Monday, August 3, 2026
Monday, August 3, 2026

Bharat Scouts and Guides ಸಾರ್ವಜನಿಕರಿಗೆ ಸಂಕಷ್ಟದಲ್ಲಿ ನೆರವಾಗಲು ಸ್ಕೌಟ್ ತರಬೇತಿ ನೀಡುತ್ತದೆ-ಜಿ.ವಿಜಯ್ ಕುಮಾರ್

Date:

Bharat Scouts and Guides ಮಕ್ಕಳು ವಿದ್ಯಾಭ್ಯಾಸದೊಂದಿಗೆ ಸಾಹಸ ಪ್ರವೃತಿಯನ್ನು ಬೆಳೆಸಿಕೊಳ್ಳಬೇಕು. ಸ್ನೇಹ, ಸೇವೆ, ಸಾಹಸ, ಸಂಪರ್ಕ ವಿದ್ಯಾರ್ಥಿಗಳಿಗೆ ಉತ್ತಮ ಪ್ರಜೆಯನ್ನಾಗಿ ಮಾಡಲು ಸಹಕಾರಿ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯಕುಮಾರ್ ಹೇಳಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ಕೌಟ್ ಅಂಡ್ ಗೈಡ್ಸ್, ರೋವರ್ಸ್ ಮತ್ತು ರೆಂಜರ್ಸ್ ವಿದ್ಯಾರ್ಥಿಗಳ ಚಾರಣಕ್ಕೆ ಚಾಲನೆ ನೀಡಿ ಮಾತನಾಡಿ, ಸಾರ್ವಜನಿಕರು ಸಂಕಷ್ಟದಲ್ಲಿ ಇದ್ದಾಗ ಸಹಕರಿಸಲು ಅನುಕೂಲ ವಾಗುವಂತಹ ಹಲವು ಸಹಾಯಗಳನ್ನು ಹೇಳಿಕೊಡಲಾಗುತ್ತದೆ ಎಂದು ತಿಳಿಸಿದರು.
ಯೂತ್ ಹಾಸ್ಟೆಲ್ ಚೇರ್ಮನ್ ವಾಗೇಶ್ ಮಾತನಾಡಿ, ಸಾರ್ವಜನಿಕರಿಗೆ ನಮ್ಮ ಸಹ್ಯಾದ್ರಿ ಶ್ರೇಣಿಯಲ್ಲಿ ಆಗಾಗ ಚಾರಣ ಹಾಗೂ ಈಗಾಗಲೇ ಸಾವಿರಾರು ಸದಸ್ಯರಿಗೆ ಹಿಮಾಲಯ ಚಾರಣ ಏರ್ಪಡಿಸಲಾಗಿದೆ. ಕಾಲೇಜು ವಿದ್ಯಾರ್ಥಿಗಳಿಗೆ ಸಾಹಸ ಪ್ರವೃತ್ತಿ ಮೈಗೂಡಿಸಿಕೊಳ್ಳಲು ಚಾರಣ ಏರ್ಪಡಿಸಲಾಗಿದೆ ಎಂದರು.
Bharat Scouts and Guides ಭಾರತ ಸ್ಕೌಟ್ಸ್ ಅಂಡ್ ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ರಾಜೇಶ್ ಅವಲಕ್ಕಿ ಮಾತನಾಡಿ, ಸೇವಾ ವೇಷಧಾರಿಗಳಾದ ತಮ್ಮ ಮೇಲೆ ಸಾರ್ವಜನಿಕರ ಗಮನವಿರುತ್ತದೆ. ಎಲ್ಲರೂ ಶಿಸ್ತಿನಿಂದ ನಡೆದುಕೊಳ್ಳಬೇಕು. ಸಾಹಸ ಪ್ರವೃತ್ತಿಗಳು ನಮ್ಮ ಜೀವನದ ಅವಿಭಾಜ್ಯ ಅಂಗವಾಗಬೇಕು. ಇದರಿಂದ ಆತ್ಮವಿಶ್ವಾಸ ವೃದ್ಧಿಸುತ್ತದೆ ಎಂದು ತಿಳಿಸಿದರು.
ಪೂರ್ಣಿಮಾ ಅವರು ಪ್ರಾರ್ಥಿಸಿದರು. ಪವಿತ್ರಾ ಸ್ವಾಗತಿಸಿದರು. ಜಯಕಿರ್ತಿ ವಂದನಾರ್ಪಣೆ ನಡೆಸಿಕೊಟ್ಟರು. ಮಲ್ಲಿಕಾರ್ಜುನ್ ಕಾನೂರ್ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಪ್ರಾಚಾರ್ಯ ಡಾ. ಚನ್ನೇಶ್, ಡಾ. ಚಂದ್ರಶೇಖರ್, ಗಂಧರ್ವ, ಸುರೇಶ, ಗಿರೀಶ್ ಕಾಮತ್, ಹರೀಶ್ ಪಾಟೀಲ್ ಮುಂತಾದವರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...