Tuesday, March 24, 2026
Tuesday, March 24, 2026

Sahyadri Ranga Taranga ಜೂನ್ 9 ರಂದು” ಡೈರೆಕ್ಟ್ ಆಕ್ಷನ್” ನಾಟಕ ಪ್ರದರ್ಶನ

Date:

Sahyadri Ranga Taranga ಸಹ್ಯಾದ್ರಿ ರಂಗತರಂಗ, ರೈತ ಸಂಘ ಮತ್ತು ಹಸಿರು ಸೇನೆ ಇವರ ಸಹಯೋಗದಲ್ಲಿ ರೈತ ಹೋರಾಟಗಾರ ಎಂ ಡಿ ನಂಜುಡಸ್ವಾಮಿ ಅವರ ಜೀವನಾಧಾರಿತ ನಾಟಕ ಡೈರೆಕ್ಟ್ ಆಕ್ಷನ್ ಜೂನ್ ೯ರಂದು ಕುವೆಂಪು ರಂಗಮಂದಿರದಲ್ಲಿ ಅಭಿನಯಿಸಲ್ಪಡಲಿದೆ.
ಪತ್ರಿಕಾಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ನಾಟಕದ ನಿರ್ದೇಶಕ ಕಾಂತೇಶ್ ಕದರಮಂಡಲಗಿ, ನಾಟಕವನ್ನು ಪ್ರೊ. ನಟರಾಜ ಹುಳಿಯಾರ್ ರಚಿಸಿದ್ದು, ತಾನು ನಿರ್ದೇಶಿಸಿದ್ದೇನೆ. ರಾಘವೇಂಧ್ರ ಪ್ರಭು ಅವರ ಸಂಗೀತವಿದೆ. ಮಂಜುನಾಥ ಕೂದುವಳ್ಳಿ ಬೆಳಕಿನ ನಿರ್ದೇಶನ ಮಾಡಿದ್ದಾರೆ. ನಂಜುಂಡಸ್ವಾಮಿಯವರ ಹೋರಾಟ, ರೈತ ಸಂಘವನ್ನು ರಾಜ್ಯದ ಮೂಲೆಮೂಲೆಯವರೆಗೆ ತಿರುಗಿ ಕಟ್ಟಿದ್ದು, ಡಬ್ಲ್ಯುಟಿಓ, ವಿರುದ್ಧ ಹೋರಾಟ, ರೈತರ ಬದುಕನ್ನು ಹಸನುಗೊಳಿಸಲು ಮಾಡಿದ ಯತ್ನ, ಕಿವುಡು ವ್ಯವಸ್ಥೆಯ ವಿರುದ್ಧ್ದ ಸಿಡಿದೆದ್ದಿದ್ದನ್ನು ನಾಟಕದಲ್ಲಿ ತೋರಿಲಾಗಿದೆ ಎಂದರು.
ಡೈರೆಕ್ಟ ಆಕ್ಷನ್ ಎನ್ನುವ ಪದ ಬಳಕೆ ನೇರ ಕ್ರಮ ಎನ್ನುವ ಅರ್ಥಕ್ಕೆ ಸಂಬಂಧಿಸಿದ್ದಾಗಿದೆ. ಈ ಪದವನ್ನು ನಂಜುಂಡಸ್ವಾಮಿಯವರು ಜಡ್ಡುಗಟ್ಟಿದ ಸರಕಾರಿ ವ್ಯವಸ್ಥೆಯ ವಿರುದ್ಧ ಬಳಸಿದರು.. ಶೇ. ೭೫ರಷ್ಟು ರೈತರು ಈ ನಾಡಿನಲ್ಲಿದ್ದರೂ ಸರಕಾರಗಳು ಅವರ ನೋವುಗಳಿಗೆ ಸ್ಪಂದಿಸದೆ ಉದ್ಯಮಿಗಳನ್ನು ಓಲೈಸುವ ಹಿನ್ನೆಲೆಯಲ್ಲಿ ಬಳಸುತ್ತಿದ್ದರು ಎಂದರು.
Sahyadri Ranga Taranga ಅಂದು ಸಂಜೆ ೬ ಗಂಟೆಗೆ ನಾಟಕ ಆರಂಭವಾಗಲಿದೆ. ಇದರಲ್ಲಿ ನಂಜುಂಡಸ್ವಾಮಿಯ ಪಾತ್ರವನ್ನು ನಿವೃತ್ತ ಪ್ರಾಚಾರ್ಯ ನಾಗಭೂಷಣ ನಿರ್ವಹಿಸುವರು. ಎಚ್ ಎಸ್ ರುದ್ರಪ್ಪ ಪಾತ್ರವನ್ನು ದಿನೇಶ್ ಬಾಯಾರ್, ಶಾಮಣ್ಣನ ಪಾತ್ರವನ್ನು ಆರ್. ನಿಖಿಲ್, ಸುಂದರೇಶ್ ಪಾತ್ರವನ್ನು ವೇದಮೂರ್ತಿ ಮತ್ತು ಗಂಗಾಧರ ಪಾತ್ರವನ್ನು ಗಂಗಾಧರ್ ಅವರೇ ನಿರ್ವಹಿಸುವರು. ನಾಟಕಕ್ಕೆ ೫೦ ರೂ. ಗೌರವ ಪ್ರವೇಶವಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಸಹಕರಿಸಬೇಕೆಂದು ಕೋರಿದರು.
ಪತ್ರಿಕಾಗೋಷ್ಟಿಯಲ್ಲಿ ನಾಗಭೂಷಣ, ಕೆ ಟಿ ಗಂಗಾಧರ್, ತಿಪ್ಪಣ್ಣ, ಚಂದ್ರೇಗೌಡ, ಕೆ ಜಿ ವೆಂಕಟೇಶ್ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿ ಒಡ್ಡುವ ಆಸೆ ಆಮಿಷಗಳಿಗೆ ಒಳಗಾಗಬೇಡಿ- ಸಿದ್ಧರಾಮಯ್ಯ

CM Siddharamaih ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...