Monday, August 3, 2026
Monday, August 3, 2026

E. Tukaram ಸಂಸದರಾಗಿ ಆಯ್ಕೆಯಾದ ತುಕಾರಾಂ ತಮ್ಮ ಶಾಸಕ ಸ್ಥಾನಕ್ಕೆ ಮಗಳಿಗೆ ಟಿಕೆಟ್ ಬೇಡಿಕೆ

Date:

E. Tukaram ನೂತನ ಸಂಸದರಾಗಿ ಆಯ್ಕೆಯಾಗಿರುವ ಇ ತುಕಾರಾಂ ಸಂಡೂರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ದರೆ ಉಪಚುನಾವಣೆಗೆ ಮಗಳಿಗೆ ಟಿಕೆಟ್ ಕೊಡಬೇಕೆಂದು ಮನವಿ ಮಾಡಿದ್ದಾರೆ .

ತುಕಾರಾಮ್ ಅವರ ಅನುಯಾಯಿಗಳು ಮತ್ತು ಬೆಂಬಲಿಗರು ಕೆಲವು ದಿನಗಳ ಹಿಂದೆ ನಾಗೇಂದ್ರ ಅವರ ರಾಜೀನಾಮೆಯ ಸೂಚನೆಯನ್ನು ಪಡೆದ ನಂತರ, ಸಭೆ ನಡೆಸಿ ತಮ್ಮ ನಾಯಕನನ್ನು ಸಂಪುಟಕ್ಕೆ ಸೇರ್ಪಡೆ ಮಾಡಬೇಕೆಂದು ಒತ್ತಾಯಿಸಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚೆಗಷ್ಟೇ ನಡೆದ ಲೋಕಸಭೆ ಚುನಾವಣೆಯಲ್ಲಿ ತುಕಾರಾಂ ಅವರು ಬಳ್ಳಾರಿಯಲ್ಲಿ ಬಿಜೆಪಿಯ ಬಿ ಶ್ರೀರಾಮುಲು ಅವರನ್ನು ಭಾರಿ ಅಂತರದಿಂದ ಸೋಲಿಸಿದ್ದಾರೆ. ತುಕಾರಾಂ ಅವರು ಇದೀಗ ಬಳ್ಳಾರಿ ಜಿಲ್ಲೆಯನ್ನು ಪ್ರತಿನಿಧಿಸುವ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದಾರೆ.

E. Tukaram ಒಂದು ವೇಳೆ ಕಾಂಗ್ರೆಸ್‌ ಹೈಕಮಾಂಡ್‌ ಸಚಿವ ಸಂಪುಟದ ಬೇಡಿಕೆಯನ್ನು ಈಡೇರಿಸಿದರೆ, ಉಪಚುನಾವಣೆಯಲ್ಲಿ ಸ್ಪರ್ಧಿಸಲು ಪುತ್ರಿ ಸೌಪರ್ಣಿಕಾಗೆ ಬಳ್ಳಾರಿ ಲೋಕಸಭೆ ಟಿಕೆಟ್‌ ಕೇಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ತುಕಾರಾಂ ಅವರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಹಿಂದೇಟು ಹಾಕಿದ್ದರು. ಆದರೆ ನಾಗೇಂದ್ರ ಅವರ ಮನವೊಲಿಸಿ, ಶ್ರೀರಾಮುಲು ವಿರುದ್ಧ ಗೆಲ್ಲಿಸುವುದಾಗಿ ಭರವಸೆ ನೀಡಿದರು.

ತುಕಾರಾಂ ಅವರು ನಾಲ್ಕು ಬಾರಿ ಶಾಸಕರಾಗಿದ್ದು, ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ (2018-19) ಸಚಿವರಾಗಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...