Monday, February 2, 2026
Monday, February 2, 2026

B. Nagendra ಸ್ವ ಇಚ್ಛೆಯಿಂದ ರಾಜೀನಾಮೆ ನೀಡಿರುವೆ- ಸಚಿವ ಬಿ.ನಾಗೇಂದ್ರ

Date:

B. Nagendra ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಲ್ಲಿ ಅವ್ಯವಹಾರ ನಡೆದ ಆರೋಪ ಕೇಳಿ ಬಂದಿರುವ ಹಿನ್ನೆಲೆ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಚಿವ ಬಿ.ನಾಗೇಂದ್ರ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ನನ್ನ ಮೇಲೆ ಯಾರೂ ಒತ್ತಡ ಹಾಕಿಲ್ಲ. ನನ್ನ ಆತ್ಮ ಸಾಕ್ಷಿಯಾಗಿ, ಸ್ವ ಇಚ್ಚೆಯಿಂದ ರಾಜೀನಾಮೆ ನೀಡಲು ಮುಂದಾಗಿದ್ದೇನೆ. ಮುಖ್ಯಮಂತ್ರಿಗಳನ್ನು ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

ಪಕ್ಷ, ಸರ್ಕಾರಕ್ಕೆ ಮುಜುರಗ ಆಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ಎಸ್‌ಐಟಿ ನಿಷ್ಪಕ್ಷಪಾತವಾಗಿ ಪ್ರಕರಣದ ತನಿಖೆ ನಡೆಸುತ್ತಿದೆ. ನಾನು ಮಂತ್ರಿ ಸ್ಥಾನದಲ್ಲಿದ್ದರೆ ತನಿಖೆಗೆ ತೊಂದರೆಯಾಗಬಹುದು. ಹಾಗಾಗಿ, ಈಗ ರಾಜೀನಾಮೆ ನೀಡಿ ಆರೋಪ ಮುಕ್ತನಾದ ಬಳಿಕ ಸಚಿವ ಸ್ಥಾನಕ್ಕೆ ಮರಳುತ್ತೇನೆ ಎಂದಿದ್ದಾರೆ.

B. Nagendra “ಆತ್ಮಹತ್ಯೆ ಮಾಡಿಕೊಂಡಿರುವ ನಿಗಮದ ಅಧೀಕ್ಷರಾಗಿದ್ದ ಚಂದ್ರಶೇಖರನ್ ಅವರ ಡೆತ್ ನೋಟ್‌ನಲ್ಲಿ ನಿಮ್ಮ ಹೆಸರಿದೆ ಎಂದು ಹೇಳಲಾಗ್ತಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ನಾಗೇಂದ್ರ, ಇಲ್ಲ ನನ್ನ ಹೆಸರು ಉಲ್ಲೇಖಿಸಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...