Wednesday, September 16, 2026
Wednesday, September 16, 2026

B. Nagendra ಸ್ವ ಇಚ್ಛೆಯಿಂದ ರಾಜೀನಾಮೆ ನೀಡಿರುವೆ- ಸಚಿವ ಬಿ.ನಾಗೇಂದ್ರ

Date:

B. Nagendra ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಲ್ಲಿ ಅವ್ಯವಹಾರ ನಡೆದ ಆರೋಪ ಕೇಳಿ ಬಂದಿರುವ ಹಿನ್ನೆಲೆ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಚಿವ ಬಿ.ನಾಗೇಂದ್ರ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ನನ್ನ ಮೇಲೆ ಯಾರೂ ಒತ್ತಡ ಹಾಕಿಲ್ಲ. ನನ್ನ ಆತ್ಮ ಸಾಕ್ಷಿಯಾಗಿ, ಸ್ವ ಇಚ್ಚೆಯಿಂದ ರಾಜೀನಾಮೆ ನೀಡಲು ಮುಂದಾಗಿದ್ದೇನೆ. ಮುಖ್ಯಮಂತ್ರಿಗಳನ್ನು ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

ಪಕ್ಷ, ಸರ್ಕಾರಕ್ಕೆ ಮುಜುರಗ ಆಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ಎಸ್‌ಐಟಿ ನಿಷ್ಪಕ್ಷಪಾತವಾಗಿ ಪ್ರಕರಣದ ತನಿಖೆ ನಡೆಸುತ್ತಿದೆ. ನಾನು ಮಂತ್ರಿ ಸ್ಥಾನದಲ್ಲಿದ್ದರೆ ತನಿಖೆಗೆ ತೊಂದರೆಯಾಗಬಹುದು. ಹಾಗಾಗಿ, ಈಗ ರಾಜೀನಾಮೆ ನೀಡಿ ಆರೋಪ ಮುಕ್ತನಾದ ಬಳಿಕ ಸಚಿವ ಸ್ಥಾನಕ್ಕೆ ಮರಳುತ್ತೇನೆ ಎಂದಿದ್ದಾರೆ.

B. Nagendra “ಆತ್ಮಹತ್ಯೆ ಮಾಡಿಕೊಂಡಿರುವ ನಿಗಮದ ಅಧೀಕ್ಷರಾಗಿದ್ದ ಚಂದ್ರಶೇಖರನ್ ಅವರ ಡೆತ್ ನೋಟ್‌ನಲ್ಲಿ ನಿಮ್ಮ ಹೆಸರಿದೆ ಎಂದು ಹೇಳಲಾಗ್ತಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ನಾಗೇಂದ್ರ, ಇಲ್ಲ ನನ್ನ ಹೆಸರು ಉಲ್ಲೇಖಿಸಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...