Monday, December 15, 2025
Monday, December 15, 2025

Nehru Youth Centre ಪರಿಸರವನ್ನ ಅರ್ಥಮಾಡಿಕೊಳ್ಳೋಣ- ಕೆ.ಟಿ.ಕೆ.ಉಲ್ಲಾಸ್

Date:

Nehru Youth Centre ಭಾರತ ಸರ್ಕಾರ, ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ, ನೆಹರು ಯುವ ಕೇಂದ್ರ, ಶಿವಮೊಗ್ಗ ಮತ್ತು ವಿದ್ಯಾನಿಕೇತನ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ,ಗೋಪಾಳ, ಮುಖಾ ಮುಖಿ ರಂಗತಂಡದ ಸಹಯೋಗದೊಂದಿಗೆ ದಿನಾಂಕ 05.06.2024 ರಂದು ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಕ್ಕಳಿಗೆ ಪರಿಸರದ ಬಗ್ಗೆ ,ಗಿಡಗಳನ್ನು ಏಕೆ ನೆಡಬೇಕು ಅದರಿಂದಾಗುವ ಪ್ರಯೋಜನಗಳು, ಗಿಡ,ಮರಗಳು ನಮಗೆ ನೀಡಿರುವ ಕೊಡುಗೆಗಳು ಹಾಗೂ ಪರಿಸರವನ್ನು ಹೇಗೆ ಕಾಪಾಡಿಕೊಳ್ಳಬೇಕು ಎಂಬುದರ ಬಗ್ಗೆ ಸವಿವರವಾಗಿ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿಗಳಾದ ಶ್ರೀ.ಉಲ್ಲಾಸ್‌ ಕೆ.ಟಿ.ಕೆ ರವರು ತಿಳಿಸಿದರು.

Nehru Youth Centre ಮಕ್ಕಳು ಪರಿಸರದ ಬಗ್ಗೆ ತಮಗೆ ತಿಳಿದ ವಿಚಾರಗಳನ್ನು ಮಾತನಾಡಿದರು. ಕಾರ್ಯಕ್ರಮದಲ್ಲಿ ವಿದ್ಯಾನಿಕೇತನ ಶಾಲೆಯ ಮುಖ್ಯೋಪಾಧ್ಯಾಯರು,ಮುಖಾಮುಖಿ ರಂಗತಂಡದ ಮಹೇಂದ್ರ,ರಂಗಾಯಣ ಮಂಜು, ಶಿಕ್ಷಕ ವೃಂದದವರು, ಆಡಳಿತ ಮಂಡಳಿಯವರು,ಶಾಲಾಮಕ್ಕಳು ಉಪಸ್ಥಿತರಿದ್ದರು ಹಾಗೂ ಎಲ್ಲರೂ ಜೊತೆಗೂಡಿ ಶಾಲೆಯ ಸುತ್ತಮುತ್ತ ಗಿಡಗಳನ್ನು ನೆಡುವುದರ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...