಲಿಯದ ಮಾಜಿ ಫುಟ್ಬಾಲ್ ಕ್ರೀಡಾಳು ಬೈಚುಂಗ್ ಭುಟಿಯಾ

Date:

Assembly Constituency ಭಾರತ ಫುಟ್ಬಾಲ್ ತಂಡದ ಮಾಜಿ ನಾಯಕ ಮತ್ತು ಸಿಕ್ಕಿಂ ಡೆಮಾಕ್ರಟಿಕ್ ಫ್ರಂಟ್ ಉಪಾಧ್ಯಕ್ಷ ಬೈಚುಂಗ್ ಭುಟಿಯಾ ಅವರು ನಾಮ್ಚಿ ಜಿಲ್ಲೆಯ ಬರ್ಫುಂಗ್ ವಿಧಾನಸಭಾ ಕ್ಷೇತ್ರದಲ್ಲಿ ಸೋಲು ಕಂಡಿದ್ದಾರೆ.

ಎಸ್‌ಕೆಎಂನ ರಿಕ್ಷಾಲ್ ದೋರ್ಜಿ ಭುಟಿಯಾ ವಿರುದ್ಧ ಭುಟಿಯಾ ಸುಮಾರು 4 ಸಾವಿರಕ್ಕೂ ಅಧಿಕ ಮತಗಳ ಅಂತದಲ್ಲಿ ಸೋತಿದ್ದಾರೆ. ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಅಭ್ಯರ್ಥಿ 8,358 ಮತಗಳನ್ನು ಪಡೆದರೆ, ಭುಟಿಯಾ 4,012 ಮತಗಳನ್ನು ಪಡೆದಿದ್ದಾರೆ.
ಉಳಿದಂತೆ ಸಿಟಿಜನ್ ಆಕ್ಷನ್ ಪಾರ್ಟಿ — ಬಾರ್ಫುಂಗ್ ಕ್ಷೇತ್ರದಲ್ಲಿ ಸಿಕ್ಕಿಂ ಅಭ್ಯರ್ಥಿ ದಾದುಲ್ ಲೆಪ್ಚಾ 656 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ ತಾಶಿ ದಾದುಲ್ ಭುಟಿಯಾ ಕೇವಲ 298 ಮತಗಳನ್ನು ಪಡೆದಿದ್ದಾರೆ.
ಈ ಮೂಲಕ 10 ವರ್ಷಗಳಲ್ಲಿ ಬರೋಬ್ಬರಿ ಆರು ಬಾರಿ ಸೋಲುವ ಮೂಲಕ ಸೋಲಿನಲ್ಲೂ ಭುಟಿಯಾ ದಾಖಲೆ ಬರೆದಿದ್ದಾರೆ.

ಬೈಚುಂಗ್ ಭುಟಿಯಾ ಅವರು 2018 ರಲ್ಲಿ ತಮ್ಮದೇ ಆದ ಹಮ್ರೋ ಸಿಕ್ಕಿಂ ಪಕ್ಷವನ್ನು ಸ್ಥಾಪಿಸಿದ್ದರು. ಆದರೆ ಕಳೆದ ವರ್ಷ ಅದನ್ನು ಎಸ್‌ಡಿಎಫ್‌ನೊಂದಿಗೆ ವಿಲೀನಗೊಳಿಸಿದ್ದರು. ಪ್ರಸ್ತುತ ಅವರು ಎಸ್‌ಡಿಎಫ್‌ನ ಉಪಾಧ್ಯಕ್ಷರಾಗಿದ್ದಾರೆ. ಇದಕ್ಕೂ ಮೊದಲು ಮಾಜಿ ಫುಟ್ಬಾಲ್ ಆಟಗಾರ ಬೈಚುಂಗ್ ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಎರಡು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು.

2014 ರ ಲೋಕಸಭಾ ಚುನಾವಣೆಯಲ್ಲಿ ಡಾರ್ಜಿಲಿಂಗ್‌ನಿಂದ ಹಾಗೂ 2016 ರ ವಿಧಾನಸಭಾ ಚುನಾವಣೆಯಲ್ಲಿ ಸಿಲಿಗುರಿಯಿಂದ ಸ್ಪರ್ಧಿಸಿದ್ದರು. ಆದರೆ ಎರಡೂ ಕಡೆಯೂ ಅವರು ಸೋಲು ಅನುಭವಿಸಿದ್ದರು.

ನಂತರ ಹಿಮಾಲಯ ಪ್ರದೇಶದಲ್ಲಿ ಬರುವ ಸರೋವರಗಳಿಗೆ ಹೆಸರುವಾಸಿಯಾಗಿರುವ ಸುಂದರವಾದ ರಾಜ್ಯ ಸಿಕ್ಕಿಂನಲ್ಲಿ ರಾಜಕೀಯ ನೆಲೆ ಕಂಡುಕೊಳ್ಳಲು ಬಯಸಿದ ಅವರು ಅಲ್ಲಿ ತಮ್ಮದೇ ಪಕ್ಷವನ್ನು ಸ್ಥಾಪಿಸಿದರು. 2019 ರ ವಿಧಾನಸಭಾ ಚುನಾವಣೆಯಲ್ಲಿ ಗ್ಯಾಂಗ್ಟಾಕ್ ಮತ್ತು ತುಮೆನ್ ಲಿಂಗಿಯಿಂದ ಸ್ಪರ್ಧಿಸಿದರು ಆದರೆ ಎರಡೂ ಕ್ಷೇತ್ರಗಳಲ್ಲೂ ಅವರು ಮತ್ತೆ ಸೋಲು ಕಂಡರು.

2019 ರಲ್ಲಿ ಮತ್ತೆ ಗ್ಯಾಂಗ್‌ಟಾಕ್‌ನ ಉಪ ಚುನಾವಣೆಯಲ್ಲಿಯೂ ಸ್ಪರ್ಧಿಸಿ ಸೋತರು.
ಬೈಚುಂಗ್ ಭುಟಿಯಾ
ಚುನಾವಣಾ ಫಲಿತಾಂಶದ ಕುರಿತು ಕಾರ್ಯತಂತ್ರ ರೂಪಿಸಲು ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸಭೆ
ಬೈಚುಂಗ್ ಭುಟಿಯಾ ಸಿಕ್ಕಿಂ ವಿಧಾನಸಭಾ ಚುನಾವಣೆಗೂ ಮುನ್ನ ಎಸ್‌ಡಿಎಫ್‌ಗೆ ಸೇರಿದ್ದರು.

Assembly Constituency ಅವರು ಹಿಂದಿನ ಹಮ್ರೊ ಸಿಕ್ಕಿಂ ಪಕ್ಷವನ್ನು ಎಸ್‌ಡಿಎಫ್‌ನೊಂದಿಗೆ ವಿಲೀನಗೊಳಿಸಿದ್ದರು. ಇದೀಗ ವಿಧಾನಸಭೆ ಚುನಾವಣೆಯಲ್ಲೂ ಸೋಲು ಕಂಡಿದ್ದಾರೆ.
ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಭಾನುವಾರ ಹಿಮಾಲಯ ರಾಜ್ಯದಲ್ಲಿ 32 ಸದಸ್ಯ ಬಲದ ಅಸೆಂಬ್ಲಿಯಲ್ಲಿ 31 ಸ್ಥಾನಗಳನ್ನು ಗೆದ್ದು ಪ್ರಚಂಡ ಜಯಗಳಿಸುವ ಮೂಲಕ ಸತತ ಎರಡನೇ ಅವಧಿಗೆ ಅಧಿಕಾರಕ್ಕೆ ಮರಳಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

U.T. Khader ದೇಶ,ಸಮಾಜ ಕಟ್ಟುವಲ್ಲಿ ಪತ್ರಕರ್ತರ ಪಾತ್ರ ಅನನ್ಯ-ಯು‌.ಟಿ‌.ಖಾದರ್

U.T. Khader ಬೀದರ್‌ನ ಝೀರಾ ಕನ್ವೆನ್ಸನ್ ಹಾಲ್‌ನಲ್ಲಿ ಕಳೆದ ಎರಡು ದಿನಗಳಿಂದ...

Asha Bhosle ಭಾರತೀಯ‌ “ಇನಿದನಿ “ಆಶಾ ಭೋಂಸ್ಲೆ ಇನ್ನಿಲ್ಲ.!

Asha Bhosle ಭಾರತದ ಜನಪ್ರಿಯ ಗಾಯಕಿ ಆಶಾ ಭೋಂಸ್ಲೆ (92). ಅವರು...

Bapuji Institute of Hi-Tech Education ಯಶಸ್ವಿ ಬದುಕಿಗೆ ಶಾಲಾ ಪಾಠಕ್ಕಿಂತ ಜೀವನ ಪಾಠವೇ ಮುಖ್ಯ- ಡಾ.ರಾಹುಲ್ ದೇವರಾಜ್

Bapuji Institute of Hi-Tech Education ಜಾಗತಿಕ ಸವಾಲುಗಳನ್ನೆದುರಿಸುತ್ತಾ ಬದುಕಿನಲ್ಲಿ ಯಶಸ್ಸು...

Rovers and Rangers ರಕ್ತದಾನ ಅತ್ಯಂತ ಮಹತ್ವದ ದಾನ – ಕೆ.ಎಸ್.ಗೌತಮ್

Rovers and Rangers ಸಾಗರದ ಎಲ್ ಬಿ ಮತ್ತು ಎಸ್ ಬಿ...