Wednesday, October 2, 2024
Wednesday, October 2, 2024

Lakshadweep ಲಕ್ಷದ್ವೀಪದಲ್ಲಿ ಎನ್ ಡಿ ಎ ಬೆಂಬಲಿಸದ ಮತದಾರ

Date:

Lakshadweep ಲಕ್ಷದ್ವೀಪ ಲೋಕಸಭಾ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ಹೀನಾಯವಾಗಿ ಸೋಲನ್ನು ಕಂಡಿದ್ದು, ಮೋದಿ ಲಕ್ಷದ್ವೀಪಕ್ಕೆ ಭೇಟಿ ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎನ್ನುವುದು ಕಂಡು ಬರುತ್ತಿದೆ.

ಮುಸ್ಲಿಂ ಮತದಾರರೇ ನಿರ್ಣಾಯಕವಾಗಿರುವ ಲಕ್ಷದ್ವೀಪ ಲೋಕಸಭಾ ಕ್ಷೇತ್ರದಲ್ಲಿ ಮುಸ್ಲಿಂ ವಿದ್ವಾಂಸರನ್ನು ಕಣಕ್ಕಿಳಿಸಿದ ಪ್ರಧಾನಿ ನರೇಂದ್ರ ಮೋದಿ ಮುಸ್ಲಿಂ ಮತಬ್ಯಾಂಕ್‌ಗಳನ್ನು ತನ್ನತ್ತ ಸೆಳೆಯಲು ಯತ್ನಿಸುತ್ತಿದ್ದರು, ಆದರೆ ಎನ್‌ಡಿಎ ಅಭ್ಯರ್ಥಿ ಕೇವಲ 201 ಮತಗಳನ್ನು ಪಡೆಯುವ ಮೂಲಕ ಲಕ್ಷದ್ವೀಪ ದ್ವೀಪಸಮೂಹದಲ್ಲಿ ಎನ್‌ಡಿಎಗೆ ಮುಖಭಂಗವಾಗಿದೆ.

ಲಕ್ಷದ್ವೀಪದಲ್ಲಿ 2019ರಲ್ಲಿ ಬಿಜೆಪಿ ಅಭ್ಯರ್ಥಿ 125 ಮತಗಳಿಸಿದ್ದರು. ಆದರೆ ಈ ಬಾರಿ ಪ್ರಧಾನಿ ಭೇಟಿ ನೀಡಿದ್ದರಿಂದ ಎನ್‌ಡಿಎ ಅಭ್ಯರ್ಥಿಗೆ ಹೆಚ್ಚಿನ ಮತ ಸಿಗುವ ಭರವಸೆ ಬಿಜೆಪಿ ಪಾಲಳಯದಲ್ಲಿತ್ತು. ಆದರೆ ಇದು ಸುಳ್ಳಾಗಿದೆ.
ಹಾಲಿ ಸಂಸದ ಎನ್‌ಸಿಪಿ (ಎಸ್‌ಪಿ)ಯ ಮೊಹಮ್ಮದ್ ಫೈಜಲ್ ವಿರುದ್ಧ 2,647 ಮತಗಳ ಮುನ್ನಡೆಯೊಂದಿಗೆ ಕಾಂಗ್ರೆಸ್‌ನ ಮಾಜಿ ಸಂಸದ ಮುಹಮ್ಮದ್ ಹಮ್ದುಲ್ಲಾ ಸಯೀದ್ ಕ್ಷೇತ್ರದಲ್ಲಿ ಗೆಲುವನ್ನು ಸಾಧಿಸಿದ್ದಾರೆ.

ಸುಮಾರು 49,000 ಮತದಾರರನ್ನು ಹೊಂದಿರುವ ದ್ವೀಪಸಮೂಹದಲ್ಲಿ ಎನ್‌ಡಿಎ ಅಭ್ಯರ್ಥಿ ಎನ್‌ಸಿಪಿ(ಎಪಿ)ಯ ಯೂಸುಫ್ ಟಿ ಪಿ 201 ಮತಗಳೊಂದಿಗೆ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ.
ಲಕ್ಷದ್ವೀಪದಲ್ಲಿ ಲೆಪ್ಟಿನೆಂಟ್‌ ಗವರ್ನರ್‌ ಪ್ರಫುಲ್ ಖೋಡಾ ಪಟೇಲ್ ತಂದಿದ್ದ ಆಡಳಿತದ ಸುಧಾರಣೆಗಳ ವಿರುದ್ಧ ಪ್ರತಿಭಟನೆ ನಡೆದಿತ್ತು.

2021ರಲ್ಲಿ ‘ಲಕ್ಷದ್ವೀಪ ಉಳಿಸಿ’ ಅಭಿಯಾನವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ನೂತನ ಸುಧಾರಣೆಗಳು ಜನರ ಜೀವನೋಪಾಯದ ಮೇಲೆ ಪರಿಣಾಮ ಬೀರಬಹುದು ಎಂದು ಜನರು ಭಯಪಟ್ಟಿದ್ದರು ಮತ್ತು ದ್ವೀಪಸಮೂಹವನ್ನು ಕೇಸರಿಮಯಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದರು.

Lakshadweep ಜನವರಿಯಲ್ಲಿ ಸ್ವತಃ ಪ್ರಧಾನಿ ನರೇಂದ್ರ ಮೋದಿ ಲಕ್ಷದ್ವೀಪಕ್ಕೆ ಭೇಟಿ ನೀಡಿ ಜನರೊಂದಿಗೆ ಸಂವಹನ ನಡೆಸಿದ್ದರು. ಲಕ್ಷದ್ವೀಪದ ಮುಸ್ಲಿಂ ಮಹಿಳೆಯರೊಂದಿಗೆ ಮೋದಿ ಸಂವಾದ ನಡೆಸಿದ ವಿಡಿಯೋ ತುಣುಕನ್ನು ಬಿಜೆಪಿ ಪಾಳಯಗಳು ವ್ಯಾಪಕವಾಗಿ ವೈರಲ್‌ ಮಾಡಿದ್ದವು.

ಎನ್‌ಸಿಪಿಯ ವಿಭಜನೆ ಮತ್ತು ಎನ್‌ಸಿಪಿ(ಎಪಿ) ಬಣ ಎನ್‌ಡಿಎಗೆ ಸೇರ್ಪಡೆಗೊಂಡ ನಂತರ, ಲಕ್ಷದ್ವೀಪ ಸ್ಥಾನವನ್ನು ಎನ್‌ಸಿಪಿ (ಎಪಿ) ಬಣಕ್ಕೆ ನೀಡಲಾಯಿತು. ಪಕ್ಷವು ಮುಸ್ಲಿಂ ವಿದ್ವಾಂಸ ಯೂಸುಫ್ ಟಿ ಪಿ ಅವರನ್ನು ಅಭ್ಯರ್ಥಿಯನ್ನಾಗಿ ನಿಲ್ಲಿಸಿತ್ತು.

ಆದರೆ ಈ ಪ್ರಯತ್ನಗಳು ಮುಸ್ಲಿಂ ಮತದಾರರನ್ನು ಎನ್‌ಡಿಎಗೆ ಸೆಳೆಯಲು ಸಹಾಯ ಮಾಡಲಿಲ್ಲ.
ಲಕ್ಷದ್ವೀಪವು ಎನ್‌ಸಿಪಿ-ಕಾಂಗ್ರೆಸ್ ನಡುವೆ ನೇರ ಹಣಾಹಣಿ ನಡೆಯುತ್ತದೆ. ಈ ಬಾರಿ ಗೆದ್ದಿರುವ ಮುಹಮ್ಮದ್ ಹಮ್ದುಲ್ಲಾ ಸಯೀದ್ ಅವರು ಲಕ್ಷದ್ವೀಪದಲ್ಲಿ ಸುದೀರ್ಘ ಅವಧಿಯ ಸಂಸದರಾಗಿರುವ ಕಾಂಗ್ರೆಸ್ ನಾಯಕ ಪಿ ಎಂ ಸಯೀದ್ ಅವರ ಪುತ್ರರಾಗಿದ್ದಾರೆ.

ಪಿ ಎಂ ಸಯೀದ್ 2004ರ ಚುನಾವಣೆಯಲ್ಲಿ ಸೋತಿದ್ದರು ಮತ್ತು 2005ರಲ್ಲಿ ನಿಧನರಾಗಿದ್ದಾರೆ. 2009ರ ಚುನಾವಣೆಯಲ್ಲಿ ಅವರ ಮಗ ಸ್ಥಾನವನ್ನು ಗೆದ್ದರು. ಆದರೆ 2014 ಮತ್ತು 2019ರ ಚುನಾವಣೆಯಲ್ಲಿ ಎನ್‌ಸಿಪಿಯ ಮೊಹಮ್ಮದ್ ಫೈಜಲ್ ಈ ಸ್ಥಾನವನ್ನು ಗೆದ್ದುಕೊಂಡಿದ್ದರು. ಕಳೆದ ವರ್ಷ ಕೊಲೆ ಯತ್ನ ಪ್ರಕರಣದಲ್ಲಿ ಫೈಝಲ್ ಅವರನ್ನು ಅನರ್ಹಗೊಳಿಸಿದ್ದರಿಂದ ಸುದ್ದಿಯಾಗಿದ್ದರು.

ಆದರೆ ಸುಪ್ರೀಂ ಕೋರ್ಟ್ ಶಿಕ್ಷೆಯನ್ನು ಅಮಾನತುಗೊಳಿಸಿದ ನಂತರ ಅವರ ಅಮಾನತು ರದ್ದುಗೊಳಿಸಲಾಗಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chamber Of Commerce ಗಾಂಧೀಜಿ & ಶಾಸ್ತ್ರೀಜಿ ಯುವಜನರಿಗೆ ಆದರ್ಶ- ಚಂದ್ರಶೇಖರಯ್ಯ

Chamber Of Commerce ಗಾಂಧೀಜಿ ಅವರ ತತ್ವ ಆದರ್ಶಗಳು ಎಲ್ಲರಿಗೂ ಮಾರ್ಗದರ್ಶನ...

Gangotri College ವಿದ್ಯಾರ್ಥಿಗಳು ಶಿಕ್ಷಣದ ಸಂಗಡ ಮಾನವೀಯ ಮೌಲ್ಯ ಬೆಳೆಸಿಕೊಳ್ಳಬೇಕು- ಶ್ರೀ ಚನ್ನಬಸವಶ್ರೀ

Gangotri College ಗ್ರಾಮೀಣ ಪ್ರದೇಶದ ಜನರ ಜೀವನ ಕ್ರಮ ಅರಿಯುವ ಜೊತೆಗೆ...

CM Siddharamaih ಸಿದ್ಧರಾಮಯ್ಯ ರಾಜಿನಾಮೆ ಬೇಡ.ಬೆಂಬಲಿಸಿ ಜನಜಾಥಾ-‘ಅಹಿಂದ’ ಮಹೇಶ್

CM Siddharamaih ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುವುದು ಬೇಡ....