Wednesday, May 6, 2026
Wednesday, May 6, 2026

Sharada Pooryanayak ಶಿವಮೊಗ್ಗ ಗ್ರಾಮಾಂತರದಲ್ಲೂ ರಾಘವೇಂದ್ರಗೆ ಲೀಡ್: ಜಿಲ್ಲೆಯಲ್ಲಿ ಮೈತ್ರಿ ಯಶಸ್ವಿ- ಶಾಸಕಿ ಶಾರದಾ ಪೂರ್ಯಾನಾಯಕ್

Date:

Sharada Poorya nayak ಪಕ್ಷದ ನಾಯಕರು ಕೊಟ್ಟ ಚುನಾವಣೆಯ ಜವಾಬ್ದಾರಿಯನ್ನು ಸಮರ್ಪಕವಾಗಿ ಈಡೇರಿಸುವುದರ ಮೂಲಕ ಬಿಜೆಪಿ ಜೊತೆಗಿನ ಮೈತ್ರಿ ಯಶಸ್ವಿಯಾಗುವಂತೆ, ಶಿವಮೊಗ್ಗ ಕ್ಷೇತ್ರದಲ್ಲಿ ಜಯಶಾಲಿಯಾಗುವಂತೆ ಮಾಡಿದ್ದೇವೆ ಎಂದು ಶಾಸಕಿ ಶಾರದಾ ಪೂರ್ಯನಾಯ್ಕ ಹೇಳಿದರು.
ಸುದ್ದಿಗೋ಼ಷ್ಠಿಯಲ್ಲಿ ಮಾತನಾಡಿದ ಅವರು, ಶ್ರಮವಹಿಸಿ ಕಾರ್ಯಕರ್ತರು ಬಿಜೆಪಿ ಪರ ಕೆಲಸ ಮಾಡಿದ್ದಾರೆ. ರಾಘವೇಂದ್ರ ಗೆಲುವು ಖುಷಿ ತಂದುಕೊಟ್ಟಿದೆ. ರಾಜ್ಯದಲ್ಲೂ ಸಹ ಬಿಜೆಪಿ ಜೊತೆಗೆನ ಮೈತ್ರಿಯಿಂದ ಎರಡೂ ಪಕ್ಷಕ್ಕೆ ಅನುಕೂಲವಾಗಿದೆ ಎಂದರು.
ರಾಜ್ಯ ಜೆಡಿಎಸ್ ಉಪಾಧ್ಯಕ್ಷ ಕೆ. ಬಿ. ಪ್ರಸನ್ನಕುಮಾರ್ ಮಾತನಾಡಿ, ಬಿಜೆಪಿ ಅಭ್ಯರ್ಥಿಯ ಉತ್ತಮ ಕೆಲಸದಿಂದ ಮತ್ತು ಜೆಡಿಎಸ್‌ನ ಸಹಕಾರದಿಂದ ಶಿವಮೊಗ್ಗ ಕ್ಷೇತ್ರದಲ್ಲಿ ಗೆಲುವು ಸುಲಭವಾಗಿದೆ. ರಾಜ್ಯ ಸರಕಾರ ಗ್ಯಾರಂಟಿ ಮೂಲಕ ಚುನಾವಣೆ ನಡೆಸಿದರೂ ಯಶಸ್ವಿಯಾಗಲಿಲ್ಲ. ಕಡಿಮೆ ಸ್ಥಾನ ಗಳಿಸಿದ ಹಿನ್ನೆಲೆಯಲ್ಲಿ ಗ್ಯಾರಂಟಿ ನಿಲ್ಲಿಸಬಾರದು. ಅಭಿವೃದ್ಧಿ ಕೆಲಸಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕು. ಜಿಪಂ ಮತ್ತು ತಾಪಂ, ಪಾಲಿಕೆಯ ಚುನಾವಣೆಗೆೆ ಶೀಘ್ರ ಅಧಿಸೂಚನೆ ಹೊರಡಿಸಬೇಕೆಂದು ಆಗ್ರಹಿಸಿದರು.
Sharada Poorya nayak ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕಡಿದಾಳ ಗೋಪಾಲ್ ಮಾತನಾಡಿ, ರಾಘವೇಂದ್ರ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಅದರೊಟ್ಟಿಗೆ ಜೆಡಿಎಸ್‌ನವರೊಂದಿಗೆ ಮೈತ್ರಿಯು ಅವರ ಗೆಲುವಿನಲ್ಲಿ ಫಲ ಕೊಟ್ಟಿದೆ. ಗೆದ್ದ ನಂತರ ಜೆಡಿಎಸ್ ಕಚೇರಿಗೆ ಬಂದು ಪಕ್ಷದವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ನಾವೂ ಸಹ ಅವರನ್ನು ಅಭಿನಂದಿಸಿದ್ದೇವೆ. ಜೆಡಿಎಸ್ ಪ್ರಾಬಲ್ಯವಿರುವ ಜಿಲ್ಲೆಗಳಲ್ಲಿ ವಿಶೇಷವಾಗಿ ಮೈಸೂರು ಭಾಗಗಳಲ್ಲಿ ಬಿಜೆಪಿಗೆ ಮೈತ್ರಿ ಅನುಕೂಲ ಕಲ್ಪಿಸಿಕೊಟ್ಟಿದೆ. ಇದರಿಂದ ಕಾಂಗ್ರೆಸ್‌ಗೆ ಪ್ರಬಲ ಪೆಟ್ಟು ಬಿದ್ದಿದೆ. ಮೈತ್ರಿಯಿಂದ ನಷ್ಟವೇನೂ ಆಗಿಲ್ಲ. ಹಾಸನದ ಸೋಲಿಗೆ ವಿಷಾದವಿದೆ ಎಂದರಾದರೂ ಸೋಲಿಗೆ ನಿರ್ದಿಷ್ಟ ಕಾರಣವನ್ನು ಹೇಳಲು ಅವರು ನಿರಾಕರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ದೀಪಕ್ ಸಿಂಗ್, ನರಸಿಂಹ ಗಂಧದಮನೆ, ವಿನಯ್, ಗೀತಾ ಪವಾರ್ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಹತ್ತು ಚಿನ್ನದ ಪದಕ ಮುಡಿಗೇರಿಸಿದ ಕುವೆಂಪು ವಿವಿಗೇ ಪ್ರಥಮ ವಿದ್ಯಾರ್ಥಿಎಂ.ಎ.(ಕನ್ನಡ) ವಿಭಾಗದ ಪ್ರತಿಭೆ, ಹೆಚ್.ಎಂ.ಅಭಿಷೇಕ್.

Kuvempu University ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಮೂಲಕ ಗಮನ...

Kuvempu university ಕುವೆಂಪು ವಿವಿಯಿಂದ ಗೌರಗ ಡಾಕ್ಟರೇಟ್ ಪಡೆದ ಮಹನಿಯರ ಮಾಹಿತಿ

Kuvempu university ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ನಾಡಿನ ಮೂವರು ಗಣ್ಯ...

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ,ದೇಶದವಾಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...