Wednesday, December 17, 2025
Wednesday, December 17, 2025

Assembly Constituency ಜಯಲಕ್ಷ್ಮೀ ಒಲಿಯದ ಮಾಜಿ ಫುಟ್ಬಾಲ್ ಕ್ರೀಡಾಳು ಬೈಚುಂಗ್ ಭುಟಿಯಾ

Date:

Assembly Constituency ಭಾರತ ಫುಟ್ಬಾಲ್ ತಂಡದ ಮಾಜಿ ನಾಯಕ ಮತ್ತು ಸಿಕ್ಕಿಂ ಡೆಮಾಕ್ರಟಿಕ್ ಫ್ರಂಟ್ ಉಪಾಧ್ಯಕ್ಷ ಬೈಚುಂಗ್ ಭುಟಿಯಾ ಅವರು ನಾಮ್ಚಿ ಜಿಲ್ಲೆಯ ಬರ್ಫುಂಗ್ ವಿಧಾನಸಭಾ ಕ್ಷೇತ್ರದಲ್ಲಿ ಸೋಲು ಕಂಡಿದ್ದಾರೆ.

ಎಸ್‌ಕೆಎಂನ ರಿಕ್ಷಾಲ್ ದೋರ್ಜಿ ಭುಟಿಯಾ ವಿರುದ್ಧ ಭುಟಿಯಾ ಸುಮಾರು 4 ಸಾವಿರಕ್ಕೂ ಅಧಿಕ ಮತಗಳ ಅಂತದಲ್ಲಿ ಸೋತಿದ್ದಾರೆ. ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಅಭ್ಯರ್ಥಿ 8,358 ಮತಗಳನ್ನು ಪಡೆದರೆ, ಭುಟಿಯಾ 4,012 ಮತಗಳನ್ನು ಪಡೆದಿದ್ದಾರೆ.
ಉಳಿದಂತೆ ಸಿಟಿಜನ್ ಆಕ್ಷನ್ ಪಾರ್ಟಿ — ಬಾರ್ಫುಂಗ್ ಕ್ಷೇತ್ರದಲ್ಲಿ ಸಿಕ್ಕಿಂ ಅಭ್ಯರ್ಥಿ ದಾದುಲ್ ಲೆಪ್ಚಾ 656 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ ತಾಶಿ ದಾದುಲ್ ಭುಟಿಯಾ ಕೇವಲ 298 ಮತಗಳನ್ನು ಪಡೆದಿದ್ದಾರೆ.
ಈ ಮೂಲಕ 10 ವರ್ಷಗಳಲ್ಲಿ ಬರೋಬ್ಬರಿ ಆರು ಬಾರಿ ಸೋಲುವ ಮೂಲಕ ಸೋಲಿನಲ್ಲೂ ಭುಟಿಯಾ ದಾಖಲೆ ಬರೆದಿದ್ದಾರೆ.

ಬೈಚುಂಗ್ ಭುಟಿಯಾ ಅವರು 2018 ರಲ್ಲಿ ತಮ್ಮದೇ ಆದ ಹಮ್ರೋ ಸಿಕ್ಕಿಂ ಪಕ್ಷವನ್ನು ಸ್ಥಾಪಿಸಿದ್ದರು. ಆದರೆ ಕಳೆದ ವರ್ಷ ಅದನ್ನು ಎಸ್‌ಡಿಎಫ್‌ನೊಂದಿಗೆ ವಿಲೀನಗೊಳಿಸಿದ್ದರು. ಪ್ರಸ್ತುತ ಅವರು ಎಸ್‌ಡಿಎಫ್‌ನ ಉಪಾಧ್ಯಕ್ಷರಾಗಿದ್ದಾರೆ. ಇದಕ್ಕೂ ಮೊದಲು ಮಾಜಿ ಫುಟ್ಬಾಲ್ ಆಟಗಾರ ಬೈಚುಂಗ್ ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಎರಡು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು.

2014 ರ ಲೋಕಸಭಾ ಚುನಾವಣೆಯಲ್ಲಿ ಡಾರ್ಜಿಲಿಂಗ್‌ನಿಂದ ಹಾಗೂ 2016 ರ ವಿಧಾನಸಭಾ ಚುನಾವಣೆಯಲ್ಲಿ ಸಿಲಿಗುರಿಯಿಂದ ಸ್ಪರ್ಧಿಸಿದ್ದರು. ಆದರೆ ಎರಡೂ ಕಡೆಯೂ ಅವರು ಸೋಲು ಅನುಭವಿಸಿದ್ದರು.

ನಂತರ ಹಿಮಾಲಯ ಪ್ರದೇಶದಲ್ಲಿ ಬರುವ ಸರೋವರಗಳಿಗೆ ಹೆಸರುವಾಸಿಯಾಗಿರುವ ಸುಂದರವಾದ ರಾಜ್ಯ ಸಿಕ್ಕಿಂನಲ್ಲಿ ರಾಜಕೀಯ ನೆಲೆ ಕಂಡುಕೊಳ್ಳಲು ಬಯಸಿದ ಅವರು ಅಲ್ಲಿ ತಮ್ಮದೇ ಪಕ್ಷವನ್ನು ಸ್ಥಾಪಿಸಿದರು. 2019 ರ ವಿಧಾನಸಭಾ ಚುನಾವಣೆಯಲ್ಲಿ ಗ್ಯಾಂಗ್ಟಾಕ್ ಮತ್ತು ತುಮೆನ್ ಲಿಂಗಿಯಿಂದ ಸ್ಪರ್ಧಿಸಿದರು ಆದರೆ ಎರಡೂ ಕ್ಷೇತ್ರಗಳಲ್ಲೂ ಅವರು ಮತ್ತೆ ಸೋಲು ಕಂಡರು.

2019 ರಲ್ಲಿ ಮತ್ತೆ ಗ್ಯಾಂಗ್‌ಟಾಕ್‌ನ ಉಪ ಚುನಾವಣೆಯಲ್ಲಿಯೂ ಸ್ಪರ್ಧಿಸಿ ಸೋತರು.
ಬೈಚುಂಗ್ ಭುಟಿಯಾ
ಚುನಾವಣಾ ಫಲಿತಾಂಶದ ಕುರಿತು ಕಾರ್ಯತಂತ್ರ ರೂಪಿಸಲು ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸಭೆ
ಬೈಚುಂಗ್ ಭುಟಿಯಾ ಸಿಕ್ಕಿಂ ವಿಧಾನಸಭಾ ಚುನಾವಣೆಗೂ ಮುನ್ನ ಎಸ್‌ಡಿಎಫ್‌ಗೆ ಸೇರಿದ್ದರು.

Assembly Constituency ಅವರು ಹಿಂದಿನ ಹಮ್ರೊ ಸಿಕ್ಕಿಂ ಪಕ್ಷವನ್ನು ಎಸ್‌ಡಿಎಫ್‌ನೊಂದಿಗೆ ವಿಲೀನಗೊಳಿಸಿದ್ದರು. ಇದೀಗ ವಿಧಾನಸಭೆ ಚುನಾವಣೆಯಲ್ಲೂ ಸೋಲು ಕಂಡಿದ್ದಾರೆ.
ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಭಾನುವಾರ ಹಿಮಾಲಯ ರಾಜ್ಯದಲ್ಲಿ 32 ಸದಸ್ಯ ಬಲದ ಅಸೆಂಬ್ಲಿಯಲ್ಲಿ 31 ಸ್ಥಾನಗಳನ್ನು ಗೆದ್ದು ಪ್ರಚಂಡ ಜಯಗಳಿಸುವ ಮೂಲಕ ಸತತ ಎರಡನೇ ಅವಧಿಗೆ ಅಧಿಕಾರಕ್ಕೆ ಮರಳಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...