Friday, March 20, 2026
Friday, March 20, 2026

Keladi Shivappa Nayaka University of Agricultural ಜೂನ್ 8 & 9 ರಂದು ಅಪರೂಪದ ದೇಸೀ ಬೀಜೋತ್ಸವ- ಬಿ.ಎಂ.ಮಲ್ಲಿಕಾರ್ಜುನಪ್ಪ

Date:

Keladi Shivappa Nayaka University of Agricultural ಸಹಜ ಸಮೃದ್ಧ ಸಂಸ್ಥೆ, ಕೆಳದಿ ಶಿವಪ್ಪನಾಯಕ ಕೃಷಿ ವಿ.ವಿ. ಆಶ್ರಯದಲ್ಲಿ ಜೂ. 8 ಮತ್ತು 9ರಂದು ವೀರಶೈವ ಕಲ್ಯಾಣ ಮಂಟಪ್ಪದಲ್ಲಿ ದೇಸೀ ಬೀಜೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಬಿ.ಎಂ. ಮಲ್ಲಿಕಾರ್ಜುನ ಹೇಳಿದರು.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಇಂದು ದೇಸೀಯ ತಳಿಗಳನ್ನು ಉಳಿಸಿಕೊಳ್ಳುವುದೇ ಕಷ್ಟವಾಗಿದೆ. ಹೈಬ್ರಿಡ್ ಬೀಜಗಳು ಬಂದ ಮೇಲೆ ಅನಿವಾರ್ಯವಾಗಿ ಕೀಟ ನಾಶಕ, ರಾಸಾಯನಿಕ ಕ್ರಿಮಿ ನಾಶಕಗಳನ್ನು ಬಳಸಬೇಕಾಗಿದೆ. ಇದರಿಂದ ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಲವು ಸಂಸ್ಥೆಗಳು ಸಾವಯವ ಕೃಷಿಕರು ಸೇರಿಕೊಂಡು ದೇಸಿ ಬೀಜಕ್ಕೆ ಆದ್ಯತೆ ನೀಡಿ, ನಮ್ಮ ರೈತರಿಗೆ ಮತ್ತು ತೋಟಗಾರಿಕೆ ಬೆಳೆಗಾರರಿಗೆ ತಲುಪಿಸುವ ಉದ್ದೇಶವನ್ನು ಇಟ್ಟುಕೊಂಡು ಈ ಬೀಜಮೇಳವನ್ನು ಆಯೋಜಿಸಿದ್ದೇವೆ ಎಂದರು.

ಉಳಿವು ಪೌಂಡೇಶ್‌ನ್‌ನ ಡಾ.ಸೀಮಾ ಮಾತನಾಡಿ, ಸಾವಯವ ಕೃಷಿಗೆ ನಾವು ಆದ್ಯತೆ ನೀಡಬೇಕಾಗಿದೆ. ನಮ್ಮ ಎಲ್ಲಾ ಆಹಾರ ಇಂದು ವಿಷಭರಿತವಾಗಿದೆ. ಅದನ್ನು ವಿಷಮುಕ್ತ ಮಾಡಬೇಕಾಗಿದೆ. ಭೂಮಿಯನ್ನೇ ವಿಷವನ್ನಾಗಿ ಮಾಡಲಾಗುತ್ತಿದೆ. ಇದು ತಪ್ಪಾಬೇಕಾಗಿದೆ. ಮಾನವರಿಗೆ ಒಳ್ಳೆಯ ಆಹಾರ ಸಿಗಬೇಕಾಗಿದೆ. ಈ ಎಲ್ಲಾ ಹಿನ್ನಲೆಯಲ್ಲಿ ಸಾವಯವ ಕೃಷಿ ಮತ್ತು ದೇಸಿಯ ಬೀಜಕ್ಕೆ ಆದ್ಯತೆ ನೀಡಲಾಗಿದೆ. ಆ ಬಗ್ಗೆ ಜನಜಗೃತಿ ಮೂಡಿಸುವ ಉದ್ದೇಶವನ್ನು ಸಾವಯವ ಕೃಷಿಕರು ಮತ್ತು ಅನೇಕ ಸಂಘ ಸಂಸ್ಥೆಗಳು ಒಟ್ಟಾಗಿ ಈ ಕೆಲಸ ಮಾಡುತ್ತಿದ್ದೇವೆ ಎಂದರು.

ನಿವೃತ್ತ ಪ್ರೊಫೆಸರ್ ಎ.ವಿ. ಪ್ರದೀಪ್ ಮಾತನಾಡಿ, ಜೂ.೮ರಿಂದ ಎರಡು ದಿನಗಳ ಕಾಲ ನಡೆಯುವ ದೇಸಿ ಬೀಜೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಬಸವಕೇಂದ್ರದ ಶ್ರೀ ಮರುಳಸಿದ್ದಸ್ವಾಮೀಜಿ, ಕೃಷಿ ವಿ.ವಿ. ಉಪಕುಲಪತಿ ಡಾ. ಜಗದೀಶ್ ಆರ್.ಸಿ., ಸಹಜ ಸಮೃದ್ಧದ ನಿರ್ದೇಶಕ ಜಿ.ಕೃಷ್ಣಪ್ರಸಾದ್, ಸಾವಯವ ಸಂಶೋಧನ ಕೇಂದ್ರದ ಸಂಯೋಜಕ ಡಾ. ಎಸ್.ಪ್ರದೀಪ್, ಧಾನ್ಯ ಸಂಸ್ಥೆಯ ಮಲ್ಲಿಕಾರ್ಜುನ ಹೊಸಪಾಳ್ಯ, ಐಕಾಂತಿಕ ಸಂಸ್ಥೆಯ ರಾಘವ, ಸಾವಯವ ಪೌಷ್ಠಿಕ ಶಂಕರ ಎಂ.ದೇವೇಂದ್ರಪ್ಪ, ನಂದೀಶ್ ಉಪಸ್ಥಿತರಿರುವರು ಎಂದರು.
Keladi Shivappa Nayaka University of Agricultural ಮೇಳದಲ್ಲಿ ಸುಮಾರು 15ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆಯಲಾಗುತ್ತದೆ. ರಾಜ್ಯದ ವಿವಿಧ ಕಡೆಗಳಿಂದ ರೈತರು ತಾವೇ ನಿರ್ಮಿಸಿದ ದೇಸಿ ಬೀಜಗಳನ್ನು ಪ್ರದರ್ಶನ ಮಾಡುವುದಲ್ಲದೆ ಮಾರಾಟ ಕೂಡ ಮಾಡುತ್ತಾರೆ. ಭತ್ತ, ತರಕಾರಿ, ಸಿರಿದಾನ್ಯ ಬೀಜಗಳು, ಹಣ್ಣುಗಳ ಬೀಜಗಳು ಇಲ್ಲಿ ದೊರೆಯುತ್ತವೆ, ಜೊತೆಗೆ ಆಹಾರ ಮಳಿಗೆಗಳನ್ನು ಕೂಡ ತೆರೆಯಲಾಗುತ್ತದೆ. ಎಲ್ಲವೂ ದೇಸಿತನದಲ್ಲಿ ಇರುತ್ತದೆ ಎಂದರು.

ಗೋಷ್ಟಿಯಲ್ಲಿ ಕುಮಾರ ನಾಯ್ಡು, ದಿನೇಶ್ ಹೊಸನಗರ, ಸಂತೋಷ್ ಮುಂತಾದವರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...