Thursday, March 26, 2026
Thursday, March 26, 2026

Uttarakhand Tragedy ಉತ್ತರಾಖಂಡ್ ಚಾರಣಕ್ಕೆ ತೆರಳಿದ್ದದಂಪತಿಗಳ ದಾರುಣ ಮರಣ

Date:

Uttarakhand Tragedy ಉತ್ತರಾಖಂಡ ಸಹಸ್ರ ತಾಳ್ ಶಿಖರದ ಚಾರಣಕ್ಕೆ ತೆರಳಿದ್ದ ಹುಬ್ಬಳ್ಳಿ ಮೂಲದ ಮುಂಗುರವಾಡಿ ದಂಪತಿ ಹವಾಮಾನ ವೈಪರೀತ್ಯದಿಂದ ದುರಂತ ಅಂತ್ಯ ಕಂಡಿದ್ದಾರೆ.
ಕರ್ನಾಟಕದಿಂದ ತೆರಳಿದ್ದ ೨೨ ಚಾರಣಿಗರ ತಂಡವೊಂದು ಉತ್ತರಾಖಂಡದ ಎತ್ತರದ ಸಹಸ್ರ ತಾಳ್ ಮಯಳಿ ಪ್ರದೇಶಕ್ಕೆ ತೆರಳಿ, ಅಲ್ಲಿಂದ ಚಾರಣ ಆರಂಭಿಸಿತ್ತು. ಚಾರಣದ ಗಮ್ಯಸ್ಥಾನವನ್ನು ತಲುಪಿದ ತಂಡ ಮತ್ತೆ ಶಿಬಿರಕ್ಕೆ ಹಿಂತಿರುಗಲು ಮುಂದಾಗಿದೆ. ಆಗ ಮಾರ್ಗಮಧ್ಯೆ ನಡೆಯಬಾರದ ಘಟನೆ ನಡೆದು ಹೋಗಿದೆ. ಹಿಮಗಾಳಿಯಿಂದಾಗಿ ಹವಾಮಾನ ಸಂಪೂರ್ಣ ಹದಗೆಟ್ಟು, ಎಲ್ಲ ಚಾರಣಿಗರು ಅಪಾಯಕ್ಕೆ ಸಿಲುಕಿದ್ದಾರೆ. ಇದರಲ್ಲಿ ೯ ಚಾರಣಿಗರು ಮೃತಪಟ್ಟಿದ್ದು, ೧೩ ಜನರನ್ನು ರಕ್ಷಣೆ ಮಾಡಲಾಗಿದೆ. ಇದುವರೆಗೆ ಐವರ ಮೃತದೇಹ ಮಾತ್ರ ಸಿಕ್ಕಿದ್ದು, ಉಳಿದವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
ಚಾರಣಕ್ಕೆ ಹೋದ ೨೨ ಮಂದಿಯ ಪೈಕಿ ಹುಬ್ಬಳ್ಳಿ ಮೂಲದ ವಿನಾಯಕ ಮುಂಗುರವಾಡಿ ಹಾಗೂ ಸುಜಾತಾ ಮುಂಗುರವಾಡಿ ಕೊನೆಯುಸಿರೆಳೆದಿದ್ದಾರೆ. ಅಕ್ಟೋಬರ್ ೩ರಂದೇ (ಇಸವಿ ಬೇರೆ) ಇಬ್ಬರ ಜನನವಾಗಿತ್ತು. ಅದೇ ತರನಾಗಿ ಜೂನ್ ೪ರಂದು ಒಟ್ಟಿಗೆ ಮೃತಪಟ್ಟಿರುವುದು ಕ್ರೂರ ವಿಧಿಯಾಟವೇ ಸರಿ.
Uttarakhand Tragedy ಮೃತರಿಬ್ಬರೂ ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ೧೯೯೪ರಲ್ಲಿ ಇಂಜಿನಿಯರಿಂಗ್ ಪದವಿ ಪಡೆದಿದ್ದರು. ವಿನಾಯಕ ಮೆಕ್ಯಾನಿಕಲ್ ವಿಭಾಗದಿಂದ ಚಿನ್ನದ ಪದಕ ಪಡೆದಿದ್ದರು. ಆರಂಭಿಕ ದಿನಗಳಲ್ಲಿ ಹುಬ್ಬಳ್ಳಿಯ ಉಣಕಲ್‌ನಲ್ಲಿ ವಾಸವಿದ್ದ ಇಬ್ಬರೂ ಉದ್ಯೋಗ ಅರಸಿಕೊಂಡು ೧೯೯೬ರಲ್ಲಿ ಬೆಂಗಳೂರಿಗೆ ತೆರಳಿದ್ದರು. ಖಾಸಗಿ ಕಂಪನಿಯಲ್ಲಿ ಉದ್ಯೋಗ ಮಾಡುತ್ತಲೇ `ಉತ್ತರ ಕರ್ನಾಟಕ ಸ್ನೇಹಲೋಕ ಟ್ರಸ್ಟ್’ ಎಂಬ ಸಂಸ್ಥೆಯನ್ನು ಹುಟ್ಟುಹಾಕಿ ಕಳೆದ ೧೬ ವರ್ಷಗಳಿಂದ ಜನರ ಸೇವೆಯಲ್ಲಿ ತೊಡಗಿದ್ದರು.
ಪ್ರತಿವರ್ಷ ಚಾರಣ ಮಾಡುವ ಹವ್ಯಾಸ ಹೊಂದಿದ್ದ ಇವರಿಗೆ ಈ ಬಾರಿ ಚಾರಣಕ್ಕೆ ಕೆಎಂಎ (ಕರ್ನಾಟಕ ಮೌಂಟೆನ್ ಅಸೋಸಿಯೇಷನ್) ಅವಕಾಶ ನೀಡಿರಲಿಲ್ಲ. ಆದರೂ ಬೆಂಬಿಡದೇ ಪ್ರಯತ್ನಪಟ್ಟು ಟಿಕೆಟ್ ಗಿಟ್ಟಿಸಿಕೊಂಡಿದ್ದ ಅವರು ಘೋರ ಅಂತ್ಯ ಕಂಡಿದ್ದಾರೆ.
ಖಾಸಗಿ ಕಂಪನಿಯಲ್ಲಿ ನೌಕರಿ ಮಾಡುತ್ತಿರುವ ಪುತ್ರಿ ಅದಿತಿ ಹಾಗೂ ಇಂಜಿನಿಯರಿಂಗ್ ಓದುತ್ತಿರುವ ಪುತ್ರ ಇಶಾನ್ ಅವರನ್ನೂ ಚಾರಣಕ್ಕೆ ಕರೆದೊಯ್ಯುವ ಯೋಜನೆಯಲ್ಲಿದ್ದ ದಂಪತಿಗೆ ಸಿಕ್ಕಿದ್ದು ಎರಡು ಟಿಕೆಟ್ ಮಾತ್ರ. ಹೀಗಾಗಿ ಮಕ್ಕಳನ್ನು ಬಿಟ್ಟು ಇಬ್ಬರೇ ಅಲ್ಲಿಗೆ ತೆರಳಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prabhuling Kavalikatti ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ- ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ತಡೆ...

MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...