Wednesday, July 16, 2025
Wednesday, July 16, 2025

Indian Mountaineering Foundation ಉತ್ತರಾಖಂಡ್ ಚಾರಣದಲ್ಲಿದ್ದ ಕರ್ನಾಟದ ನಾಲ್ವರ ಮರಣ

Date:

Indian Mountaineering Foundation ಚಾರಣಕ್ಕೆಂದು ತೆರಳಿದ್ದ ಕರ್ನಾಟಕದ ನಾಲ್ವರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಈ ಹಿನ್ನೆಲೆ ತಂಡದ ನೆರವಿಗಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಉತ್ತರಾಖಂಡಕ್ಕೆ ಪ್ರಯಾಣ ಬೆಳೆಸಿದ್ದಾರೆ.
ಘಟನೆಯ ಬಗ್ಗೆ ಮಾಹಿತಿ ನೀಡಿರುವ ಸಚಿವ ಕೃಷ್ಣ ಬೈರೇಗೌಡ, “ಕರ್ನಾಟಕದ 20 ಜನ ಚಾರಣಿಗರು ಹಾಗೂ ಓರ್ವ ಗೈಡ್‌ ಒಳಗೊಂಡ ತಂಡ ಉತ್ತರಾಖಂಡದ ಎತ್ತರದ ಶಾಸ್ತ್ರತಾಳ್ ಮಯಳಿ ಎಂಬ ಪ್ರದೇಶದಲ್ಲಿ ಮಂಗಳವಾರ ಬೆಳಗ್ಗೆ ಚಾರಣ ಆರಂಭಿಸಿದ್ದರು. ಗಮ್ಯಸ್ಥಾನ ತಲುಪಿದ ತಂಡ ಮತ್ತೆ ಶಿಬಿರಕ್ಕೆ ಹಿಂತಿರುಗಲು ಯತ್ನಿಸಿದೆ. ಆದರೆ, ಹಿಂತಿರುಗುವ ಮಾರ್ಗ ಮಧ್ಯೆ ನಿನ್ನೆ ಮಧ್ಯಾಹ್ನ 2 ಗಂಟೆಗೆ ಹಿಮಗಾಳಿಯಿಂದಾಗಿ ಹವಾಮಾನ ಸಂಪೂರ್ಣ ಹದಗೆಟ್ಟಿದೆ. ಹೀಗಾಗಿ ಎಲ್ಲಾ ಚಾರಣಿಗರು ಅದೇ ಸ್ಥಳದಲ್ಲಿ ಅಪಾಯಕ್ಕೆ ಸಿಲುಕಿದ್ದರು” ಎಂದು ತಿಳಿಸಿದ್ದಾರೆ.
Indian Mountaineering Foundation “ಕರ್ನಾಟಕದ ಚಾರಣಿಗರು ಪ್ರತಿಕೂಲ ವಾತಾವರಣದಿಂದಾಗಿ ಅಪಾಯಕ್ಕೆ ಸಿಲುಕಿದೆ ಎಂಬ ಮಾಹಿತಿ ನಿನ್ನೆ ರಾತ್ರಿ ನಮಗೆ ತಿಳಿದು ಬಂದಿತ್ತು. ಕೂಡಲೇ ಜಿಲ್ಲಾಡಳಿತದ ಮುಖಾಂತರ ಉತ್ತರಾಖಂಡ ಸರ್ಕಾರ, ಭಾರತೀಯ ಪರ್ವತಾರೋಹಣ ಒಕ್ಕೂಟ ಮತ್ತು ಕೇಂದ್ರ ಸರ್ಕಾರದ ಗೃಹ ಇಲಾಖೆಯನ್ನು ಸಂಪರ್ಕಿಸಲಾಯಿತು. ಅವರ ಸಹಾಯದಿಂದ ಕರ್ನಾಟಕದ ಚಾರಣಿಗರ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ” ಎಂದು ಸಚಿವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddaramaiah ಸಿಎಂ ಸಿದ್ಧರಾಮಯ್ಯ ಅವರ ಪತ್ರಕ್ಕೆ ಕೇಂದ್ರ ಸಚಿವ ಗಡ್ಕರಿ ಅವರ ಪತ್ರ- ಪ್ರತಿಕ್ರಿಯೆ

CM Siddaramaiah ಪ್ರಾದೇಶಿಕ ಸಂಪರ್ಕವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿ,...