Tuesday, April 21, 2026
Tuesday, April 21, 2026

Sharada Pooryanayak ಶಿವಮೊಗ್ಗ ಗ್ರಾಮಾಂತರದಲ್ಲೂ ರಾಘವೇಂದ್ರಗೆ ಲೀಡ್: ಜಿಲ್ಲೆಯಲ್ಲಿ ಮೈತ್ರಿ ಯಶಸ್ವಿ- ಶಾಸಕಿ ಶಾರದಾ ಪೂರ್ಯಾನಾಯಕ್

Date:

Sharada Poorya nayak ಪಕ್ಷದ ನಾಯಕರು ಕೊಟ್ಟ ಚುನಾವಣೆಯ ಜವಾಬ್ದಾರಿಯನ್ನು ಸಮರ್ಪಕವಾಗಿ ಈಡೇರಿಸುವುದರ ಮೂಲಕ ಬಿಜೆಪಿ ಜೊತೆಗಿನ ಮೈತ್ರಿ ಯಶಸ್ವಿಯಾಗುವಂತೆ, ಶಿವಮೊಗ್ಗ ಕ್ಷೇತ್ರದಲ್ಲಿ ಜಯಶಾಲಿಯಾಗುವಂತೆ ಮಾಡಿದ್ದೇವೆ ಎಂದು ಶಾಸಕಿ ಶಾರದಾ ಪೂರ್ಯನಾಯ್ಕ ಹೇಳಿದರು.
ಸುದ್ದಿಗೋ಼ಷ್ಠಿಯಲ್ಲಿ ಮಾತನಾಡಿದ ಅವರು, ಶ್ರಮವಹಿಸಿ ಕಾರ್ಯಕರ್ತರು ಬಿಜೆಪಿ ಪರ ಕೆಲಸ ಮಾಡಿದ್ದಾರೆ. ರಾಘವೇಂದ್ರ ಗೆಲುವು ಖುಷಿ ತಂದುಕೊಟ್ಟಿದೆ. ರಾಜ್ಯದಲ್ಲೂ ಸಹ ಬಿಜೆಪಿ ಜೊತೆಗೆನ ಮೈತ್ರಿಯಿಂದ ಎರಡೂ ಪಕ್ಷಕ್ಕೆ ಅನುಕೂಲವಾಗಿದೆ ಎಂದರು.
ರಾಜ್ಯ ಜೆಡಿಎಸ್ ಉಪಾಧ್ಯಕ್ಷ ಕೆ. ಬಿ. ಪ್ರಸನ್ನಕುಮಾರ್ ಮಾತನಾಡಿ, ಬಿಜೆಪಿ ಅಭ್ಯರ್ಥಿಯ ಉತ್ತಮ ಕೆಲಸದಿಂದ ಮತ್ತು ಜೆಡಿಎಸ್‌ನ ಸಹಕಾರದಿಂದ ಶಿವಮೊಗ್ಗ ಕ್ಷೇತ್ರದಲ್ಲಿ ಗೆಲುವು ಸುಲಭವಾಗಿದೆ. ರಾಜ್ಯ ಸರಕಾರ ಗ್ಯಾರಂಟಿ ಮೂಲಕ ಚುನಾವಣೆ ನಡೆಸಿದರೂ ಯಶಸ್ವಿಯಾಗಲಿಲ್ಲ. ಕಡಿಮೆ ಸ್ಥಾನ ಗಳಿಸಿದ ಹಿನ್ನೆಲೆಯಲ್ಲಿ ಗ್ಯಾರಂಟಿ ನಿಲ್ಲಿಸಬಾರದು. ಅಭಿವೃದ್ಧಿ ಕೆಲಸಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕು. ಜಿಪಂ ಮತ್ತು ತಾಪಂ, ಪಾಲಿಕೆಯ ಚುನಾವಣೆಗೆೆ ಶೀಘ್ರ ಅಧಿಸೂಚನೆ ಹೊರಡಿಸಬೇಕೆಂದು ಆಗ್ರಹಿಸಿದರು.
Sharada Poorya nayak ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕಡಿದಾಳ ಗೋಪಾಲ್ ಮಾತನಾಡಿ, ರಾಘವೇಂದ್ರ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಅದರೊಟ್ಟಿಗೆ ಜೆಡಿಎಸ್‌ನವರೊಂದಿಗೆ ಮೈತ್ರಿಯು ಅವರ ಗೆಲುವಿನಲ್ಲಿ ಫಲ ಕೊಟ್ಟಿದೆ. ಗೆದ್ದ ನಂತರ ಜೆಡಿಎಸ್ ಕಚೇರಿಗೆ ಬಂದು ಪಕ್ಷದವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ನಾವೂ ಸಹ ಅವರನ್ನು ಅಭಿನಂದಿಸಿದ್ದೇವೆ. ಜೆಡಿಎಸ್ ಪ್ರಾಬಲ್ಯವಿರುವ ಜಿಲ್ಲೆಗಳಲ್ಲಿ ವಿಶೇಷವಾಗಿ ಮೈಸೂರು ಭಾಗಗಳಲ್ಲಿ ಬಿಜೆಪಿಗೆ ಮೈತ್ರಿ ಅನುಕೂಲ ಕಲ್ಪಿಸಿಕೊಟ್ಟಿದೆ. ಇದರಿಂದ ಕಾಂಗ್ರೆಸ್‌ಗೆ ಪ್ರಬಲ ಪೆಟ್ಟು ಬಿದ್ದಿದೆ. ಮೈತ್ರಿಯಿಂದ ನಷ್ಟವೇನೂ ಆಗಿಲ್ಲ. ಹಾಸನದ ಸೋಲಿಗೆ ವಿಷಾದವಿದೆ ಎಂದರಾದರೂ ಸೋಲಿಗೆ ನಿರ್ದಿಷ್ಟ ಕಾರಣವನ್ನು ಹೇಳಲು ಅವರು ನಿರಾಕರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ದೀಪಕ್ ಸಿಂಗ್, ನರಸಿಂಹ ಗಂಧದಮನೆ, ವಿನಯ್, ಗೀತಾ ಪವಾರ್ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಕ್ರಾಂತಿಕಾರಿ ಬಸವಣ್ಣನವರ ದಾರಿಯಲ್ಲಿ ಸಾಗುವ ಸಂಕಲ್ಪ ಮಾಡೋಣ- ಬಿ.ವೈ.ರಾಘವೇಂದ್ರ

B.Y. Raghavendra ಕಾಯಕ- ದಾಸೋಹ ಮತ್ತು ಸಾಮಾಜಿಕ ನ್ಯಾಯದ ತತ್ವಗಳನ್ನು ಸಾರಿದ...

Bharat Scouts and Guides ಕೃಷಿ ಕ್ಷೇತ್ರ ಮಾಹಿತಿಯಿಂದ ವಿದ್ಯಾರ್ಥಿಗಳು ಪರಿಪೂರ್ಣರಾಗಲು ಸಾಧ್ಯ- ಕೆ.ರವಿ

Bharat Scouts and Guides ಕೃಷಿ ಕ್ಷೇತ್ರದಲ್ಲಿ ಆಗುತ್ತಿರುವ ಪ್ರಗತಿಯ ಬಗ್ಗೆ...

Klive special Article “ಶಂಕರಂ ಲೋಕ ಶಂಕರಂ” ಎನ್.ಜಯಭೀಮ್ ಜೊಯ್ಸ್, ಶಿವಮೊಗ್ಗ

Klive special Article ಶ್ರೀಶಂಕರಾಚಾರ್ಯ ಗುರುಗಳು (ಶ್ರೀಶಂಕರಜಯಂತಿಯ ಸಂದರ್ಭದಲ್ಲಿ)ಪ್ರತಿವರ್ಷ ವೈಶಾಖಮಾಸದ...

RM Manjunath Gowda ಹುಲಿಕಲ್ ಘಾಟಿ ಪ್ರಕರಣ.ಇಂಜಿನಿಯರುಗಳೇ ಹೊಣೆ. ಎಫ್ ಐ ಆರ್ ದಾಖಲಿಸಲು ಎಸ್ ಪಿ.ಅವರಿಗೆ ಮನವಿ ಮಾಡುವೆ- ಆರ್.ಎಂ.ಮಂಜುನಾಥ ಗೌಡ.

RM Manjunath Gowda ಹುಲಿಕಲ್ ಘಾಟಿ ಪ್ರಕರಣದಲ್ಲಿ ಎಫ್ಐಆರ್ ದಾಖಲಾದ ಹಿನ್ನೆಲೆಯಲ್ಲಿ ಮಕೆನಾಡು...