Thursday, June 25, 2026
Thursday, June 25, 2026

Karnataka Public Service Commission ಜಿಲ್ಲೆಯಲ್ಲಿ ಇಲಾಖಾ ಪರೀಕ್ಷೆಗಳಿಗೆ ಸರ್ವ ಸಿದ್ಧತೆ- ಬಸವರಾಜ್

Date:

Karnataka Public Service Commission ಕರ್ನಾಟಕ ಲೋಕಸೇವಾ ಆಯೋಗದಿಂದ 2024 ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆ ಕುರಿತು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪೂರ್ವ ಸಿದ್ಧತಾ ಸಭೆಯಲ್ಲಿ ಡಯಟ್ ಪ್ರಾಂಶುಪಾಲರಾದ ಬಸವರಾಜ್ ಅವರು ಮಾಹಿತಿ ನೀಡಿದರು.

ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಹೊಸದಾಗಿ ನೇಮಕಗೊಂಡಿರುವ ಸಿಬ್ಬಂದಿಗಳಿಗೆ ನಡೆಸಲಾಗುವ ಇಲಾಖಾ ಪರೀಕ್ಷೆಗಳು ಇದಾಗಿದ್ದು, ವೇಳಾಪಟ್ಟಿ ಸಮಯ ಪ್ರತಿ ಪತ್ರಿಕೆಗಳಿಗೂ ಬೇರೆ ಬೇರೆ ಇರುತ್ತದೆ.

ದಿನಾಂಕ 07-06-2024 ರಿಂದ 09-06-2024 ಮತ್ತು 11-06-2024 ರಿಂದ 23-06-2024 ರವರೆಗೆ (10-06-2024 ಮತ್ತು 15-06-2024 ರಿಂದ 18-06-2024 ದಿನಗಳನ್ನು ಹೊರತುಪಡಿಸಿ) ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದು ತಿಳಿಸಿದರು.

ಶಿವಮೊಗ್ಗ ಜಿಲ್ಲೆಯ ಒಟ್ಟು 8 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆ ಮೇಲ್ವಿಚಾರಣೆಗಾಗಿ 2 ಜನ ವೀಕ್ಷಕರನ್ನು, ಮಾರ್ಗಾಧಿಕಾರಿಗಳು, ಸ್ಥಳೀಯ ನಿರೀಕ್ಷಣಾದಿಕಾರಿ ಸೇರಿದಂತೆ ಅಗತ್ಯ ಸಿಬ್ಬಂದಿಗಳನ್ನು ನೇಮಿಸಲಾಗಿದೆ.

ವಿಶೇಷ ಚೇತನರಿಗೆ, ದೃಷ್ಟಿಮಾಂದ್ಯ ಅಭ್ಯರ್ಥಿಗಳಿಗೆ ಕೆಪಿಎಸ್‍ಸಿ ನಿಯಮಾನುಸಾರ ಪರೀಕ್ಷೆ ನಡೆಸಲಾಗುವುದು. ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 144 ಸೆಕ್ಷನ್ ಜಾರಿ ಮಾಡಿ ಆದೇಶಿಸಲಾಗಿದೆ.

ಪರೀಕ್ಷಾ ಕೊಠಡಿಯಲ್ಲಿ ಮೊಬೈಲ್ ಫೋನ್, ಸ್ಮಾರ್ಟ್ ವಾಚ್ ಹಾಗೂ ಇತರೆ ಡಿಜಿಟಲ್ ಸಾಧನಗಳಿಗೆ ಅವಕಾಶವಿರುವುದಿಲ್ಲ. ಪೋಲಿಸ್ ಸಿಬ್ಬಂದಿಗಳು, ಆರೋಗ್ಯ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಸೂಕ್ತ ಆಸನ ವ್ಯವಸ್ಥೆ ಸೇರಿದಂತೆ ಮೂಲಭೂತ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಪರೀಕ್ಷೆಗಳು ಶಾಂತಯುತವಾಗಿ ನಡೆಯಲು ಅನುವಾಗುವಂತೆ ಪರೀಕ್ಷೆಗೆ ನಿಯೋಜಿತ ಅಧಿಕಾರಿಳು ಮತ್ತು ಹಾಗೂ ಸಿಬ್ಬಂದಿಗಳು ಎಚ್ವರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ತಿಳಿಸಿದರು.

Karnataka Public Service Commission ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಹಾಯಕರಾದ ಶಿವಕುಮಾರ್, ಡಿಹೆಚ್‍ಓ ಡಾ.ನಟರಾಜ್ ಹಾಗೂ ಪರೀಕ್ಷೆಗೆ ನಿಯೋಜಿಸಲಾದ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kodachadri Chits Pvt. Ltd ಗ್ರಾಹಕರೇ ಕೊಡಚಾದ್ರಿಚಿಟ್ಸ್ ನ ಹಿಂದಿರುವ ಶಕ್ತಿ- ಪರಶುರಾಮ್

Kodachadri Chits Pvt. Ltd ಕೊಡಚಾದ್ರಿ ಚಿಟ್ಸ್‌ನ ಯಶಸ್ಸಿನ ಹಿಂದಿನ ನಿಜವಾದ...

Rotary Club Shivamogga ಮಲೇರಿಯಾವನ್ನ ವೈಜ್ಞಾನಿಕ ಕ್ರಮಗಳಿಂದ ನಿರ್ಮೂಲನೆ ಮಾಡಲು ಸಾಧ್ಯ. ಈ ಕಾರ್ಯದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅನಿವಾರ್ಯ- ಡಾ.ಗುಡದಪ್ಪ ಕಸಬಿ

Rotary Club Shivamogga "ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಬಣಗೊಳ್ಳುವುದರಿಂದ ಸಾರ್ವಜನಿಕರಲ್ಲಿ...

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...