Sunday, August 2, 2026
Sunday, August 2, 2026

Pradeep Eshwar ಶಾಸಕ ಪ್ರದೀಪ್ ಈಶ್ವರ್ ಹೇಳಿಕೆ ವಿವಾದ: ಮನೆ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ

Date:

Pradeep Eshwar ಲೋಕಸಭೆ ಚುನಾವಣೆ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ನಿನ್ನೆ ರಾತ್ರಿ ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ ಮನೆ ಮೇಲೆ ಕಲ್ಲು ತೂರಾಟ ನಡೆದಿದೆ.
ಚಿಕ್ಕಬಳ್ಳಾಪುರ ನಗರದ ಕಂದವಾರದಲ್ಲಿರುವ ಶಾಸಕ ಪ್ರದೀಪ್ ಮನೆಯ ಮೇಲೆ ಕಿಡಿಗೇಡಿಗಳು ನಡೆಸಿದ ಕಲ್ಲುತೂರಾಟದಲ್ಲಿ ಕಿಟಕಿ ಗಾಜು ಒಡೆದಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಪೊಲೀಸ್ ಉಪಾಧೀಕ್ಷಕ ಎಸ್. ಶಿವಕುಮಾರ್, ಪೊಲೀಸ್ ಇನ್ಸ್ಪೆಕ್ಟರ್ ಎಂ.ಮಂಜುನಾಥ ಹಾಗೂ ಸಿಬ್ಬಂದಿ ಶಾಸಕರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮನೆಯ ಸಿಸಿಟಿವಿ ಪರಿಶೀಲನೆ ನಡೆಸಲಾಗಿದ್ದು ಮನೆಯಲ್ಲಿದ್ದ ಸಿಬ್ಬಂದಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಡಾ.ಕೆ.ಸುಧಾಕರ್ ಗೆಲುವು ಹಿನ್ನಲೆ ಕಲ್ಲು ತೂರಾಟ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ.
ಘಟನೆ ಸಂಬಂಧ ಪ್ರತಿಕ್ರಿಯಿಸಿರುವ ಶಾಸಕ ಪ್ರದೀಪ್ ಈಶ್ವರ್ ಅವರ ತಮ್ಮ ಚೇತನ್, ಲೋಕಸಭಾ ಚುನಾವಣೆಯಲ್ಲಿ ಡಾ.ಕೆ.ಸುಧಾಕರ್ ಗೆದ್ದ ಕಾರಣ ಅವರ ಬೆಂಬಲಿಗರೆ ಕೃತ್ಯ ಎಸಗಿದ್ದಾಗಿ ಶಂಕೆ ವ್ಯಕ್ತಪಡಿಸಿದ್ದಾರೆ.
Pradeep Eshwar ಶಾಸಕರಾದ ಪ್ರದೀಪ್ ಈಶ್ವರ್ ಮನೆಯ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂಧ ಮನೆಯ ಸಿಬ್ಬಂದಿ ಮುನಿಕೃಷ್ಣ ಮಾಹಿತಿ ನೀಡಿ, ರಾತ್ರಿ 10.15 ಸಮಯದಲ್ಲಿ ನಾಲ್ಕು ಜನ ಹುಡುಗರು ಕಲ್ಲು ತೂರಾಟ ನಡೆಸಿದ್ದಾರೆ. ಸಿಸಿಟಿವಿ ಕ್ಯಾಮೆರಾ ಸೆನ್ಸರ್ ಆನ್ ಆಗ್ತಿದ್ದಂತೆ ಹುಡುಗರು ಓಡಿ ಹೋದರು. ನಾಲ್ಕೈದು ಕಲ್ಲುಗಳನ್ನು ಎಸೆದಿದ್ದಾರೆ. ಮನೆಯ ಕಿಟಕಿ ಪುಡಿ ಪುಡಿ ಆಗಿದೆ. ಕಲ್ಲಿನ ಶಬ್ದ ಕೇಳಿ ಆಚೆ ಬಂದೆವು ಭಯ ಆಯಿತು. ಅಭಿ, ತಾರಕ್ ನಾನು ರೂಮ್ ನಲ್ಲಿ ಇದ್ದೆವು. ಮನೆ ಮಾಡಿ ಒಂದು ವರ್ಷ ಆಗಿದೆ. ಇದೇ ಮೊದಲ ಬಾರಿಗೆ ಈ ರೀತಿಯ ಘಟನೆ ನಡೆದಿದೆ ಎಂದರು.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಾಜಿ ಸಚಿವ ಡಾ ಕೆ.ಸುಧಾಕರ್‌ ಅವರು ಕಾಂಗ್ರೆಸ್ ನ ರಕ್ಷಾ ರಾಮಯ್ಯ ಅವರನ್ನು 1,12,866 ಮತಗಳ ಅಂತರದಿಂದ ಸೋಲಿಸಿ ಲೋಕಸಭೆ ಪ್ರವೇಶಿಸುತ್ತಿದ್ದಾರೆ.ಈ ಹಿನ್ನೆಲೆಯಲ್ಲಿ‌ ಘಟನೆ ನಡೆದಿದೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...