Monday, May 4, 2026
Monday, May 4, 2026

Bhadravati Police ಅಡಿಕೆ ತಟ್ಟೆ ತಯಾರಿಕಾ ಘಟಕದಲ್ಲಿ ಲಕ್ಷಾಂತರ ಮೌಲ್ಯದ ಸಾಮಗ್ರಿ ಕಳವು

Date:

Bhadravati Police ಮಾಲೀಕ ಕಾರ್ಖಾನೆಯಿಂದ ಹೊರ ಹೋಗಿದ್ದ ಸಂದರ್ಭ ಅಡಿಕೆ ತಟ್ಟೆ ತಯಾರಿಸುವ ಫ್ಯಾಕ್ಟರಿಯಲ್ಲಿ ಲಕ್ಷಾಂತರ ಮೌಲ್ಯದ ವಸ್ತುಗಳನ್ನು ಕಳ್ಳತನ ಮಾಡಿ ನೌಕರರು ಪರಾರಿಯಾಗಿದ್ದಾರೆ.

ನೇಪಾಳದ ಕಾರ್ಮಿಕರು
ಚಿದಾನಂದ ಎಂಬುವವರು ಭದ್ರಾವತಿ ತಾಲೂಕು ಗೌಡರಹಳ್ಳಿಯ ತೋಟವೊಂದರಲ್ಲಿ ಅಡಿಕೆ ತಟ್ಟೆ ತಯಾರಿಸುವ ಫ್ಯಾಕ್ಟರಿ ಯಲ್ಲಿ ಕೆಲಸ ಮಾಡುತ್ತಿದ್ದರು.

ಇತ್ತೀಚೆಗೆ 40 ಸಾವಿರ ರೂ. ಹಣ ನೀಡುವಂತೆ ಕಾರ್ಮಿಕರು ಚಿದಾನಂದ ಬಳಿ ಕೇಳಿದ್ದರು. ಹಣಕಾಸು ಸಮಸ್ಯೆಯಿಂದ ಚಿದಾನಂದ ಹಣ ನೀಡಿರಲಿಲ್ಲ. ಇನ್ನೊಂದೆಡೆ ಕರೆಂಟ್‌ ಬಿಲ್‌ ಪಾವತಿಸದ ಹಿನ್ನೆಲೆ ಜೂ.5ರಂದು ಮೆಸ್ಕಾಂ ಸಿಬ್ಬಂದಿ ವಿದ್ಯುತ್‌ ಕಡಿತಗೊಳಿಸಿದ್ದರು.

ಕರೆಂಟ್‌ ಬಿಲ್‌ ಪಾವತಿಸಲು ಹಣ ಹೊಂದಿಸಿಕೊಂಡು ಭದ್ರಾವತಿಗೆ ಜೂ.5 ರಂದು ತೆರಳಿದ್ದರು. ರಾತ್ರಿ 10 ಗಂಟೆಗೆ ಹಿಂತಿರುಗಿದಾಗ, ಯಾವುದೋ ವಾಹನ ಫ್ಯಾಕ್ಟರಿ ಬಳಿ ಬಂದು ಹೋಗಿರುವುದು ಚಿದಾನಂದಗೆ ಗೊತ್ತಾಗಿದೆ. ಫ್ಯಾಕರಿಗೆ ತೆರಳಿ ಮೊಬೈಲ್‌ ಟಾರ್ಚ್‌ನಲ್ಲಿ ಪರಿಶೀಲಿಸಿದಾಗ ಒಂದು ಲ್ಯಾಪ್‌ಟಾಪ್‌, 10 ಬ್ಯಾಗ್‌ ಅಡಿಕೆ ತಟ್ಟೆ, ಅಡಿಕೆ ಹಾಳೆ ತಯಾರಿಸುವ 12 ಅಚ್ಚುಗಳು ನಾಪತ್ತೆಯಾಗಿದ್ದವು.

Bhadravati Police ಕೆಲಸ ಮಾಡುತ್ತಿದ್ದ ನೇಪಾಳ ಮೂಲದ ದಿನೇಶ, ಆತನ ಪತ್ನಿ ನಿರ್ಮಲಾ, ಪ್ರಕಾಶ್‌, ಆತನ ಪತ್ನಿ ಮನ್ಸೂರ ಕಾಣೆಯಾಗಿದ್ದರು.

ಘಟನೆ ಸಂಬಂಧ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...